ಬೆಳಗಾವಿ ಬೆಂಕಿ ಬೆಂಗ್ಳೂರಿಂದ ಯುರೋಪ್ಗೆ ಹೊತ್ತಿಕೊಳ್ಳಲಿದೆ:ಶೆಟ್ಟರ್
Team Udayavani, Sep 5, 2018, 2:48 PM IST
ಹುಬ್ಬಳ್ಳಿ : ಬೆಳಗಾವಿಯ ಲಕ್ಷ್ಮಿ- ಜಾರಕಿಹೊಳಿ ಅಸಮಾಧಾನದ ಬೆಂಕಿ ಬೆಂಗಳೂರಿಗೆ ಬಂದಿದ್ದು ,ಅದು ಯುರೋಪ್ಗೂ ಹೊತ್ತಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಒಗಟಾಗಿ ಕಾಂಗ್ರೆಸ್ ಮತ್ತು ಮೈತ್ರಿ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗ್ಗಿನಿಂದ ಸಂಜೆಯ ವರೆಗೆ ಲಕ್ಷ್ಮಿ-ಜಾರಕಿಹೊಳಿ ಸಮರವನ್ನು ಕೇಳುತ್ತಿದ್ದೇವೆ. ಶೀಘ್ರದಲ್ಲಿ ಮೈತ್ರಿ ಸರ್ಕಾರ ಪತನಗೊಳ್ಳಲಿದ್ದು ,ಬಿಜೆಪಿ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ ಎಂದರು.
ಕೆಶಿಪ್ ಕಚೇರಿಯನ್ನು ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರಿಸಿದ್ದಕ್ಕೆ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರ ಉತ್ತರ ಕರ್ನಾಟಕವನ್ನ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಕಿಡಿ ಕಾರಿದರು.
ಸಿದ್ದರಾಮಯ್ಯ ಯುರೋಪ್ ಪ್ರವಾಸಕ್ಕೆ ತೆರಳಿರುವ ಕಾರಣ ಶೆಟ್ಟರ್ ಅವರು ಅಸಮಾಧಾನದ ಬೆಂಕಿ ಯುರೋಪ್ಗೂ ಹೊತ್ತಿಕೊಳ್ಳಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ
Ratan Tata; ಅಡುಗೆಯವರು, ನಾಯಿಗೂ ವಿಲ್ ಬರೆದಿರುವ ಟಾಟಾ!
Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ
T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್ ವಿಜಯ್ಕುಮಾರ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.