![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Oct 11, 2022, 11:17 PM IST
ಬೆಂಗಳೂರು: ಕುಮ್ಕಿ, ಕಾನೆ, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ದಶಕಗಳಿಂದ ಸಾಗುವಳಿ ಮಾಡುತ್ತಿರುವ ಅರ್ಹರಿಗೆ ಭೂಮಿ ಮಂಜೂರು ಮಾಡುವ ಸಂಬಂಧ ಕಾನೂನು ತಿದ್ದುಪಡಿಗೆ ಅಭಿಪ್ರಾಯ ಸಲ್ಲಿಸುವಂತೆ ಸಂಪುಟ ಉಪಸಮಿತಿ ಕಾನೂನು ಇಲಾಖೆಗೆ ನಿರ್ದೇಶನ ನೀಡಿದೆ.
ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಭೆಯ ಅನಂತರ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಮಲೆನಾಡು ಸೇರಿ ರಾಜ್ಯಾದ್ಯಂತ 60ರಿಂದ 70 ವರ್ಷ ಬಡ ರೈತರು ಸರಕಾರಿ ಭೂಮಿ, ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ.
ನ್ಯಾಯಾಲಯಗಳು ಅರಣ್ಯ ಪ್ರದೇಶವೆಂದು ಘೋಷಿಸಿದ್ದರೂ ಅಲ್ಲಿ ಅಡಿಕೆ, ತೆಂಗಿನ ಮರ ಬೆಳೆದಿವೆ. ದಶಕಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವವರಿಗೆ ಭೂಮಿ ಮಂಜೂರು ಮಾಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ. ಇದಕ್ಕಾಗಿ ಕಾನೂನು ತಿದ್ದುಪಡಿ ಆಗಬೇಕಿದ್ದು ಪರಾಮರ್ಶೆ ನಡೆಸಿ ಅಭಿಪ್ರಾಯ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು.
ಸಾಗುವಳಿದಾರರು ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ. ಈಗಾಗಲೇ ಅರ್ಜಿ ಸಲ್ಲಿಸಿದವರು ಹಾಗೂ ತಿರಸ್ಕೃತ ಅರ್ಜಿಗಳನ್ನು ಪರಿಗಣಿಸಿ ಅರ್ಹರಿಗೆ ಮಂಜೂರು ಮಾಡಲಾಗುವುದು. ರಾಜ್ಯಾದ್ಯಂತ ಲಕ್ಷಾಂತರ ಎಕರೆ ಭೂಮಿಯಲ್ಲಿ ಈ ರೀತಿ ಸಾಗುವಳಿಯಾಗಿದ್ದು, ಬಡ ರೈತರಿಗೆ ನೆರವಾಗಲು ತೀರ್ಮಾನಿಸಲಾಗಿದೆ ಎಂದರು. ಗೋಮಾಳ, ಗಾಯರಾಣ, ಹುಲ್ಲುಬನ್ನಿ, ಸೊಪ್ಪಿನಬೆಟ್ಟ ಇತರ ಗ್ರಾಮೀಣ ಪ್ರದೇಶದ ಸರಕಾರಿ ಭೂಮಿ ಮಂಜೂರು ಮಾಡುವ ಸಂಬಂಧ ನೀತಿ ರೂಪಿಸಲು ಸಂಪುಟ ಉಪ ಸಮಿತಿ ರಚನೆಯಾಗಿತ್ತು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.