![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jun 25, 2019, 3:00 AM IST
ಎಚ್.ಡಿ.ಕೋಟೆ: ಸಾಮಾಜಿಕ ವಲಯಾರಣ್ಯ ವ್ಯಾಪ್ತಿಯ ಟೈಗರ್ಬ್ಲಾಕ್ ಸಮೀಪದ ಜಮೀನೊಂದರ ಬಳಿ ಮತ್ತೊಂದು ಹುಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಸೋಮವಾರ ಬೆಳಕಿಗೆ ಬಂದಿದೆ.
ಇದರಿಂದಾಗಿ ವಾರದ ಅಂತರದಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಎರಡು ಹುಲಿಗಳು ಸಾವನ್ನಪ್ಪಿದಂತಾಗಿದೆ. ತಾಲೂಕಿನ ಬುದನೂರು, ಕಲ್ಲಹಟ್ಟಿ, ಕೆ.ಎಡತೊರೆ, ಅಣ್ಣೂರು, ಹೊಸಹಳ್ಳಿ, ಟೈಗರ್ ಬ್ಲಾಕ್ ಗ್ರಾಮಗಳ ಅಂಚಿನಲ್ಲಿ ಆಗಾಗ ಕಾಣಿಸಿಕೊಂಡು ದನಕರುಗಳ ಮೇಲೆ ದಾಳಿ ಮಾಡಿ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಸುಮಾರು 12 ವರ್ಷ ಪ್ರಾಯದ ಹೆಣ್ಣು ಹುಲಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಗ್ರಾಮಸ್ಥರು ಎಚ್.ಡಿ.ಕೋಟೆ ಸಾಮಾಜಿಕ ವಲಯಾರಣ್ಯದ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ಸುಟ್ಟು ಹಾಕಲಾಯಿತು. ಹುಲಿಗೆ ವಯಸ್ಸಾಗಿದ್ದು, ಎರಡು ದಿನದ ಹಿಂದಷ್ಟೇ ಸಾವಿಗೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.