JDS ಮುಗಿದೇ ಹೋಯಿತು ಎನ್ನುವ ಅವರ ಕನಸಿಗೆ ಉತ್ತರ: ಎಚ್‌.ಡಿ.ಕುಮಾರಸ್ವಾಮಿ

ಸಿಎಂ, ಡಿಸಿಎಂ ದುರಹಂಕಾರಕ್ಕೆ ಉತ್ತರ

Team Udayavani, Jun 5, 2024, 12:40 AM IST

JDS ಮುಗಿದೇ ಹೋಯಿತು ಎನ್ನುವ ಅವರ ಕನಸಿಗೆ ಉತ್ತರ: ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್‌ ಸೇರಿ 20 ಅಭ್ಯರ್ಥಿಗಳು ಗೆಲ್ಲುವ ನಂಬಿಕೆ ಇತ್ತು. ದೇಶದಲ್ಲಿ ಎನ್‌ಡಿಎ 350ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಫ‌ಲಿತಾಂಶದಲ್ಲಿ ಸ್ವಲ್ಪ ಏರುಪೇರಾಗಿದೆ. ಆದರೆ, ಜೆಡಿಎಸ್‌ ಮುಗಿದೆ ಹೋಯಿತು ಎನ್ನುವ ದುರಹಂಕಾರದ ಮಾತುಗಳಿಗೆ ಮತದಾರರು ಉತ್ತರ ಕೊಟ್ಟಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ ಹೊಂದಾಣಿಕೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಜೆಡಿಎಸ್‌ ರಾಜ್ಯಾಧ್ಯ ಕ್ಷರೂ ಆಗಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಮಂಗಳವಾರ ಚುನಾವಣಾ ಫ‌ಲಿತಾಂಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ರಾಯ ಚೂರು, ಕೊಪ್ಪಳ, ಬಳ್ಳಾರಿ, ಬೀದರ್‌ ಮತ್ತು ಕಲಬುರಗಿಯಲ್ಲಿ ನಾವು ಗೆಲ್ಲುವ ವಾತಾ ವರಣ ಇತ್ತು. ಚುನಾವಣೆ ನಡೆಯುವ ವೇಳೆಗೆ ಕೆಲ ಸಮಸ್ಯೆ ಆಯಿತು. ಹಲವೆಡೆ ಕಾಂಗ್ರೆಸ್‌ನ ಹಣದ ಹೊಳೆ, ಅತಿಯಾದ ಆತ್ಮವಿಶ್ವಾಸದಿಂದ ಮೈತ್ರಿ ಅಭ್ಯರ್ಥಿಗಳು ಮೈಮರೆತದ್ದು ಹಾಗೂ ಪ್ರಧಾನಿ ಮೋದಿ ಅವರ ಶ್ರಮವನ್ನು ಗೆಲುವಿನತ್ತ ಒಯ್ಯುವಲ್ಲಿ ನಮ್ಮಿಂದಲೂ ಕೆಲವೆಡೆ ತಪ್ಪುಗಳಾಗಿವೆ. ಇದನ್ನು ಸಾರ್ವಜನಿಕವಾಗಿ ಚರ್ಚಿಸುವುದಿಲ್ಲ. ಯಾರ ಮೇಲೂ ದೋಷಾರೋಪಣೆ ಮಾಡುವುದಿಲ್ಲ ಎಂದರು.

ಜೆಡಿಎಸ್‌ ಮುಗಿದೇ ಹೋಯಿತು ಎನ್ನುವ ವಾತಾವರಣವನ್ನು ಅನೇಕರು ಸೃಷ್ಟಿಸಿದ್ದರು. ಅದನ್ನು ನಮ್ಮ ಕಾರ್ಯಕರ್ತರು ಸುಳ್ಳಾಗಿಸಿದ್ದಾರೆ. ಮಂಡ್ಯ ಚುನಾವಣೆಯನ್ನು ನಾನು ನಡೆಸಿಲ್ಲ. ಬದಲಿಗೆ ಕಾರ್ಯಕರ್ತರು ಮತ್ತು ಜನತೆ ಪಕ್ಷಭೇದ ಮರೆತು ನಡೆಸಿ ಗೆಲ್ಲಿಸಿದ್ದಾರೆ. ಮಂಡ್ಯ, ಕೋಲಾರ, ಚಿತ್ರ ದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರ ದುಡಿಮೆ ಇದೆ. ತಕ್ಕ ಪ್ರತಿಫ‌ಲ ದೊರೆಯುವ ದಿನಗಳು ದೂರವಿಲ್ಲ. ಬಿಜೆಪಿ- ಜೆಡಿಎಸ್‌ನ ನೈಸರ್ಗಿಕ ಹೊಂದಾಣಿಕೆಯನ್ನು ಮತದಾರರು ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ ಎಂದರು.

ಸೂರ್ಯ ಹುಟ್ಟಿದ್ದಾನೋ ಇಲ್ವೋ?
ದುರಹಂಕಾರಕ್ಕೆ ಉತ್ತರ: ಕೆಪಿಸಿಸಿ ಅಧ್ಯಕ್ಷನಾದ ನನಗೆ ಜನತೆ 136 ಸ್ಥಾನ ಕೊಟ್ಟರು. ಕುಮಾರಸ್ವಾಮಿಯನ್ನು 19 ಸ್ಥಾನಕ್ಕೆ ಇಳಿಸಿದರು. ನಾನೇ ಒಕ್ಕಲಿಗ ನಾಯಕ ಎಂಬಂತೆ ಡಿ.ಕೆ. ಶಿವಕುಮಾರ್‌ ಹೇಳಿದ್ದರು. ಆಗ ನಾನು ಜೆಡಿಎಸ್‌ ರಾಜ್ಯಾಧ್ಯಕ್ಷನಾಗಿ ಇರಲಿಲ್ಲ. ಸಿ.ಎಂ. ಇಬ್ರಾಹಿಂ ಇದ್ದರು. ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು ಸೂರ್ಯ-ಚಂದ್ರರು ಹುಟ್ಟುವಷ್ಟೇ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಸೂರ್ಯ ಹುಟ್ಟಿದ್ದಾನೋ ಇಲ್ಲವೋ ಎಂದು ಅವರೇ ಹೇಳಬೇಕು. ಇಂತಹ ಉದ್ಧಟತನದ ಹೇಳಿಕೆ, ದುರಹಂಕಾರದ ಮಾತುಗಳಿಗೆ ಜನರೇ ಉತ್ತರ ಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

“ನಮ್ಮ ತಂತ್ರ ಯಶಸ್ವಿ’
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಾ. ಸಿ.ಎನ್‌. ಮಂಜುನಾಥ್‌ ಅವರನ್ನು ಕಣಕ್ಕಿಳಿಸಿದಾಗ, ಪಕ್ಷ ಮುಳು ಗುತ್ತದೆ ಎಂದು ಅಳಿಯನನ್ನೇ ಬಿಜೆಪಿಗೆ ಕಳುಹಿಸಿದ್ದಾರೆ ಎಂದು ಹಂಗಿಸಿದ್ದರು. ಇಲ್ಲಿ ನಮ್ಮ ತಂತ್ರ ಯಶಸ್ಸು ಕೊಟ್ಟಿದೆ. 2009ರಲ್ಲಿ ಕ್ಷೇತ್ರ ವಿಂಗಡಣೆ ಬಳಿಕ ಗ್ರಾಮಾಂತರದಲ್ಲಿ ಎರಡು ಬಾರಿ ಕಾಂಗ್ರೆಸ್‌ ಗೆಲ್ಲಲು ಬೇರೆ ಕಾರಣಗಳಿದ್ದವು. ಸೋಲಿನ ವಾತಾವರಣ ಗೊತ್ತಾಗುತ್ತಿದ್ದಂತೆ ಧೃತಿಗೆಟ್ಟು ಡಿಸಿಎಂ ಶಿವ ಕುಮಾರ್‌ ಬಾಯಿಗೆ ಬಂದಂತೆ ಮಾತನಾಡಿ ದರು. ಕುರಿ, ಕೋಳಿ, ಕೋಣ ಕಡಿದು ಶತ್ರು ಭೈರವಿ ಯಾಗ ಮಾಡಿಲ್ಲ ನಾವು ಗೆದ್ದಿಲ್ಲ ಎಂದು ತಿರುಗೇಟು ಕೊಟ್ಟರು.

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.