![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 17, 2021, 7:00 AM IST
ಬೆಳಗಾವಿ: ವಿವಾದಿತ ಮತಾಂತರ ನಿಷೇಧ ಮಸೂದೆ ಮಂಡನೆ ವಿಚಾರದಲ್ಲಿ ಆಡಳಿತ ಪಕ್ಷದಲ್ಲಿ ಜಿಜ್ಞಾಸೆ ಮುಂದುವರಿದಿದ್ದು, ಕೆಲವು ಶಾಸಕರು ಇದೇ ಆಧಿವೇಶನದಲ್ಲಿ ಮಸೂದೆ ಮಂಡನೆಗೆ ಪಟ್ಟು ಹಿಡಿದಿದ್ದರೆ, ಕೆಲವು ಶಾಸಕರು ವಿಸ್ತೃತ ಚರ್ಚೆಯ ಅನಂತರ ಮಸೂದೆ ಮಂಡನೆ ಮಾಡುವಂತೆ ಸರಕಾರಕ್ಕೆ ಸಲಹೆ ನೀಡಿದ್ದಾರೆ.
ಗೃಹ ಇಲಾಖೆ ಮಸೂದೆ ಮಂಡನೆಗೆ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ.
ಮೂಲ ಬಿಜೆಪಿ ಶಾಸಕರು ಹಾಗೂ ಸಂಘ ಪರಿವಾರದಿಂದ ಮತಾಂತರ ನಿಷೇಧ ಮಸೂದೆ ಬೆಳಗಾವಿ ಅಧಿವೇಶನದಲ್ಲೇ ಮಂಡಿಸಿ ಅಂಗೀಕಾರ ಪಡೆಯುವಂತೆ ಒತ್ತಡ ಹೇರುತ್ತಿದ್ದಾರೆಂದು ತಿಳಿದು ಬಂದಿದೆ. ಅದಕ್ಕೆ ಪೂರಕವಾಗಿ ಗೃಹ ಇಲಾಖೆ ಕರಡು ಪ್ರತಿ ಸಿದ್ಧಪಡಿಸಿಕೊಂಡಿದ್ದು, ಕಾನೂನು ಇಲಾಖೆಯ ಜತೆ ಸಮಾಲೋಚನೆಯನ್ನೂ ಮಾಡಿದೆ. ಆದರೆ, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತರಾತುರಿಯಲ್ಲಿ ಮಸೂದೆ ಮಂಡನೆಗೆ ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪರಿಷತ್ನಲ್ಲಿ ಮಂಡನೆ ಅನುಮಾನ?:
ಒಂದು ವೇಳೆ ಇದೇ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ತೀರ್ಮಾನ ಮಾಡಿದರೂ, ವಿಧಾನಸಭೆಯಲ್ಲಿ ಮಾತ್ರ ಮಂಡನೆ ಮಾಡಿ ಅಂಗೀಕಾರ ಪಡೆಯುವ ಬಗ್ಗೆ ಸರಕಾರದ ಹಂತದಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಬಿಜೆಪಿಗೆ ವಿಧಾನಪರಿಷತ್ನಲ್ಲಿ ಬಹುಮತವಿರದ ಹಿನ್ನೆಲೆಯಲ್ಲಿ ಇದೇ ಅಧಿವೇಶನದಲ್ಲಿ ಮಸೂದೆ ಮಂಡಿಸಿದರೆ, ಜೆಡಿಎಸ್ ಹಾಗೂ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುವುದರಿಂದ ಮಸೂದೆಗೆ ಹಿನ್ನಡೆಯಾಗುವ ಅತಂಕ ಆಡಳಿತ ಪಕ್ಷಕ್ಕೆ ಉಂಟಾಗಿದೆ ಎಂದು ತಿಳಿದು ಬಂದಿದೆ.
ಪ್ರಮುಖ ಅಂಶಗಳು :
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.