APMC ಮಸೂದೆ: ಮೇಲ್ಮನೆ ಹಿನ್ನಡೆ
ವಿಧಾನ ಪರಿಷತ್ನಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರ ಒಗ್ಗಟ್ಟು
Team Udayavani, Jul 19, 2023, 6:17 AM IST
ಬೆಂಗಳೂರು: ಒಂದು ದಿನದ ಹಿಂದಷ್ಟೇ ಅಂಗೀಕಾರಗೊಂಡಿದ್ದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಮಸೂದೆ-2023ಕ್ಕೆ ಮೇಲ್ಮನೆಯ ಅಂಗೀಕಾರ ಪಡೆಯುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಅದು ಮಂಡಿಸಿದ ಮಸೂದೆಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಮತ ಚಲಾಯಿಸಿವೆ. ಕೊನೆಗೆ ಇದನ್ನು ಶಾಸನ ಪರಿಶೀಲನ ಸಮಿತಿಗೆ ಒಪ್ಪಿಸಲು ತೀರ್ಮಾನಿಸಲಾಗಿದೆ.
ಮಂಗಳವಾರ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಸೂದೆಗೆ ಅಂಗೀಕಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದರು. ಈ ಸಂಬಂಧ ಸುದೀರ್ಘ ಚರ್ಚೆ ನಡೆಯಿತು. ಮಸೂದೆಯನ್ನು ವಾಪಸ್ ಪಡೆಯದಿದ್ದರೆ ಅದನ್ನು ಶಾಸನ ಪರಿಶೀಲನ ಸಮಿತಿಗೆ ಒಪ್ಪಿಸಬೇಕು ಎಂಬ ಪ್ರಸ್ತಾವವನ್ನು ವಿಪಕ್ಷ ಬಿಜೆಪಿ ಸದಸ್ಯರು ಮುಂದಿಟ್ಟರು. ಇದನ್ನು ಆಡಳಿತ ಪಕ್ಷದ ಸದಸ್ಯರು ಸಾರಾಸಗಟಾಗಿ ತಳ್ಳಿಹಾಕಿದರು. ಆಗ ಸಭಾಪತಿ ಬಸವರಾಜ ಹೊರಟ್ಟಿ ಪ್ರಸ್ತಾವವನ್ನು ಮತಕ್ಕೆ ಹಾಕಿದರು.
ಈ ಸಂದರ್ಭದಲ್ಲಿ ಮರಿತಿಬ್ಬೇಗೌಡ ಅವರನ್ನು ಹೊರತುಪಡಿಸಿ ಜೆಡಿಎಸ್ನ ಸದಸ್ಯರೆಲ್ಲ ಬಿಜೆಪಿ ಬೆಂಬಲಕ್ಕೆ ನಿಂತರು. ಪ್ರಸ್ತಾವದ ಪರವಾಗಿ 31 ಮತಗಳು ಬಂದರೆ, ವಿರುದ್ಧವಾಗಿ 21 ಮತಗಳು ಬಂದವು. ಇದರಂತೆ ಪರಿಶೀಲನ ಸಮಿತಿ ರಚನೆ ಆಗಲಿದೆ.
ಹಾಲಿ ಕಾಯ್ದೆ ಮಾರಕ
ಮತಕ್ಕೆ ಹಾಕುವ ಮುನ್ನ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಹಿಂದಿನ ಅವಧಿಯಲ್ಲಿ ಜಾರಿಗೆ ತರಲಾದ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆಯು ರೈತರಿಗೆ ಮಾರಕವಾಗಿದೆ. ಆದ್ದರಿಂದ ಪ್ರಸ್ತಾವವನ್ನು ಅಂಗೀಕರಿಸುವಂತೆ ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಮಸೂದೆ ಬಗ್ಗೆ ಹೆಚ್ಚು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪರಿಶೀಲನ ಸಮಿತಿಗೆ ಒಪ್ಪಿಸುವುದು ಸೂಕ್ತ ಎಂದರು.
ಜೆಡಿಎಸ್: ಆಗೊಂದು ಈಗೊಂದು ನಿಲುವೇಕೆ?
ಮಸೂದೆಯ ಬಗ್ಗೆ ಅಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆದಿಯಾಗಿ ಜೆಡಿಎಸ್ ಸದಸ್ಯರ ಮಾತುಗಳು ಬೇರೆ ಇದ್ದವು, ಈಗ ತದ್ವಿರುದ್ಧವಾಗಿವೆ. ಆಗೊಂದು ನಿಲುವು, ಈಗೊಂದು ನಿಲುವು ಯಾಕೆ ಎಂದು ಸಚಿವ ಶಿವಾನಂದ ಪಾಟೀಲ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್ ಸಪ್ತಾಹ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.