24 ಶಾಸಕರ ಮೇಲೆ ತೂಗುಗತ್ತಿ? ಎ. 8ರಂದು ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ನಿರೀಕ್ಷೆ

ಮೊದಲ ಪಟ್ಟಿಯಲ್ಲಿ 85 ಜನರಿಗೆ ಮಾತ್ರ ಟಿಕೆಟ್‌ ಸಾಧ್ಯತೆ

Team Udayavani, Apr 4, 2023, 7:00 AM IST

24 ಶಾಸಕರ ಮೇಲೆ ತೂಗುಗತ್ತಿ? ಎ. 8ರಂದು ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ನಿರೀಕ್ಷೆ

ಬೆಂಗಳೂರು: ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ “ಮ್ಯಾರಥಾನ್‌’ ಸಭೆ ನಡೆಸುತ್ತಿರುವ ಬಿಜೆಪಿಗೆ ಪ್ರತೀ ಜಿಲ್ಲೆಯಲ್ಲೂ ಅಸಮಾಧಾನದ ಬಿಸಿ ತಟ್ಟುತ್ತಿದ್ದು, ಯಾವುದೇ ಆಕ್ಷೇಪ ವಿಲ್ಲದ 85 ಜನರ ಹೆಸರು ಮಾತ್ರ ಮೊದಲ ಪಟ್ಟಿಯಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಇದರಿಂದಾಗಿ ಹಾಲಿ ಶಾಸಕರ ಪೈಕಿ 24ಕ್ಕೂ ಹೆಚ್ಚು ಮಂದಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇನ್ನಷ್ಟು ಹೆಚ್ಚಿದೆ.

ಬಿಜೆಪಿ ಟಿಕೆಟ್‌ ಪ್ರಕ್ರಿಯೆ ಅಂತಿಮ ಗೊಳಿಸಲು ಮಂಗಳವಾರ ಹಾಗೂ ಬುಧವಾರ ರಾಜ್ಯ ಕೋರ್‌ ಕಮಿಟಿ ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ಬಹುತೇಕ ಎಲ್ಲ ಕ್ಷೇತ್ರಗಳ ಅಭ್ಯರ್ಥಿ ಹೆಸರು ಅಖೈರುಗೊಳಿಸಲಾಗುತ್ತದೆ. ಆದರೆ ಇದಕ್ಕೆ ವರಿಷ್ಠರ ಒಪ್ಪಿಗೆಯ ಮುದ್ರೆ ಲಭಿಸುವ ಸಾಧ್ಯತೆ ಕಡಿಮೆ. ಎ. 8ರಂದು ದಿಲ್ಲಿಯಲ್ಲಿ ಸಂಸದೀಯ ಮಂಡಳಿ ಸಭೆಗೆ ದಿನಾಂಕ ನಿಗದಿ ಯಾಗಿದ್ದು, ಅದೇ ದಿನ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.

ಎ. 8ರಂದು ಮೊದಲ ಪಟ್ಟಿ ಪ್ರಕಟವಾಗಬಹುದು ಎಂದು ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಭೆ ಮುಕ್ತಾಯಗೊಳ್ಳುವುದು ವಿಳಂಬ ವಾದರೆ ಎ. 9ರಂದು ಘೋಷಣೆ ಯಾಗಬಹುದೆಂದು ನಿರೀಕ್ಷಿಸಲಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲೇ ಹಾಲಿ ಶಾಸಕರ ಬದಲು ಪರ್ಯಾಯ ಹೆಸರುಗಳು ಪ್ರಸ್ತಾವವಾಗಿವೆ.

ಜತೆಗೆ 85 ಹೆಸರುಗಳು ಮಾತ್ರ ಮೊದಲ ಪಟ್ಟಿಯಲ್ಲಿ ಪ್ರಕಟಗೊಳ್ಳಬಹುದೆಂಬ ಬಿಜೆಪಿ ಮೂಲಗಳ ಮಾಹಿತಿಯಿಂದ ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪುವುದು ಸ್ಪಷ್ಟ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ಬೆಳಗಾವಿ ವಿವಾದ
ಬೆಂಗಳೂರು ಹೊರತುಪಡಿಸಿ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ-ಚಿಕ್ಕೋಡಿಯಲ್ಲೇ ಬಿಜೆಪಿ ಟಿಕೆಟ್‌ ಹಂಚಿಕೆಯಲ್ಲಿ ಭಾರಿ ಸಮಸ್ಯೆ ಸೃಷ್ಟಿಯಾಗಿತ್ತು. ತಮ್ಮ ಬೆಂಬಲಿಗರ ಜತೆಗೆ ಉಳಿದ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲೂ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಮೂಗು ತೂರಿಸುತ್ತಿರುವುದು ಆ ಭಾಗದ ನಾಯಕರಲ್ಲಿ ತೀವ್ರ ಅಸಮಾಧಾನ ಸೃಷ್ಟಿಸಿತ್ತು. ಇದೀಗ ಕೇಂದ್ರ ಸಚಿವ ಪ್ರಹ್ಲಾದ್‌ ಮಧ್ಯಸ್ಥಿಕೆಯಲ್ಲಿ ಇದು ಬಗೆಹರಿದಿದೆ ಎಂದು ಹೇಳಲಾಗಿದೆ. ನಗರದಲ್ಲಿ ಸೋಮವಾರ ನಡೆದ ಸಭೆಯ ಅನಂತರ ಪ್ರಹ್ಲಾದ ಜೋಷಿ ಅವರೊಂದಿಗೆ ಒಂದೇ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ ರಮೇಶ ಜಾರಕಿಹೊಳಿ ಮತ್ತು ಲಕ್ಷ್ಮಣ ಸವದಿ ಅವರು, ತಮ್ಮ ನಡುವೆ ಇದ್ದ ಮನಸ್ತಾಪ ಮತ್ತು ಭಿನ್ನಾಭಿಪ್ರಾಯ ಬಗೆಹರಿದಿದೆ ಎಂಬ ಸಂ¨ ೇಶವನ್ನು ರಾಜ್ಯದ ಅದರಲ್ಲೂ ವಿಶೇಷವಾಗಿ ಜಿಲ್ಲೆಯ ಕಾರ್ಯಕರ್ತರಿಗೆ ನೀಡಿದರು.

25 ಕ್ಷೇತ್ರ-ಬಂಡಾಯದ ಬಿಸಿ?
ಈ ಮಧ್ಯೆ ಟಿಕೆಟ್‌ ವಂಚಿತ ಶಾಸಕರು ಹಾಗೂ ಟಿಕೆಟ್‌ ಆಕಾಂಕ್ಷಿಗಳಿಂದ ಸುಮಾರು 25 ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಾಗಬಹುದೆಂದು ಪಕ್ಷದ ರಾಜ್ಯ ಘಟಕ ನಿರೀಕ್ಷಿಸಿದೆ. ಅಸಮಾಧಾನ ಶಮನಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ತೆರೆಮರೆಯಲ್ಲೇ ಸಿದ್ಧತೆ ನಡೆಸಲಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಆದಂತೆ ಬಂಡಾಯ ಅಭ್ಯರ್ಥಿಗಳೇ ಅಧಿಕೃತ ಅಭ್ಯರ್ಥಿಯ ಸೋಲು ನಿರ್ಧರಿಸದಂತೆ ಜಾಗ್ರತೆ ವಹಿಸಿ ಎಂದು ವರಿಷ್ಠರು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಎ. 15ರ ಬಳಿಕ ಶಾ ಠಿಕಾಣಿ
ಎ. 15ರ ಬಳಿಕ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯದಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸುಮಾರು 20 ದಿನಗಳ ಕಾಲ ಬೆಂಗಳೂರಿನಲ್ಲೇ ನೆಲೆಸಲಿರುವ ಅವರು ಪಕ್ಷದ ತಂತ್ರಗಾರಿಕೆ, ಪ್ರಚಾರ, ಭಿನ್ನಮತ ಶಮನ ಕಾರ್ಯ ನಡೆಸುತ್ತಾರೆಂದು ಬಿಜೆಪಿ ಮೂಲಗಳು ತಿಳಿಸಿವೆ.

ಶಿಗ್ಗಾವಿಯಿಂದಲೇ ಸ್ಪರ್ಧೆ: ಬೊಮ್ಮಾಯಿ
ತವರು ಕ್ಷೇತ್ರ ಶಿಗ್ಗಾವಿಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ರೀತಿ ಬೊಮ್ಮಾಯಿ ಕೂಡ ಕ್ಷೇತ್ರ ಬದಲಾಯಿಸುತ್ತಾರೆ ಎಂಬ ವದಂತಿಗೆ ಸೋಮವಾರ ತೆರೆ ಎಳೆದಿದ್ದಾರೆ. ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟನೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೊಮ್ಮಾಯಿ ದಾವಣಗೆರೆ ಉತ್ತರ, ಚಿಕ್ಕಬಳ್ಳಾಪುರದಿಂದ ಕಣಕ್ಕೆ ಇಳಿಯಲಿದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಚರ್ಚೆಗೆ ಪೂರ್ಣ ವಿರಾಮ ನೀಡಿದ್ದಾರೆ.

ಸ್ಪರ್ಧೆಯಿಂದ ಹಿಂದೆ ಸರಿದ ಹಾಲಾಡಿ
ಕುಂದಾಪುರ: ದಿಢೀರ್‌ ಬೆಳವಣಿಗೆಯಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣ ಸ್ಪರ್ಧಾ ಕಣದಿಂದ ಹಿಂದೆ ಸರಿ ಯುವ ನಿರ್ಧಾರ ಪ್ರಕಟಿಸಿದ್ದಾರೆ. ರವಿವಾರ ಬೆಂಗಳೂರಿ ನಲ್ಲಿ ನಡೆದ ಪಕ್ಷದ ಪ್ರಮುಖರ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಕುಂದಾಪುರ ಕ್ಷೇತ್ರದ ಕುರಿತಾದ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆದಿದೆ. ಅಲ್ಲಿಂದ ಊರಿಗೆ ಬಂದ ಬಳಿಕ ನಡೆದ ಬೆಳವಣಿಗೆಯಲ್ಲಿ 4 ಬಾರಿ ಬಿಜೆಪಿಯಿಂದ, ಒಮ್ಮೆ ಪಕ್ಷೇತರನಾಗಿ ಸ್ಪರ್ಧಿಸಿ ವಿಜಯದ ಸರಪಳಿ ಕಡಿಯದ ಹಾಲಿ ಶಾಸಕರು ಸೋಮವಾರ ಆಪ್ತರ ಸಭೆ ನಡೆಸಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತವಾಗಿ ಒಟ್ಟು 5 ಅವಧಿಗೆ ಆಯ್ಕೆ ಮಾಡಿದ ಕ್ಷೇತ್ರದ ಎಲ್ಲ ಜಾತಿ, ಧರ್ಮದ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ವಇಚ್ಛೆಯಿಂದ ಸ್ಪರ್ಧಿಸದೆ ಇರಲು ನಿಶ್ಚಯಿಸಿರುತ್ತೇನೆ. ಈ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗೆ ಎಲ್ಲ ಮತಬಾಂಧವರೂ ಸಹಕಾರ ನೀಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಹಾಲಾಡಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.