ಗ್ಯಾರಂಟಿಗಳು ಇನ್ನೂ ಇರುತ್ತಾ? ಇರಲ್ವಾ! ಪರಾಮರ್ಶೆಗೆ ಮುಂದಾಗುವುದೇ ಸರ್ಕಾರ ?
ಕುತೂಹಲ ಲೋಕಸಭಾ ಚುನಾವಣೆಯಲ್ಲಿ "ಕೈ' ಹಿಡಿಯದ ಯೋಜನೆಗಳು
Team Udayavani, Jun 6, 2024, 7:30 AM IST
ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಅನಿರೀಕ್ಷಿತ ಆಘಾತಕ್ಕೆ ಒಳಗಾಗಿರುವ ಆಡಳಿತಾರೂಢ ಕಾಂಗ್ರೆಸ್, ಸೋಲು-ಗೆಲುವಿನ ಲೆಕ್ಕಾಚಾರಗಳ ಜತೆಗೇ ತನ್ನ ಜನಪ್ರಿಯ “ಗ್ಯಾರಂಟಿ’ ಯೋಜನೆಗಳನ್ನೂ ಪರಾಮರ್ಶೆಗೊಳಪಡಿಸಲು ಮುಂದಾಗಿದೆ.
ವಿಧಾನಸಭಾ ಚುನಾವಣೆ ಪೂರ್ವ ಘೋಷಿಸಿದ ಗ್ಯಾರಂಟಿಗಳು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ನಿಜ. ನಂತರದಲ್ಲಿ ಜಾರಿಗೊಳಿಸುವ ಮೂಲಕ ನಾವು ನುಡಿದಂತೆ ನಡೆದಿದ್ದೂ ಅಷ್ಟೇ ಸತ್ಯ. ಆದರೆ, ಅದೇ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ “ಕೈ’ ಹಿಡಿಯಲಿಲ್ಲ ಎಂಬುದು ವಾಸ್ತವ.
ಹೀಗಿರುವಾಗ, ಗ್ಯಾರಂಟಿಗಳನ್ನು ಮುಂದುವರಿಸುವುದು ಸೂಕ್ತವೇ ಎಂಬ ಚರ್ಚೆ ಈಗ ಪಕ್ಷದಲ್ಲಿ ಶುರುವಾಗಿದೆ.
ಸಹಜವಾಗಿ ಲೋಕಸಭಾ ಚುನಾವಣೆಯ ಲೆಕ್ಕಾಚಾರ ಇದ್ದುದು ನಿಜ. ಆದರೆ, ಎಲ್ಲ ಪ್ರಯತ್ನದ ಹೊರತಾಗಿಯೂ “ಗ್ಯಾರಂಟಿ’ಗಳು ನಿರೀಕ್ಷಿತ ಫಲ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಗ್ಯಾರಂಟಿಗಳ ಅಸ್ತಿತ್ವದ ಸಹಜವಾಗಿ ಚರ್ಚೆ ಶುರುವಾಗಿದೆ. ಗ್ಯಾರಂಟಿಗಳು ಮುಂದುವರಿಯಬೇಕಾ? ಒಂದು ವೇಳೆ ಮುಂದುವರಿದರೂ ಯಾವ ಪ್ರಮಾಣದಲ್ಲಿ ಇರಬೇಕು? ನಿಜವಾಗಿಯೂ ಬಡ ವರ್ಗಗಳಿಗೆ ಆ “ಕೊಡುಗೆ’ಗಳು ತಲುಪುತ್ತಿವೆಯೇ? ಬಡವರನ್ನು ಗುರಿಯಾಗಿಟ್ಟುಕೊಂಡು ಅನುಷ್ಠಾನ ಪ್ರಕ್ರಿಯೆಯಲ್ಲಿ ಇನ್ನಷ್ಟು ಬಿಗಿ ಮಾಡಬಹುದೇ? ಫಲಿತಾಂಶದ ಬೆನ್ನಲ್ಲೇ ಇಂತಹ ಹಲವು ಚರ್ಚೆಗಳು ಪಕ್ಷದ ವಲಯದಲ್ಲಿ ನಡೆಯುತ್ತಿವೆ.
ಸದ್ಯಕ್ಕಿಲ್ಲ ಯೋಚನೆ: ಹಲವು ನಕಾರಾತ್ಮಕ ಅಂಶಗಳ ಹೊರತಾಗಿಯೂ ಸರ್ಕಾರ ಸದ್ಯಕ್ಕಂತೂ ಗ್ಯಾರಂಟಿಗಳಿಗೆ ಬ್ರೇಕ್ ಹಾಕುವ ಯೋಚನೆಯಲ್ಲಿಲ್ಲ. ಯಾಕೆಂದರೆ, ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ಎದುರಿಸಬೇಕಿದೆ. ಇದಕ್ಕೆ ಪೂರಕವಾಗಿ “ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ಸ್ಥಗಿತಗೊಳ್ಳುವುದಿಲ್ಲ. ಲೋಕಸಭಾ ಚುನಾವಣೆ ನಂತರವೂ ಮುಂದುವರಿಯಲಿವೆ’ ಅಂತ ಸ್ವತಃ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಂತರ ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ವಲಸೆ ಇದ್ದಲ್ಲಿ ಕೆಲಸ ಮಾಡಿದ “ಗ್ಯಾರಂಟಿ’
ರಾಜ್ಯಾದ್ಯಂತ ಭಾರೀ ಗೆಲುವನ್ನು “ಗ್ಯಾರಂಟಿ’ಗಳು ತಂದುಕೊಡದಿರಬಹುದು. ಆದರೆ, ಬಡತನ ಮತ್ತು ವಲಸೆ ಹೆಚ್ಚಿರುವ ಕಡೆಗಳಲ್ಲಿ ಸರ್ಕಾರದ ಈ ಯೋಜನೆಗಳು “ಕೈ’ ಹಿಡಿದಿವೆ. 28 ಸ್ಥಾನಗಳ ಪೈಕಿ ಕಾಂಗ್ರೆಸ್ ಗೆದ್ದ ಒಂಬತ್ತು ಸ್ಥಾನಗಳಲ್ಲಿ ಐದು ಕಲ್ಯಾಣ ಕರ್ನಾಟಕದ ಕ್ಷೇತ್ರಗಳಾಗಿವೆ. ಹೆಚ್ಚು ವಲಸೆ ಇರುವುದೂ ಆ ಭಾಗದಲ್ಲೇ ಎಂಬುದು ವಾಸ್ತವ.
ಕರ್ನಾಟಕದಲ್ಲಿ ನಮಗೆ ಮಿಶ್ರ ಫಲಿತಾಂಶ ಸಿಕ್ಕಿದೆ. ಕಲ್ಯಾಣ ಕರ್ನಾಟಕದ ಅಷ್ಟೂ ಕ್ಷೇತ್ರ ಗೆದ್ದಿದ್ದೇವೆ. ಕಿತ್ತೂರು ಕರ್ನಾಟಕದ ಕೆಲವೆಡೆ ಸಹ ಗೆಲುವು ಸಿಕ್ಕಿದೆ. ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದ ಹಿನ್ನಡೆಯಾಗಿದೆ. ಆದರೆ, ಕಾಂಗ್ರೆಸ್ಗೆ ಹೆಚ್ಚುವರಿ ಮತಗಳೂ ಸಿಕ್ಕಿವೆ. ಗ್ಯಾರಂಟಿ ಕೆಲಸ ಮಾಡಿದೆ. ಅದರಿಂದ 9 ಸ್ಥಾನಗಳು ಬಂದಿವೆ. ನಮ್ಮಲ್ಲಿ ಒಗ್ಗಟ್ಟಿಲ್ಲದ ಕಾರಣದಿಂದ ಸೋತಿದ್ದೇವೆ.
– ಕೆ.ಎಚ್. ಮುನಿಯಪ್ಪ, ಆಹಾರ ಸಚಿವ
ಪ್ರತಿಪಕ್ಷಗಳ ಮೈತ್ರಿಗೆ ಮತ ಹಾಕಿದರೋ, ಸಮುದಾಯ ನೋಡಿ ಜನ ಮತ ಹಾಕಿದರೋ ಗೊತ್ತಿಲ್ಲ. ಗ್ಯಾರಂಟಿ ಪರವಂತೂ ಜನ ನಿಂತಿಲ್ಲ ಅನ್ನಿಸುತ್ತದೆ. ಜೆಡಿಎಸ್, ಬಿಜೆಪಿಗೆ ಗ್ಯಾರಂಟಿ ಬೇಕಿರಲಿಲ್ಲ. ಒಟ್ಟಾರೆ ಗ್ಯಾರಂಟಿಗಳಿಗೆ ಹಿನ್ನಡೆಯಾಗಿದೆ. ವಿಶೇಷವಾಗಿ ಹಳೆಯ ಮೈಸೂರು ಭಾಗದಲ್ಲಿ ಹೆಚ್ಚು ಹಿನ್ನಡೆಯಾಗಿದೆ.
-ಎನ್. ಚಲುವರಾಯಸ್ವಾಮಿ, ಕೃಷಿ ಸಚಿವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.