![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 26, 2022, 8:56 PM IST
ಚಿಕ್ಕಬಳ್ಳಾಪುರ: ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರಿಗೆ ಭೂ ಸ್ವಾಧೀನ ಪ್ರಕ್ರಿಯೆಗಳ ಬಗ್ಗೆ ಅರಿವಿಲ್ಲವೇ? ಭೂ ಸ್ವಾಧೀನ ಮಾಡದೆಯೇ ನೀರಾವರಿ ಯೋಜನೆಗಳು, ಕೈಗಾರಿಕೆಗಳನ್ನು ಸ್ಥಾಪಿಸಲು ಸಾಧ್ಯವಾಗುತ್ತದೆಯೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ಧಾಳಿ ನಡೆಸಿದರು.
ತಾಲೂಕಿನ ಬೀಡಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಅವರ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆ ಸಮೀಪದಲ್ಲಿ ನೀಡುವ ಬಾಲಿಶ ಹೇಳಿಕೆಗಳಿಗೆ ಅರ್ಥವಿಲ್ಲ. ಸಾಕ್ಷಿ ಸಮೇತ ಆರೋಪ ಮಾಡಬೇಕು, ದಾಖಲೆಗಳನ್ನು ಸಂಬಂಧಿಸಿದ ತನಿಖಾ ಸಂಸ್ಥೆಗಳಿಗೆ ಅಥವಾ ನ್ಯಾಯಾಲಯಗಳಿಗೆ ನೀಡಬೇಕೆಂದು ತಿರುಗೇಟು ನೀಡಿದರು.
ತಮಗೆ ಸಂಬಂಧವಿಲ್ಲ: ಕೈಗಾರಿಕಾ ಭೂ ಸ್ವಾಧೀನಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವನಾಗಿದ್ದೇನೆ, ಆದರೆ ಕಳೆದ ಒಂದು ವರ್ಷದಿಂದ ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಭೂ ಸ್ವಾಧೀನ ಪ್ರಕ್ರಿಯೆ ನಡೆಸುವವರು ಕೈಗಾರಿಕಾ ಇಲಾಖೆಯವರು, ಈ ಸಂಬಂಧ ಕೈಗಾರಿಕಾ ಸಚಿವರ ಜೊತೆಯೂ ಮಾತನಾಡಲಾಗಿದೆ ಎಂದು ಹೇಳಿದರು.
ಹಿಂದೆ ಅವರೂ ಮುಖ್ಯಮಂತ್ರಿ ಆಗಿದ್ದರು, ಅವರೂ ಭೂ ಸ್ವಾಧೀನ ಮಾಡಿದ್ದಾರೆ, ಅವರ ಅವಧಿಯಲ್ಲಿ ಭೂ ಸ್ವಾಧೀನ ಮಾಡಿಲ್ಲವೇ? ಭೂ ಸ್ವಾಧೀನವಾಗದೆ ನೀರಾವರಿ ಯೋಜನೆಗಳು, ಕೈಗಾರಿಕೆಗಳು ಆಗಿದೆಯಾ, ಕೇವಲ ರಾಜಕೀಯ ಸ್ಟೆಂಟ್ ಮಾಡಿದರೆ ಏನು ಪ್ರಯೋಜನ ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.