Maravanthe ಬೀಚ್ನಲ್ಲಿ ವಾಹನ ನಿಲುಗಡೆ ಸೌಲಭ್ಯದ ಭರವಸೆ
Team Udayavani, Jul 26, 2024, 6:46 AM IST
ಬೆಂಗಳೂರು: ಮರವಂತೆ ಬೀಚ್ನಲ್ಲಿ ವಾಹನಗಳ ಪಾಕಿಂìಗ್ ವ್ಯವಸ್ಥೆ ಹಾಗೂ ಆಹಾರ ಮಳಿಗೆಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಉತ್ತರಿಸಿದರು.
ಶಾಸಕ ಗುರುರಾಜ್ ಗಂಟಿಹೊಳೆ ಮರವಂತೆ ಬೀಚ್ನಲ್ಲಿ ಸೂಕ್ತ ಪಾರ್ಕಿಂಗ್ ಸೌಲಭ್ಯ ಕಲ್ಪಿಸುವಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಲ್ಲಿ ಪ್ರವಾಸೋ ದ್ಯಮ ಇಲಾಖೆಯ ಜಮೀನಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಹಾಗೂ ಆಹಾರ ಮಳಿಗೆಗಳ ದುರಸ್ತಿ ಕಾಮಗಾರಿ ಕೈಗೊಳ್ಳಲು 39.50 ಲಕ್ಷ ರೂ. ಅಂದಾಜು ಪಟ್ಟಿ ಸಲ್ಲಿಸಿದ್ದು 2023-24ನೇ ಸಾಲಿನಲ್ಲಿ ಅನುದಾನದ ಕೊರತೆಯಿಂದ ಈ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ಅನುದಾನ ಲಭ್ಯತೆಯನುಸಾರ ಪರಿಶೀಲಿಸಲಾಗುವುದು ಎಂದರು.
ವಸತಿ ರಹಿತರಿಗೆ ಶೀಘ್ರ ಮನೆ: ಬೈಂದೂರು ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ವಸತಿ ರಹಿತರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರಾತಿ ಮಾಡಲಾಗುವುದೆಂದು ವಸತಿ ಸಚಿವ ಬಿ.ಝಡ್. ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.
ಬೈಂದೂರು ಕ್ಷೇತ್ರದಲ್ಲಿ 2018ರಲ್ಲಿ ವಸತಿ ರಹಿತ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸಲಾಗಿದ್ದು ಗ್ರಾಮೀಣ ಪ್ರದೇಶದಲ್ಲಿ 9,390 ವಸತಿ ರಹಿತರು ಕಂಡು ಬಂದಿದ್ದಾರೆ.
ಸಮೀಕ್ಷೆಯ ಅನಂತರ 2019ರಿಂದ 2021-22ರ ವರೆಗೆ ವಿವಿಧ ವಸತಿ ಯೋಜನೆಗಳಡಿ ಸ್ವಂತ ನಿವೇಶನ ಹೊಂದಿರುವ ಅರ್ಹ 3,279 ಜನರಿಗೆ ಮನೆ ಮಂಜೂರು ಮಾಡಲಾಗಿದೆ. ಪ್ರಸ್ತುತ ಅನುದಾನಕ್ಕೆ ಅನುಗುಣವಾಗಿ ಮಂಜೂರಾತಿ ನೀಡಲಾ ಗುತ್ತದೆ ಎಂದರು.
ವಸತಿ ರಹಿತರಿಗೆ ಮನೆ ಒದಗಿಸಲು ಅನಗತ್ಯ ವಿಳಂಬ ಮಾಡದಿರಿ ಎಂದು ಶಾಸಕರು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.