ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ: ಕೋಟ ಶ್ರೀನಿವಾಸ ಪೂಜಾರಿ


Team Udayavani, Jul 28, 2023, 1:36 PM IST

ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ಮೊಬೈಲ್ ಮೂಲಕ ಚಿತ್ರೀಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತು ಜಿಲ್ಲಾಡಳಿತದ ಕೈಯನ್ನು ರಾಜ್ಯ ಸರಕಾರ ಸಂಪೂರ್ಣವಾಗಿ ಕಟ್ಟಿಹಾಕಿದೆ. ಇದನ್ನು ಮುಚ್ಚಿ ಹಾಕಲು ಸರಕಾರ ಮುಂದಾಗಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಸಿಐಡಿ ತನಿಖೆ ಅಥವಾ ಡಿಐಜಿ ಮಟ್ಟದ ಮಹಿಳಾ ಪೊಲೀಸ್ ಅಧಿಕಾರಿಯಿಂದ ತನಿಖೆ ಮಾಡಬೇಕಿತ್ತು. ಆದರೆ, ಇದನ್ನು ಮುಚ್ಚಿಹಾಕುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ಟೀಕಿಸಿದರು. ಈ ಸಂಬಂಧ ಪ್ರತಿಭಟನೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಬಹಳ ದಿನಗಳ ಕಾಲ ಜನರನ್ನು ವಂಚಿಸಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಐಡಿಗೆ ಕೊಟ್ಟು ಕೂಲಂಕಷ ತನಿಖೆ ಮಾಡಿಸಿ. ಇದರ ಆರೋಪಿತರ ಸಮಗ್ರ ತನಿಖೆ ನಡೆಸಬೇಕು. ಇದರ ಹಿಂದೆ ಇರುವ ಜಾಲ, ಭಯೋತ್ಪಾದನೆ ತಂಡದ ಸಾಧ್ಯತೆ ಅಥವಾ ಲವ್ ಜಿಹಾದ್ ಪ್ರಕರಣದ ಸಾಧ್ಯತೆ ಕುರಿತು ಪರಿಶೀಲಿಸಬೇಕಿದೆ ಎಂದು ಆಗ್ರಹಿಸಿದರು.

ಪ್ರತ್ಯೇಕ ಸಿಐಡಿ ತಂಡ ರಚಿಸಿ ತನಿಖೆಗೆ ಆದೇಶ ಕೊಡಬೇಕು. ಆದರೆ, ಇದರ ಬದಲಾಗಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು, ಯುವಕರ ಮೇಲೆ ಕೇಸು ಹಾಕುವ ಕೆಟ್ಟ ಪರಂಪರೆಗೆ ನಮ್ಮ ಗೃಹ ಇಲಾಖೆ ಹೊರಟಿದೆ. ಇದು ಎಲ್ಲಿಗೆ ಮುಟ್ಟಲಿದೆ ಎಂಬ ಆತಂಕ ಮೂಡಿದೆ ಎಂದು ತಿಳಿಸಿದರು. ಇಲ್ಲವೇ ತನಿಖೆಯನ್ನು ಎನ್‍ಐಗೆ ವಹಿಸಿ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಇದನ್ನೂ ಓದಿ:ಒಗ್ಗಟ್ಟಿನಲ್ಲಿ ಬಲವಿದೆ… ಮನೆಯೊಳಗೆ ನುಗ್ಗಿದ ಚಿರತೆಯನ್ನೇ ಓಡಿಸಿದ ಶ್ವಾನಗಳು

ಉಡುಪಿಯ ಖಾಸಗಿ ಅರೆ ವೈದ್ಯಕೀಯ ಕಾಲೇಜಿನಲ್ಲಿ ಶೌಚಾಲಯದಲ್ಲಿ ಮೊಬೈಲ್ ಮೂಲಕ ಚಿತ್ರೀಕರಣ ಮಾಡಿದ ಹೇಯ ಘಟನೆ ಇಡೀ ರಾಜ್ಯ ಮತ್ತು ದೇಶದ ನಾಗರಿಕರು ತಲೆತಗ್ಗಿಸುವಂಥದ್ದು ಎಂದು ಅವರು ಅಭಿಪ್ರಾಯಪಟ್ಟರು. ಅಲ್ಲಿನ ವಿದ್ಯಾರ್ಥಿನಿಯರು ಬಹಿರಂಗವಾಗಿ ಮಾಧ್ಯಮದ ಮೂಲಕ ಹೇಳಿಕೆ ಕೊಡುತ್ತಿದ್ದಾರೆ ಎಂದರು.

ಇಂಥ ಘಟನೆಗಳು ಆರೇಳು ತಿಂಗಳುಗಳಿಂದ ನಡೆಯುತ್ತಿದ್ದು, ನಾವು ಆತಂಕದಿಂದಿದ್ದೇವೆ. ಮುಂದಿನ ದಿನಗಳಲ್ಲಿ ಎಂಥ ಚಿತ್ರಗಳು ಹೊರಬರಬಹುದೆಂಬ ಭೀತಿ, ಆತಂಕ ನಮಗಿದೆ ಅನ್ನುವ ಮಾತುಗಳನ್ನು ವಿದ್ಯಾರ್ಥಿನಿಯರು ಬಹಿರಂಗವಾಗಿ ಹೇಳುತ್ತಿದ್ದಾರೆ ಎಂದು ವಿವರಿಸಿದರು.

ಘಟನೆ ನಡೆದು ನಾಲ್ಕೈದು ದಿನಗಳವರೆಗೆ ಎಫ್‍ಐಆರ್ ದಾಖಲಿಸದೆ ಇರುವುದು ದುರದೃಷ್ಟಕರ. ವಿದ್ಯಾರ್ಥಿನಿಯರು ಬೀದಿಗೆ ಬಂದು ಪ್ರತಿಭಟಿಸಿದ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ ಎಂದು ನುಡಿದರು.

ಮೊಬೈಲ್‍ ಗಳನ್ನು ಯಾರೋ ಒಯ್ದು ಬದಲಿಸಿ ಕೊಡುತ್ತಿದ್ದರು ಎಂಬ ಮಾಹಿತಿಯನ್ನೂ ವಿದ್ಯಾರ್ಥಿನಿಯರು ನೀಡಿದ್ದಾರೆ. ಇದೆಲ್ಲವನ್ನು ಗಮನಿಸಿದರೆ ಪೊಲೀಸ್ ವರಿಷ್ಠರ, ಜಿಲ್ಲಾಡಳಿತದ ಕೈಯನ್ನು ಕಟ್ಟಿ ಹಾಕಿದ ಸಂಶಯ ಮೂಡುತ್ತದೆ ಎಂದರು. ನಾಗರಿಕ ಸಮಾಜ ತಲೆತಗ್ಗಿಸುವ ಮತ್ತು ಕೆಟ್ಟ ಪರಂಪರೆಯ ಆರೋಪ ಇದಾಗಿದ್ದು, ತಕ್ಷಣ ಇದರ ಉನ್ನತ ಮಟ್ಟದ ತನಿಖೆ ಮಾಡಬೇಕಲ್ಲವೇ ಎಂದು ಅವರು ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಪ್ರಶ್ನಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.