![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 9, 2022, 1:17 PM IST
ಬೆಂಗಳೂರು: ಹಲವು ವಿಶಿಷ್ಟತೆಗಳಿಂದ ಅಂತಾರಾಷ್ಟ್ರೀಯ ಗಮನ ಸೆಳೆದಿರುವ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಮುಕುಟ ಪ್ರಾಪ್ತವಾಗಲಿದೆ.
ದೇಶದಲ್ಲೇ ದೆಹಲಿ ಮತ್ತು ಮುಂಬೈ ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ರಾಜ್ಯದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಲಿದೆ.
ಶುಕ್ರವಾರ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರಮೋದಿ ಅವರು 2ನೇ ಟರ್ಮಿನಲ್ಗೆ ಉದ್ಘಾಟನೆ ಮಾಡಲಿದ್ದಾರೆ. ಇದರಿಂದ ಇನ್ನುಮುಂದೆ ವಿಮಾನ ನಿಲ್ದಾಣಕ್ಕೆ ದೇಶ-ವಿದೇಶಗಳಿಂದ ಬಂದುಹೋಗುವ ವಿಮಾನಗಳು ಮತ್ತು ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಲಿದೆ.
ಟರ್ಮಿನಲ್-2ನ್ನು ಗಾರ್ಡನ್ ಟರ್ಮಿನಲ್ ಎಂದು ಬಿಲ್ ಮಾಡಲಾಗಿದೆ. ಉದ್ಯಾನ ನಗರಿ ಬೆಂಗಳೂರಿನ ಅಭಿವೃದ್ಧಿ ನೀತಿಯನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ವಿಶೇಷವಾಗಿ ಟರ್ಮಿನಲ್ ಅನ್ನು ವಿನ್ಯಾಸಗೊಳಿಸಲಾಗಿದೆ .
ಒಟ್ಟು 13,000 ಕೋಟಿ ರೂ. ವೆಚ್ಚದಲ್ಲಿ 2.55 ಲಕ್ಷ ಚದರ ಮೀ. ಟರ್ಮಿನಲ್-2 ನಿರ್ಮಾಣ ನಡೆಯುತ್ತಿದೆ. ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೂಪುಗೊಳ್ಳುತ್ತಿದೆ.
ಇದನ್ನೂ ಓದಿ: ಹಿಮಾಚಲದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ; ಪ್ರಧಾನಿ ಮೋದಿ ಮನವೊಲಿಕೆಗೆ ಜಗ್ಗದ ಮಾಜಿ ಸಂಸದ
1.6 ಕೋಟಿ ಪ್ರಯಾಣಿಕರ ದಟ್ಟಣೆಯ ಹೊರೆ ತಗ್ಗಿಸಲು ಟರ್ಮಿನಲ್-2 (ಟಿ-2) ಸಿದ್ದಪಡಿಸಲಾಗಿದೆ. ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೂಪುಗೊಳ್ಳುತ್ತಿದೆ.
ಈ ಟರ್ಮಿನಲ್ ಸುಮಾರು 4.41 ಲಕ್ಷ ಚದರ ಮೀಟರ್ನಷ್ಟು ವಿಶಾಲವಾಗಿದೆ. ಟರ್ಮಿನಲ್ ಆಕರ್ಷಕವಾಗಿ, ವಿನೂತನವಾಗಿ ಕಾಣುವಂತೆ ಮಾಡಲು ಅಮೆರಿಕದ ವಾಸ್ತುಶಿಲ್ಪ ಸಂಸ್ಥೆ ಸ್ಕಿಡ್ಮೋರ್, ಓವಿಂಗ್ಸ್ ಮತ್ತು ಮೆರಿಲ್ ಸಂಸ್ಥೆಗಳು ಶ್ರಮಿಸಿವೆ.
ಟರ್ಮಿನಲ್-2 ಕಾಮಗಾರಿಯೊಂದಿಗೆ ಮೆಟ್ರೋ ಮಾರ್ಗದ ಕಾಮಗಾರಿಯೂ ಪ್ರಗತಿಯಲ್ಲಿದೆ. ಸಿಲ್ಕ್ ಬೋರ್ಡ್- ಕೆಆರ್ ಪುರಂ- ವಿಮಾನ ನಿಲ್ದಾಣದ ಒಟ್ಟು 58.2 ಕಿ.ಮೀ ಮಾರ್ಗದಲ್ಲಿ ಬೆಂಗಳೂರಿನಿಂದ ದೇವನಹಳ್ಳಿ ಸಂಪರ್ಕ ಒದಗಿಸಲಿರುವ ವಿಮಾನ ಪ್ರಯಾಣಿಕರಿಗೆ ನೆರವಾಗಿದೆ.
ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಒದಗಿಸುವಲ್ಲಿ ಬೆಂಗಳೂರಿಗರ ಮುಖ್ಯ ಕೇಂದ್ರವಾಗಲಿರುವ ಹೆಬ್ಬಾಳದಿಂದ ನಿತ್ಯ 39,924 ಪ್ರಯಾಣಿಕರು ಸಂಚರಿಸಲಿದ್ದಾರೆ ಎಂದು ಬಿಎಂಆರ್ಸಿಎಲ್ ಅಂದಾಜಿಸಿದೆ.
ಜತೆಗೆ ಸಬ್ಅರ್ಬನ್ ರೈಲ್ವೆ ಕಾಮಗಾರಿಯೂ ಚಾಲನೆ ಪಡೆಯಲಿದ್ದು, ಮುಂಬರುವ ದಿನಗಳಲ್ಲಿ ಏರ್ಪೋರ್ಟ್ ಮಾರ್ಗ ವಾಣಿಜ್ಯ ಕ್ಷೇತ್ರಗಳಿಂದ ಮತ್ತಷ್ಟು ರಂಗೇರಲಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.