![7-sirsi](https://www.udayavani.com/wp-content/uploads/2024/07/7-sirsi-415x249.jpg)
ಹಾಲು ಉತ್ಪಾದಕರಿಗಾಗಿ ಬ್ಯಾಂಕ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ
ಹೈನುಬ್ಯಾಂಕ್ಗೆ ಶತಕೋಟಿ
Team Udayavani, Sep 30, 2021, 6:00 AM IST
![ಹಾಲು ಉತ್ಪಾದಕರಿಗಾಗಿ ಬ್ಯಾಂಕ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ](https://www.udayavani.com/wp-content/uploads/2021/09/COW-7-620x412.jpg)
ಬೆಂಗಳೂರು: ಹಾಲು ಉತ್ಪಾದಕರ ಅಭಿವೃದ್ಧಿ – ಆರ್ಥಿಕ ಸುಧಾರಣೆಗಾಗಿ ಹಾಲು ಉತ್ಪಾದಕರ ಬ್ಯಾಂಕ್ ತೆರೆಯಬೇಕು. ಇದಕ್ಕೆ ಸರಕಾರ 100 ಕೋಟಿ ರೂ. ಮೂಲ ಬಂಡವಾಳ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್)ಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೂತನ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿ, ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.
ಹಾಲು ಉತ್ಪಾದಕರನ್ನು ಆರ್ಥಿಕವಾಗಿ ಸಶಕ್ತ ಗೊಳಿಸಲು ಮತ್ತು ಮಹಾಮಂಡಳಿ ಹಾಗೂ ಒಕ್ಕೂಟಗಳನ್ನು ಲಾಭದಾ ಯಕವಾ ಗಿಸಲು ಹಾಲು ಉತ್ಪಾದಕರ ಬ್ಯಾಂಕ್ ತೆರೆಯಬೇಕು. ಈ ಬಗ್ಗೆ ಕೆಎಂಎಫ್ ಆಡಳಿತ ಮಂಡಳಿ ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದರು.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್, ಸಂಸದ ಡಾ| ಉಮೇಶ್ ಜಾದವ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಉಪಸ್ಥಿತರಿದ್ದರು.
ಗೋಶಾಲೆ ನಿರ್ವಹಣೆ ಕೆಎಂಎಫ್ ಹೆಗಲಿಗೆ
ರಾಜ್ಯ ಸರಕಾರ ಪ್ರತೀ ಜಿಲ್ಲೆಯಲ್ಲೂ ಒಂದೊಂದು ಗೋಶಾಲೆ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಂಡಿದೆ. ಗೋವುಗಳ ರಕ್ಷಣೆ ನಮ್ಮೆಲ್ಲರ ನೈತಿಕ ಜವಾಬ್ದಾರಿ. ಈ ನಿಟ್ಟಿನಲ್ಲಿ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದಿದ್ದೇವೆ. ಇದಕ್ಕೆ ಪೂರಕವಾಗಿ ಗೋ ಶಾಲೆಗಳ ನಿರ್ಮಾಣ ಮತ್ತು ಅದಕ್ಕೆ ಬೇಕಾದ ಹಣವನ್ನು ಸರಕಾರದಿಂದ ನೀಡಲಿದೆ. ಗೋಶಾಲೆಗಳ ನಿರ್ವಹಣೆಯನ್ನು ಕೆಎಂಎಫ್ ಮಾಡಬೇಕು. ಕೆಎಂಎಫ್ನಲ್ಲಿ ಪಶುವೈದ್ಯರು, ತರಬೇತಿ ಪಡೆದ ಸಿಬಂದಿ ಇರುವು ದರಿಂದ ಲಾಭ-ನಷ್ಟ ಇಲ್ಲದೆ ಸರಕಾರ ಮತ್ತು ಕೆಎಂಎಫ್ ಜತೆ ಸೇರಿಕೊಂಡು ಇದನ್ನು ಮಾಡಬೇಕು ಎಂದು ಸಿಎಂ ಹೇಳಿದರು.
ಇದನ್ನೂ ಓದಿ:ನಾಯಿಯೆಂದು ಚಿರತೆಯನ್ನು ಬಾವಿಯಿಂದ ಮೇಲೆತ್ತಿದರು…!
“ಪ್ರೋತ್ಸಾಹಧನ ಹೆಚ್ಚಿಸಿ’
ಹಾಲು ಉತ್ಪಾದಕ ರಿಗೆ ನೀಡುವ ಪ್ರೋತ್ಸಾಹ ಧನ ಹೆಚ್ಚಿಸಬೇಕು. ಕೆಎಂಎಫ್ ಹಾಲಿನ ಬೆಲೆ ಹೆಚ್ಚಳದ ನಿರ್ಧಾರ ತೆಗೆದುಕೊಂಡಲ್ಲಿ ಸರಕಾರ ಸಹಕಾರ ನೀಡಬೇಕು. ಮಕ್ಕಳಿಗೆ ಕೆನೆಭರಿತ ಹಾಲಿನ ಪುಡಿ ನೀಡುತ್ತಿದ್ದೇವೆ. ಮಕ್ಕಳಿಗೆ ಲಸ್ಸಿ ಅಥವಾ ಟೆಟ್ರಾ ಪ್ಯಾಕ್ ಹಾಲು ನೀಡಲು ಬಜೆಟ್ನಲ್ಲಿ ಯೋಜನೆ ರೂಪಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಿಎಂಗೆ ಮನವಿ ಮಾಡಿದರು.
ಸಿಎಂ ಹೇಳಿದ್ದೇನು?
-ಸಹಕಾರಿ ಸಂಘಗಳುಬೆಳೆಯಬೇಕು, ಪದಾಧಿಕಾರಿಗಳಲ್ಲ.
-ಕೆಎಂಎಫ್ಒಕ್ಕೂಟಗಳ ಸಿಬಂದಿಗೆ ಪ್ರೋತ್ಸಾಹ ಯೋಜನೆ ಪುನರಾರಂಭವಾಗಬೇಕು.
-ನೀತಿ ನಿರೂಪಿಸುವ ಅಧಿಕಾರಿಗಳ ಲಕ್ಷ್ಯ ಕೃಷಿಯತ್ತ ಹೊರಳಬೇಕು.
-ಕೆಎಂಎಫ್ ಮಾರುಕಟ್ಟೆ ವ್ಯವಸ್ಥೆಯನ್ನು ಸುಧಾರಿಸಿ, ಮೇಲ್ದರ್ಜೆಗೆ ಏರಿಸಬೇಕು.
-ಸಹಕಾರಿ ರಂಗದ ಶಕ್ತಿಯ ಸದುಪಯೋಗ ಮಾಡಿಕೊಳ್ಳಿ.
ಟಾಪ್ ನ್ಯೂಸ್
![7-sirsi](https://www.udayavani.com/wp-content/uploads/2024/07/7-sirsi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?](https://www.udayavani.com/wp-content/uploads/2024/07/Darshan-150x94.jpg)
PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
![Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ](https://www.udayavani.com/wp-content/uploads/2024/07/teppa-150x89.jpg)
Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ
![Dinesh-gundurao](https://www.udayavani.com/wp-content/uploads/2024/07/Dinesh-gundurao-150x90.jpg)
Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ
![CM-Siddaramaiah](https://www.udayavani.com/wp-content/uploads/2024/07/CM-Siddaramaiah-150x90.jpg)
Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ
![CM-Meeting](https://www.udayavani.com/wp-content/uploads/2024/07/CM-Meeting-150x90.jpg)
Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ
MUST WATCH
ಹೊಸ ಸೇರ್ಪಡೆ
![7-sirsi](https://www.udayavani.com/wp-content/uploads/2024/07/7-sirsi-150x90.jpg)
ತುಂಬಿ ಹರಿಯುತ್ತಿರುವ ಚಂಡಿಕಾನದಿ;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ಮಾರ್ಗ ವ್ಯವಸ್ಥೆ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?](https://www.udayavani.com/wp-content/uploads/2024/07/Darshan-150x94.jpg)
PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
![6-belthangady](https://www.udayavani.com/wp-content/uploads/2024/07/6-belthangady-150x90.jpg)
Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.