ಬನ್ನಂಜೆ, ಡಾ.ಎನ್ನೆಸ್ಸೆಲ್‌ ಸೇರಿ ಐವರಿಗೆ ಗೌರವ ಪ್ರಶಸ್ತಿ


Team Udayavani, Mar 2, 2018, 8:15 AM IST

21.jpg

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟವಾಗಿದ್ದು, ಹಿರಿಯ ಸಾಹಿತಿಗಳಾದ ಬನ್ನಂಜೆ ಗೋವಿಂದಾಚಾರ್ಯ, ಪ್ರೊ.ಎನ್‌.ಎಸ್‌.ಲಕ್ಷ್ಮೀನಾರಾಯಣ ಭಟ್ಟ, ಪ್ರೊ. ಸೋಮಶೇಖರ ಇಮ್ರಾಪುರ, ಪ್ರೊ.ಎಚ್‌.ಜೆ.
ಲಕ್ಕಪ್ಪಗೌಡ ಹಾಗೂ ಕಸ್ತೂರಿ ಬಾಯರಿ ಅವರಿಗೆ ಪ್ರಶಸ್ತಿ ಲಭಿಸಿದೆ. 2016ರಲ್ಲಿ ಪ್ರಕಟವಾದ 18 ಪ್ರಕಾರದ ಕೃತಿಗಳಿಗೆ ವಿಮರ್ಶಕರ ಅಭಿಪ್ರಾಯ ಆಧರಿಸಿ ವರ್ಷದ ಅತ್ಯುತ್ತಮ ಕೃತಿಗಳನ್ನು ಆಯ್ಕೆ ಮಾಡಲಾಗಿದೆ.

“ಉದಯವಾಣಿ’ಯ ಹಿರಿಯ ಮುಖ್ಯ ಉಪಸಂಪಾದಕ ಎ.ಆರ್‌.ಮಣಿಕಾಂತ್‌ ಹಾಗೂ ಪತ್ರಕರ್ತ ಹ.ಚ.ನಟೇಶಬಾಬು ಅವರ “ಗಿಫೆrಡ್‌’ (ಕಥೆಗಳು) ಅನುವಾದ- 1 (ಸೃಜನಶೀಲ ವಿಭಾಗ) ಕೃತಿಯು ಅತ್ಯುತ್ತಮ ಕೃತಿ ಪ್ರಶಸ್ತಿಗೆ ಭಾಜನವಾಗಿದೆ. ಅಕಾಡೆಮಿಯು ಇದೇ ಮೊದಲ ಬಾರಿಗೆ ನೀಡುತ್ತಿರುವ “ಸಾಹಿತ್ಯಶ್ರೀ’ ಪ್ರಶಸ್ತಿಗೆ ಪ್ರೊ.ಧರಣೇಂದ್ರ ಕುರಕುರಿ, ಫ‌ಕೀರ್‌ ಮಹಮ್ಮದ್‌ ಕಟಾ³ಡಿ,
ಡಾ.ವಿಜಯಶ್ರೀ ಸಬರದ, ಡಾ.ವಿ.ಮುನಿವೆಂಕಟಪ್ಪ, ಡಾ.ನಟರಾಜ ಹುಳಿಯಾರ್‌, ಡಾ.ಕೆ.ಕೇಶವಶರ್ಮ, ಡಾ.ಕರೀಗೌಡ ಬೀಚನಹಳ್ಳಿ, ಪ್ರೊ.ತೇಜಸ್ವಿ ಕಟ್ಟಿàಮನಿ, ಡಾ.ಕಮಲಾ ಹೆಮ್ಮಿಗೆ ಹಾಗೂ ಕಂಚ್ಯಾಣಿ ಶರಣಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ನೂತನ ಪ್ರಶಸ್ತಿಗೆ
ಭಾಜನರಾದವರಿಗೆ 25 ಸಾವಿರ ರೂ. ನಗದು, ಪ್ರಮಾಣ ಪತ್ರದ ಜತೆಗೆ ಸನ್ಮಾನಿಸಲಾಗುತ್ತದೆ. 

ಅತ್ಯುತ್ತಮ ಕೃತಿ ಪ್ರಶಸ್ತಿಗೆ ಪಾತ್ರವಾದ ಕೃತಿಗಳ ವಿವರ ಹೀಗಿದೆ.
ಕಾವ್ಯ: ಗಾಯಗೊಂಡಿದೆ ಗರಿಕೆಗಾನ- ಕೃಷ್ಣಮೂರ್ತಿ ಬಿಳಿಗೆರೆ. ಯುವಕವಿಗಳ ಪ್ರಥಮ ಸಂಕಲನ: ಕಸಬಾರಿಗೆ ಪಾದ- ಬಸವರಾಜ ಹೃತ್ಸಾಕ್ಷಿ. ಕಾದಂಬರಿ: ವೈವಸ್ವತ- ರೇಖಾ ಕಾಖಂಡಕಿ. ಸಣ್ಣಕತೆ: ಬ್ರಹ್ಮರಾಕ್ಷಸ- ಜಯಪ್ರಕಾಶ ಮಾವಿನಕುಳಿ.  ನಾಟಕ:
ಬಕಾವಲಿಯ ಹೂ- ಸುಧೀರ್‌ ಅತ್ತಾವರ್‌. ಲಲಿತ ಪ್ರಬಂಧ: ಮಿಸಳ್‌ ಭಾಜಿ- ಭಾರತಿ ಬಿ.ವಿ. ಪ್ರವಾಸ ಸಾಹಿತ್ಯ: ಯುರೋಪ್‌ನ ಧಾರ್ಮಿಕ ನೆಲೆಗಳು- ಡಾ.ಬಿ.ಎಸ್‌.ತಲ್ವಾಡಿ. ಜೀವನಚರಿತ್ರೆ: ಕಣ್ಣಾಮುಚ್ಚೇ ಕಾಡೇಗೂಡೆ- ಪ್ರೀತಿ ನಾಗರಾಜ್‌. ಸಾಹಿತ್ಯ ವಿಮರ್ಶೆ:
ಕನ್ನಡ ಕಾವ್ಯ ಮೀಮಾಂಸೆ- ಡಾ.ಎಸ್‌.ನಟರಾಜ ಬೂದಾಳು. ಗ್ರಂಥ ಸಂಪಾದನೆ: ತಿಂತಿಣಿ ಮೌನೇಶ್ವರರ ವಚನಗಳು- ಡಾ.ವೀರೇಶ ಬಡಿಗೇರ. ಮಕ್ಕಳ ಸಾಹಿತ್ಯ: ಶ್ರಮಯೇವ ಜಯತೆ- ನಿರ್ಮಲಾ ಸುರತ್ಕಲ್‌.

ವಿಜ್ಞಾನ ಸಾಹಿತ್ಯ: ಅಂತರ್ಜಲ ಬಳಕೆ- ಡಾ.ಎ.ಎಸ್‌. ಕುಮಾರಸ್ವಾಮಿ. ಮಾನವಿಕ- ದಲಿತ ಚಳವಳಿ ನಿನ್ನೆ- ಇಂದು- ನಾಳೆ- ಡಾ.ಸಣ್ಣರಾಮ. ಸಂಶೋಧನೆ: ಬೌದಟಛಿ ಧರ್ಮ ದರ್ಶನ- ಡಾ. ಶರತ್‌ಚಂದ್ರ ಸ್ವಾಮಿಗಳು. ಅನುವಾದ-2 (ಸೃಜನೇತರ):
ಅಲ್ಲಾಹ್‌ನಿಂದ ನಿರಾಕೃತರು- ಎಂ.ಅಬ್ದುಲ್‌ ರೆಹಮಾನ್‌ ಪಾಷ. ಸಂಕೀರ್ಣ: ನಮ್ಮ ಮನೆಗೂ ಬಂದರು ಗಾಂಧೀಜಿ! ಕೆಲವು ನೆನಪುಗಳು- ರಾಜೇಶ್ವರಿ ತೇಜಸ್ವಿ. ಲೇಖಕರ ಮೊದಲ ಕೃತಿ: ಮನಸು ಅಭಿಸಾರಿಕೆ (ಕಥೆಗಳು)- ಶಾಂತಿ ಕೆ. ಅಪ್ಪಣ್ಣ.
ಅಕಾಡೆಮಿಯು ಕೆಲ ಸಾಹಿತ್ಯ ಪ್ರಕಾರಗಳಿಗೆ ನೀಡುವ ದತ್ತಿ ಬಹುಮಾನಗಳನ್ನು ಪ್ರಕಟಿಸಿದೆ. ಕಾವ್ಯ- ಹಸ್ತಪ್ರತಿ (ಚಿ.ಶ್ರೀನಿವಾಸರಾಜು ದತ್ತಿನಿಧಿ ಬಹುಮಾನ): ಎರಡು ನಂಬರಿನ ಟಿಕಲಿ- ಚೈತ್ರಿಕಾ ಶ್ರೀಧರ ಹೆಗಡೆ. ಕಾದಂಬರಿ (ಚದುರಂಗ ದತ್ತಿನಿಧಿ
ಬಹುಮಾನ): ಕಾಡಂಕಲ್‌ ಮನೆ- ಮುಹಮ್ಮದ್‌ ಕುಳಾಯಿ. ಆತ್ಮಕತೆ (ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನ): ಜೀವಾತ್ಮ ಜೈತ್ರಯಾತ್ರೆ- ಡಾ.ಗುರುಪಾದ ಕೆ. ಹೆಗಡೆ. ಸಾಹಿತ್ಯ ವಿಮರ್ಶೆ (ಪಿ.ಶ್ರೀನಿವಾಸರಾವ್‌ ದತ್ತಿನಿಧಿ ಬಹುಮಾನ): ಸಾಹಿತ್ಯ ಮತ್ತು ಸಾಹಿತ್ಯೇತರ- ಎಸ್‌.ಶಿವಾನಂದ. ಅನುದಾನ-1 (ಸೃಜನಶೀಲ- ಎಲ್‌.ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ ಬಹುಮಾನ): ಒಂಟಿ
ಸೇತುವೆ- ಸ. ರಘುನಾಥ. ಲೇಖಕರ ಮೊದಲ ಸ್ವತಂತ್ರ ಕೃತಿ (ಮಧುರಚೆನ್ನ ದತ್ತಿನಿಧಿ ಬಹುಮಾನ): ಪಂಚಮುಖ (ಕಾದಂಬರಿ)- ಡಾ.ಕೆ.ಬಿ.ಶ್ರೀಧರ್‌. ಕನ್ನಡದಿಂದ ಇಂಗ್ಲಿಷಿಗೆ ಅನುವಾದ (ಅಮೆರಿಕನ್ನಡ ದತ್ತಿನಿಧಿ ಬಹುಮಾನ): ಮೋಹನ್‌ಸ್ವಾಮಿ- ರಶ್ಮಿ
ತೇರದಾಳ.

ನಗರದ ಕನ್ನಡ ಭವನದಲ್ಲಿರುವ ಅಕಾಡೆಮಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ವಿವರ ಪ್ರಕಟಿಸಿದ ಅಕಾಡೆಮಿ ಅಧ್ಯಕ್ಷ ಡಾ.ಅರವಿಂದ ಮಾಲಗತ್ತಿ, ಅಕಾಡೆಮಿ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. 60 ವರ್ಷ ಮೀರಿದ ಹಾಗೂ ಸಮಗ್ರ ಸಾಹಿತ್ಯ ಆಧರಿಸಿ 5 ಮಂದಿಯನ್ನು 2017ನೇ ಸಾಲಿನ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ 50 ಸಾವಿರ ರೂ. ನಗದು ಹಾಗೂ ಪ್ರಮಾಣ ಪತ್ರ ಒಳಗೊಂಡಿರುತ್ತದೆ ಎಂದು ಹೇಳಿದರು.

ಪ್ರಶಸ್ತಿಗೆ ಐದು ಮಂದಿಯ ಹೆಸರು ಶಿಫಾರಸು ಮಾಡುವಂತೆ 100 ಮಂದಿಗೆ ಪತ್ರ ಬರೆಯಲಾಗಿತ್ತು. ಅದರಲ್ಲಿ 60 ಮಂದಿ ಪ್ರತಿಕ್ರಿಯೆ ನೀಡಿದ್ದರು. ಹಾಗೆಯೇ ಹಿಂದಿನ ಐದು ವರ್ಷಗಳಲ್ಲಿ ಸಲ್ಲಿಕೆಯಾಗಿರುವ ಸಲಹೆ, ಅಭಿಪ್ರಾಯಗಳನ್ನೂ ಪರಿಶೀಲಿಸಿ ಚರ್ಚಿಸಿ ಅಂತಿಮವಾಗಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.  

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.