ಅನುದಾನ ಪಡೆಯಲು ದಿಂಗಾಲೇಶ್ವರರು ಲಂಚ ನೀಡಿದ್ದು ತಪ್ಪಲ್ಲವೇ :ಯತ್ನಾಳ್


Team Udayavani, Apr 19, 2022, 7:12 PM IST

Untitled-1

ವಿಜಯಪುರ: ರಾಜ್ಯ ಸರ್ಕಾರದ ವಿರುದ್ಧ ಶೇ.30 ಕಮಿಷನ್ ಆರೋಪ ಮಾಡಿರುವ ದಿಂಗಾಲೇಶ್ವರಶ್ರೀಗಳು, ಯಾರಿಗೆ ಕೊಟ್ಟರು, ಎಲ್ಲಿ ಕೊಟ್ಟರು ಎಷ್ಟು ಕೊಟ್ಟರು ಎಂಬುದಕ್ಕೆ ಸಾಕ್ಷಿ ನೀಡಲಿ. ನೀವೇಕೆ ಶೇ.30 ರಷ್ಟು ಲಂಚ ಕೊಟ್ಟು ಅನುದಾನ ಪಡೆದಿರಿ. ಅದು ತಪ್ಪಲ್ಲವೇ ಎಂಬುದನ್ನು ಸಮಾಜಕ್ಕೆ ಹೇಳಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಓರ್ವ ಮಠಾಧೀಶರಾಗಿ ಸತ್ಯ, ನ್ಯಾ, ನೀತಿ, ಧರ್ಮದ ಬಗ್ಗೆ ಪ್ರವಚನ ನೀಡುವ ಶ್ರೀಗಳು ಸಾಕ್ಷಿ ಸಮೇತ ಮಾತನಾಡಿದ ಅರ್ಥ ಬರುತ್ತದೆ. ಇಷ್ಟಕ್ಕೂ ಸತ್ಯ ಧರ್ಮದ ಬಗ್ಗೆ ಮಾತನಾಡುವ ನೀವು ಲಂಚ ಕೊಟ್ಟು ಅನುದಾನ ಪಡೆದದ್ದು ಏಕೆ ಎಂದು ಹರಿಹಾಯ್ದರು.

ಸ್ವಾಮಿಗಳಾಗಿ ಮಠದಲ್ಲಿ ಕುಳಿತು ಒಳ್ಳೆಯ ಜನರಿಗೆ ಧರ್ಮ ಸದ್ವಿಚಾರನಗಳ ಪ್ರವಚನ ಸಂದೇಶ ನೀಡುವುದು ಬಿಟ್ಟು, ರಾಜಕಾರಣ ಮಾಡಲು ಮುಂದಾಗಿದ್ದೀರಿ. ವಿಜಯೇಂದ್ರ ನೀಡಿದ ಹಣ ಪಡೆದು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಖುರ್ಚಿಯಿಂದ ಇಳಿಸಿದರೆ ಬಿಜೆಪಿ ಸರ್ವನಾಶ ಆಗತ್ತೆ. ಬಿಜೆಪಿ ನಾಶವಾಗುತ್ತದೆ ಎಂದು ಕಾವೇರಿ ನಿವಾಸದ ಎದುರು ಪ್ರವಚನ ಮಾಡಿದ್ದೀರಿ ಎಂದು ದಿಂಗಾಲೇಶ್ವರ ಶ್ರೀಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಭಾವೈಕ್ಯತೆ ವಿರೋಧಿ ಸ್ವಾಮೀಜಿ ಹೆಸರಲ್ಲಿ ಭಾವೈಕ್ಯತೆ ದಿನ: ದಿಂಗಾಲೇಶ್ವರಶ್ರೀ ಆಕ್ಷೇಪ

ಆಗ ವಿಜಯೇಂದ್ರ ನಿಮಗೆ ಎಷ್ಟು ಪರ್ಸೆಂಟೇಸ್ ಕೊಟ್ಟಿದ್ದರು ಎಂಬ ಬಗ್ಗೆ ದಿಂಗಾಲೇಶ್ವರರರು ಸಮಾಜಕ್ಕೆ ಉತ್ತರಿಸಬೇಕು. ಖಾವಿ ಹಾಕಿದ್ದೀರಿ ಎಂಬ ಕಾರಣಕ್ಕೆ ನಾವು ಗೌರವ ಕೊಡುತ್ತೇವೆ. ಹಾಗಂತ ಸ್ವಾಮಿಗಳಾದವರು ಬಾಯಿಗೆ ಬಂದಂತೆ ಮಾತನಾಡಿದರೆ ಸರಿಯಲ್ಲ. ಲಂಚ ಕೊಡೋದು ತಪ್ಪು ತಗೊಳ್ಳೋದು ತಪ್ಪು ಎಂಬುದು ಸ್ವಾಮಿಗಳಾದ ದಿಂಗಾಗಲೇಶ್ವರರಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದರು.

ಡಿಕೆ.ಶಿವಕುಮಾರ ಮನೆಗೆ ಹೋಗಿ ಮುಂದಿನ ಸಿಎಂ ಎಂದು ಆಶಿರ್ವಾದ ಮಾಡುವ ಶ್ರೀಗಳು, ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಯಲ್ಲಿ ಸಹಿತ ಹೋಗಿ ಸೂರ್ಯ, ಚಂದ್ರ ಅಂತೆಲ್ಲ ಹೊಗಳಿಕೆ ಭಾಷಣ ಮಾಡಿದ್ದಾರೆ. ದಿಂಗಾಲೇಶ್ವರರು ಹುಬ್ಬಳ್ಳಿ ಮೂರು ಸಾವಿರ ಮಠದ ಸ್ವಾಮಿಜಿಗಳಿಗೂ ಕಿರುಕುಳ ನೀಡಿದರು. ನಿಮಗೆ ರಾಜಕಾರಣದಲ್ಲಿ ಆಸಕ್ತಿ ಇದ್ದರೆ ಖಾವಿ ತೊರೆದು ನಮ್ಮಂತೆ ಖಾದಿ ಹಾಕೊಂಡು ಬನ್ನಿ ಎಂದು ಆಹ್ವಾನ ನೀಡಿದರು.

ಜನರು ಸ್ವಾಮಿಜಿ ಎಂದರೆ ಕಾಲು ಬೀಳುತ್ತಾರೆ, ಇವರನ್ನು ನೋಡಿದ್ರೆ ಮಂತ್ರಿಗಳ ಮನೆ ಮನೆಗೆ ಅಡ್ಡಾಡಿ ಶೇ.30 ಕಮನಿಷನ್ ಕೊಟ್ಟು ಮಠಕ್ಕೆ ಹಣ ತರುತ್ತಾರೆ. ಮಠಗಳನ್ನು ಭಕ್ತರು ಕಟ್ಟಬೇಕೆ ಹೊರತು ಸರ್ಕಾರವಲ್ಲ.ಸರ್ಕಾರದ ಹಣ ಪಡೆದರೆ ಭವಿಷ್ಯದಲ್ಲಿ ಆಯಾ ಪಕ್ಷದ ಪರ ಪ್ರಚಾರ ಮಾಡಬೇಕಾಗುತ್ತದೆ ಎಂದ ಶಾಸಕ ಯತ್ನಾಳ ಕುಟುಕಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.