Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ

10-20% ಬೆಲೆ ಏರಿಕೆಯ ಭಯ... ಜನಸಾಮಾನ್ಯರಿಗೆ ಬಿಯರ್ ಕೈಗೆಟುಕದಂತಾಗುತ್ತದೆ

Team Udayavani, Oct 27, 2024, 8:17 PM IST

Beer

ಬೆಂಗಳೂರು: ಬಿಯರ್‌ನಲ್ಲಿ ಆಲ್ಕೋಹಾಲ್ ಅಂಶ-ಆಧಾರಿತ ವರ್ಗೀಕರಣದ ಮೂಲಕ ಸುಂಕದ ಹೆಚ್ಚಳವನ್ನು ಪ್ರಸ್ತಾಪಿಸಿರುವ ಕರ್ನಾಟಕ ಸರಕಾರವು ಕರಡು ಅಧಿಸೂಚನೆಗಳನ್ನು ಹಿಂತೆಗೆದುಕೊಳ್ಳುವಂತೆ ಬಿಯರ್ ಅಸೋಸಿಯೇಷನ್ ​​​​ಆಫ್ ಇಂಡಿಯಾ (BAI) ಒತ್ತಾಯಿಸಿದೆ. ಸರಕಾರದ ಕ್ರಮವು 10-20 ಪ್ರತಿಶತದಷ್ಟು ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಅಸೋಸಿಯೇಷನ್ ಹೇಳಿದೆ.

ಕರಡು ಅಧಿಸೂಚನೆಯು ರಾಜ್ಯದಲ್ಲಿ ಸ್ಟ್ರಾಂಗ್ ಬಿಯರ್‌ನ ಮೇಲಿನ ಪ್ರತಿ ಬಲ್ಕ್ ಲೀಟರ್‌ಗೆ 20 ರೂ. ಅಬಕಾರಿ ಸುಂಕ ದ್ವಿಗುಣಗೊಳಿಸಲು, ಬಿಯರ್‌ನ ಕನಿಷ್ಠ ಬಿಲ್ಲಿಂಗ್ ಬೆಲೆಯನ್ನು ಪ್ರತಿ ಕೇಸ್ ಗೆ ರೂ 300 ಕ್ಕೆ ಮತ್ತು ಹೆಚ್ಚುವರಿ ಅಬಕಾರಿ ಸುಂಕವನ್ನು (AED) ಬಿಲ್ಲಿಂಗ್ ಬೆಲೆಯ ಶೇಕಡಾ 195 ಕ್ಕೆ ಅಥವಾ ಬಲ್ಕ್ ಲೀಟರ್‌ಗೆ 130 ರೂ. ಹೆಚ್ಚಿಸುವುದಾಗಿದೆ.

ಉದ್ಯಮ ಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬಿಯರ್‌ ಬಾಟಲಿಯ ಲೇಬಲ್‌ನಲ್ಲಿ ಸಕ್ಕರೆ ಅಂಶವನ್ನು ಘೋಷಿಸುವುದು ಮತ್ತು ಮಾಲ್ಟ್ /ಧಾನ್ಯದ ತೂಕದ ಶೇಕಡಾ 25 ಕ್ಕೆ ಮಿತಿಗೊಳಿಸಲು ತಯಾರಕರನ್ನು ಸೂಚಿಸಿರುವ ಪ್ರಸ್ತಾಪವನ್ನು ಹಿಂಪಡೆಯುವಂತೆಯೂ ಕೇಳಿದೆ.

“ಕರಡು ಅಧಿಸೂಚನೆಯಲ್ಲಿ ಪ್ರಸ್ತಾಪಿಸಲಾದ ಹೆಚ್ಚಳವು ಮೇನ್ ಸ್ಟ್ರೀಮ್ ಮತ್ತು ಪ್ರೀಮಿಯಂ ವಿಭಾಗಗಳಲ್ಲಿ 10-20 ಪ್ರತಿಶತದಷ್ಟು ಬೆಲೆಯನ್ನು ಹೆಚ್ಚಿಸುತ್ತದೆ. ಈ ವಿಭಾಗದಲ್ಲಿ ಪ್ರಸ್ತಾಪಿಸಲಾದ 35% ತೆರಿಗೆ ಹೆಚ್ಚಳ ಜನಸಾಮಾನ್ಯರಿಗೆ ಬಿಯರ್ ಅನ್ನು ಕೈಗೆಟುಕದಂತೆ ಮಾಡುತ್ತದೆ,”ಎಂದು BAI ಹೇಳಿದೆ.

ಕಳೆದ 12 ತಿಂಗಳುಗಳಲ್ಲಿ ಬಿಯರ್ ಬೆಲೆಗಳನ್ನು ಎರಡು ಬಾರಿ ಹೆಚ್ಚಿಸಲಾಗಿದೆ ಮತ್ತು ಕಡಿಮೆ ಸಮಯದಲ್ಲಿ ಮೂರನೇ ಹೆಚ್ಚಳವು ಉದ್ಯಮದ ಪರಿಮಾಣಕ್ಕೆ ಮತ್ತು ಬಿಯರ್ ನಿಂದ ರಾಜ್ಯದ ಆದಾಯಕ್ಕೆ ಹಾನಿಕಾರಕವಾಗಿದೆ ಎಂದು ಹೇಳಿದೆ. BAI ಸದಸ್ಯರು ಭಾರತದಲ್ಲಿ ಮಾರಾಟವಾಗುವ 85% ಬಿಯರ್‌ನ ಮಾಲಕತ್ವ ಹೊಂದಿದ್ದಾರೆ.

ಟಾಪ್ ನ್ಯೂಸ್

Ganapathi-Sangha

Udupi: ಗಣಪತಿ ಸಹಕಾರಿ ವ್ಯವಸಾಯಕ ಸಂಸ್ಥೆ ಸ್ಥಾಪಿಸಿದರ ಹಿಂದಿನ ಪರಿಶ್ರಮ ದೊಡ್ಡದು: ವೆರೋನಿಕಾ

1-eqw-ewq

BBK11: ಬಿಗ್ ಬಾಸ್ ಮನೆಗೆ ತಿಳಿಯಿತು ಸುದೀಪ್ ಮಾತೃ ವಿಯೋಗದ ಸುದ್ದಿ

kejriwal 3

Maharashtra Polls; ನಮಗೆ ಸ್ಪರ್ಧಿಸಬಹುದಿತ್ತು, ಆದರೆ..: ಆಪ್ ಹೇಳಿದ್ದೇನು?

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

1-qwe

Reliance Foundation; ನೂತನ ಆರೋಗ್ಯ ಸೇವಾ ಯೋಜನೆ ಘೋಷಿಸಿದ ನೀತಾ ಅಂಬಾನಿ

Beer

Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

MB Patil 2

Waqf; ವಿಜಯಪುರದಲ್ಲಿ ಗೆಜೆಟ್ ದೋಷದಿಂದ ರೈತರ ಜಮೀನಿನಲ್ಲಿ ಗೊಂದಲ: ಎಂ.ಬಿ.ಪಾಟೀಲ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

2

Puttur: ಬೀಡಿ ಕಳವು; ಆರೋಪಿ ಬಂಧನ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

15

Ullal: ಬಾವಿಗೆ ಬಿದ್ದ ಹೋರಿ; ಅಗ್ನಿಶಾಮಕ ದಳದ ಸಿಬಂದಿಯಿಂದ ರಕ್ಷಣೆ

16

Kadaba: ಮರಳುಗಾರಿಕೆ ಅಡ್ಡೆಗೆ ದಾಳಿ; ಮರಳು ಸಹಿತ ವಾಹನ ವಶ

complaint

Kundapura: ವರದಕ್ಷಿಣೆ ಕಿರುಕುಳ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.