![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 9, 2019, 3:02 AM IST
ಹುಬ್ಬಳ್ಳಿ: ಜನರ ನಾಡಿಮಿಡಿತ ಅರಿಯದ ಸಿದ್ದರಾಮಯ್ಯ ಅವರು ಅಹಂ ಹಾಗೂ ಸೊಕ್ಕಿನಿಂದ ಆಡಿದ ಮಾತುಗಳಿಗೆ ಜನರು ಹಾಕುವ ಕೇಕೆಯೇ ಮತ ಎಂದು ಭಾವಿಸಿದ್ದು, ಉಪ ಚುನಾವಣೆ ಫಲಿತಾಂಶ ನಂತರ ಅವರ ನಾಯಕತ್ವದ ಅಂತ್ಯ ಆರಂಭವಾಗಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಭವಿಷ್ಯ ನುಡಿದರು.
ನಗರದಲ್ಲಿ ಭಾನುವಾರ ಬಿಜೆಪಿ ಸಾಂಸ್ಥಿಕ ಚುನಾವಣೆ ವೀಕ್ಷಕರ ಸಭೆಯಲ್ಲಿ ಮಾತನಾಡಿ, “ಕೂಸು ಹುಟ್ಟುವ ಮುನ್ನವೇ ಕುಲಾವಿ’ ಎಂಬಂತೆ ಕಾಂಗ್ರೆಸ್ನವರು ವರ್ತಿಸತೊಡಗಿದ್ದಾರೆ. ಅಧಿಕಾರದ ವಿಚಾರದಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರು ಹಗಲುಗನಸು ಕಾಣುತ್ತಿದ್ದಾರೆ ಎಂದರು.
ಉಪ ಚುನಾವಣೆಯ ಮತದಾನದ ನಂತರದ ಸಮೀಕ್ಷೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬುದನ್ನು ತಿಳಿದು ಸಿದ್ದರಾಮಯ್ಯ ತಮ್ಮ ರಾಗ ಬದಲಿಸಿದ್ದಾರೆ. ಉಪ ಚುನಾವಣೆ ನಂತರ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ, ಬಳಿಕ, ಈ ತರಹದ ಹೇಳಿಕೆ ನೀಡಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ ಎಂದರು.
ಉಪ ಚುನಾವಣೆ ನಂತರ ಕಾಂಗ್ರೆಸ್ ಸೋಲಿನಿಂದ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಂಚಕಾರ ಬರುವ ಎಲ್ಲ ಸಾಧ್ಯತೆಗಳಿದ್ದು, ಸ್ಥಾನ ಉಳಿಸಿಕೊಳ್ಳುವ ಪ್ರಯತ್ನ ಬಿಟ್ಟು ಸಿದ್ದರಾಮಯ್ಯ ವಿನಾಕಾರಣ ಬಿಜೆಪಿ ವಿರುದ್ಧ ಟೀಕಿಸುತ್ತಿದ್ದಾರೆಂದು ಆರೋಪಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.