Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

ಇಂದೂ ನಗರದಲ್ಲಿ ಮಳೆ ಆರ್ಭಟ: ಹಳದಿ ಅಲರ್ಟ್‌

Team Udayavani, Oct 23, 2024, 8:09 AM IST

1-a-rain-sss

ಬೆಂಗಳೂರು: ಬೆಂಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಅ.23ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಹಾಗೂ ಖಾಸಗಿ ಅಥವಾ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ರವರು ಆದೇಶಿಸಿದ್ದಾರೆ.

ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಎಂಜಿನಿಯರಿಂಗ್‌ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಲಾಗಿದೆ. ಕಾಲೇಜು ಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜು ಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸಬೇಕು. ದುರ್ಬಲ ಅಥವಾ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಸೂಕ್ತವೆಂದು ಜಿಲ್ಲಾಧಿಕಾರಿ ಜಗದೀಶ್‌ ಸೂಚಿಸಿದ್ದಾರೆ.

ರಜೆ ನೀಡುವುದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ
ನಗರದಲ್ಲಿ ಸುರಿಯತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡುತ್ತಿರುವ ಜಿಲ್ಲಾಧಿಕಾರಿಗಳ ಕ್ರಮವನ್ನು ಕರ್ನಾಟಕ ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌) ವಿರೋಧಿಸಿದೆ. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌, ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ರಜೆ ಘೋಷಿಸುತ್ತಿರುವುದು ನಮಗೆ ಅಸಮಾಧಾನ ತಂದಿದೆ. ನಗರದ ಹಲವು ಶಾಲೆಗಳಿಗೆ ಮಳೆಯಿಂದಾಗಿ ಯಾವುದೇ ಸಮಸ್ಯೆ ಆಗುತ್ತಿಲ್ಲ. ಈಗಾಗಲೇ ದಸರಾ, ಮಳೆ ಮತ್ತೆ ಮುಂದೆ ದೀಪಾವಳಿ ರಜೆ ಎಂದು ಈ ತಿಂಗಳ ಶೈಕ್ಷಣಿಕ ಚಟುವಟಿಕೆಗೆ ಧಕ್ಕೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ.ಮಳೆಯಿಂದ ಯಾವ ಶಾಲೆಗಳಿಗೆ ಸಮಸ್ಯೆ ಆಗುತ್ತಿದೆ, ತಗ್ಗು ಪ್ರದೇಶಗಳಲ್ಲಿರುವ ಶಾಲೆಗಳು ಸ್ವಯಂಪ್ರೇರಿತವಾಗಿ ಮಕ್ಕಳಿಗೆ ರಜೆ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇಂದೂ ನಗರದಲ್ಲಿ ಮಳೆ ಆರ್ಭಟ: ಹಳದಿ ಅಲರ್ಟ್‌
ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಆರ್ಭಟ ಬುಧವಾರವೂ ಮುಂದುವರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಅ.24ರ ವರೆಗೂ ಸಾಧಾರಣ ಮಳೆ ಮುಂದುವರಿಯಲಿದೆ. ಬುಧವಾರವೂ ಭಾರಿ ಮಳೆಯಾಗುವ ಸಂಭವವಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್‌ ಘೋಷಿಸಿದೆ. ಇನ್ನು ಮಂಗಳವಾರ ಮಧ್ಯಾಹ್ನ3 ಗಂಟೆಗೆ ನಗರದೆಲ್ಲೆಡೆ ಕೆಲ ಕಾಲ ಉತ್ತಮ ಮಳೆ ಸುರಿ ದಿದೆ. ಜನ ಸಾಮಾನ್ಯರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಲಾಖೆ ನಿರ್ದೇಶಕ ಪಾಟೀಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

1

Sandalwood: ಸುಂದರ ರಾಕ್ಷಸಿ ಇವಳು!

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.