Bengaluru: ವಿಸ್ಕಿ ದರ ಶೇ.20 ಇಳಿಕೆಗೆ ರಾಜ್ಯ ಚಿಂತನೆ

ಗಡಿ ದಾಟಿ ಮದ್ಯ ಖರೀದಿಸುತ್ತಿರುವವರಿಗೆ ಬ್ರೇಕ್‌? ; ಬೆಳಗಾವಿ ಸೇರಿ ಗಡಿಭಾಗದಲ್ಲಿ ಕಡಿಮೆ ಬೆಲೆಗೆ ಲಭ್ಯ

Team Udayavani, Aug 24, 2024, 3:56 PM IST

22-whiskey-price

ಬೆಂಗಳೂರು: ಬೆಳಗಾವಿ, ಕಾರವಾರ ಸೇರಿ ರಾಜ್ಯದ ಗಡಿಭಾಗದ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಹೊರರಾಜ್ಯದ ಮದ್ಯದಂಗಡಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಜತೆಗೆ ಕಡಿಮೆ ದರಕ್ಕೆ ವಿಸ್ಕಿ (ಮದ್ಯದ ಒಂದು ವಿಧ) ರಾಜ್ಯದ ಮದ್ಯ ಪ್ರಿಯರ ಕೈ ಸೇರುತ್ತಿದೆ. ಇದರಿಂದ ಕರ್ನಾಟಕ ರಾಜ್ಯ ಅಬಕಾರಿ ಇಲಾಖೆ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ.

ಕೆಲವು ವಿಸ್ಕಿಗಳ ದರ ಹೊರ ರಾಜ್ಯದ ಮದ್ಯದ ಅಂಗಡಿ ಗಳಲ್ಲಿ ಕಡಿಮೆ ಬೆಲೆ ಇದ್ದರೆ, ಅದೇ ಮದ್ಯಕ್ಕೆ ರಾಜ್ಯದಲ್ಲಿ ಹೆಚ್ಚಿನ ದರ ತೆರಬೇಕಾಗಿದೆ. ಇದರ ವೆಚ್ಚ ಲೆಕ್ಕ ಹಾಕಿರುವ ಮದ್ಯ ಪ್ರಿಯರು ತಮ್ಮೂರಿನ ಗಡಿಭಾಗ ದಾಟಿ ಹೊರ ರಾಜ್ಯದ ಗಡಿಗಳಲ್ಲಿರುವ ಮದ್ಯಂಗಡಿಗೆ ತೆರಳಿ ಮದ್ಯ ಖರೀದಿಸುತ್ತಿದ್ದು ಇದು ರಾಜ್ಯ ಅಬಕಾರಿ ಇಲಾಖೆಯನ್ನು ಚಿಂತೆಗೀಡು ಮಾಡಿದೆ. ಕೆಲವು ವಿಸ್ಕಿ ಫ‌ುಲ್‌ ಬಾಟಲ್‌ಗ‌ಳು ಕರ್ನಾಟಕಕ್ಕಿಂತ 400-500 ರೂ. ಕಡಿಮೆ ಬೆಲೆಯಲ್ಲಿ ಸಿಗುತ್ತಿದ್ದು ಇದರಿಂದ ಮದ್ಯಪ್ರಿಯರು ಖುಷಿ ಆಗಿದ್ದಾರೆ.

ಇದರಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ರಾಜ್ಯ ಅಬ ಕಾರಿ ಇಲಾಖೆ, ಈಗ ಕೆಲವು ಮದ್ಯದ ದರಗಳಲ್ಲಿ ಶೇ.15ರಿಂದ 20ರಷ್ಟು ಇಳಿಕೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ಅಬ ಕಾರಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಕರ್ನಾ ಟಕಕ್ಕೆ ಹೋಲಿಸಿದರೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಲ್ಲಿ ಮದ್ಯದ ಬೆಲೆ ಕಡಿಮೆ ಇದೆ. ನಮ್ಮಲ್ಲಿ ದರ ಅಧಿಕವಾಗಿರುವ ಹಿನ್ನೆಲೆಯಲ್ಲಿ ಆದಾಯ ಕುಸಿಯುತ್ತಿದೆ. ಕೆಲವು ವಿಸ್ಕಿ ಬೆಲೆ ಮಹಾರಾಷ್ಟ್ರದಲ್ಲಿ ಕಡಿಮೆ ದರದಲ್ಲಿ ಗ್ರಾಹಕರಿಗೆ ಸಿಗುತ್ತಿದೆ. ರಾಜ್ಯದಲ್ಲಿ ಕೆಲವು ವಿಸ್ಕಿಗಳ ಬೆಲೆ 1,500-1.600 ರೂ. ಮಾರಾಟವಾದರೆ ನೆರೆಯ ಮಹಾರಾಷ್ಟ್ರ ಗಡಿಭಾಗದಲ್ಲಿ 1,100- 1,200 ರೂ.ಗ್ರಾಹಕರಿಗೆ ಸಿಗಲಿದೆ. ಆ ಹಿನ್ನೆಲೆ ಯಲ್ಲಿ ಗಡಿದಾಟಿ ಬೆಳಗಾವಿ ಭಾಗದ ಜನರು ತಮ್ಮೂರಿಗೆ ಹತ್ತಿರ ದಲ್ಲಿರುವ ಮದ್ಯದಂಗಡಿ ಯಲ್ಲಿ ಖರೀದಿ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಜತೆಗೆ ಹೊರ ರಾಜ್ಯದವರು ಅವರ ಗಡಿಗಳಲ್ಲಿ ಅಧಿಕ ಸಂಖ್ಯೆ ಯಲ್ಲಿ ಹೊಸದಾಗಿ ಮದ್ಯದಂಗಡಿ ತೆರೆಯುತ್ತಿ ದ್ದಾರೆ. ಈ ಹಿನ್ನೆಲೆಯಲ್ಲಿ ಗಡಿಭಾಗದ ರಾಜ್ಯದ ಮದ್ಯದ ಅಂಗ ಡಿಗಳಲ್ಲಿ ತಿಂಗಳಿಗೆ 50ರಿಂದ 60 ಸಾವಿರ ರೂ. ಆದಾ ಯ ಹೆಚ್ಚಿಗೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈನಲ್ಲಿ ಬೆಲೆ ಇಳಿಕೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಕೆಲವು ಕಾರಣಗಳಿಂದಾಗಿ ಅಧಿಸೂಚನೆಯನ್ನು ತಡೆಹಿಡಿಯಲಾಗಿದೆ. ಈ ವಿಷಯದ ಬಗ್ಗೆ ಸ್ಪಷ್ಟತೆಯ ಕೊರತೆಯಿಂದಾಗಿ ರಾಜ್ಯ ಪಾನೀಯ ನಿಗಮವು ಹೊಸ ಪರವಾನಗಿ ನೀಡುವುದನ್ನು ವಿಳಂಬ ಗೊಳಿಸಿದೆ. ಇದರಿಂದ ಅಂತಿಮ ಅಧಿಸೂಚನೆ ಬಿಡುಗಡೆ ಮಾಡುವಲ್ಲಿನ ವಿಳಂಬವು ದರ ಪರಿಷ್ಕರಣೆ ನಿರ್ಧಾರವೂ ಮುಂದೆ ಹೋಗಿದೆ ಎಂದು ಮೂಲಗಳು ಹೇಳಿವೆ.

ಕರ್ನಾಟಕದಲ್ಲಿ ಮದ್ಯದ ಬಳಕೆ ದಕ್ಷಿಣ ಭಾರತದ ರಾಜ್ಯಗಳಿಗಿಂತ ಹೆಚ್ಚಿದ್ದರೂ ದರ ಕೊಂಚ ಹೆಚ್ಚೇ ಇತ್ತು. ಪ್ರೀಮಿಯಂ ಬ್ರಾಂಡ್‌ಗಳ ಮದ್ಯದ ದರಗಳಲ್ಲಿ ಪರಿಷ್ಕರಣೆ ಮಾಡಬೇಕು ಎನ್ನುವ ಬೇಡಿಕೆ ಕೆಲ ದಿನಗಳಿಂದಲೇ ಇತ್ತು. ಲೋಕಸಭೆ ಚುನಾವಣೆ ಮುಗಿದ ನಂತರ ದರ ಪರಿಷ್ಕರಣೆ ಆಗುವ ಲೆಕ್ಕಾಚಾರದ್ದು, ಜಾರಿ ಸಾಧ್ಯತೆಗಳು ಹೆಚ್ಚಿವೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.