“ಬೆಂಗಳೂರು ಹಂಸ’ಕ್ಕೆ ಐಟಿ-ಬಿಟಿ ರೆಕ್ಕೆಗಳು…!


Team Udayavani, Nov 18, 2021, 6:00 AM IST

“ಬೆಂಗಳೂರು ಹಂಸ’ಕ್ಕೆ ಐಟಿ-ಬಿಟಿ ರೆಕ್ಕೆಗಳು…!

ಬೆಂಗಳೂರು: ನಗರದಲ್ಲಿ ಸುಮಾರು ಎರಡು ಮಿಲಿಯನ್‌ ಸಾಫ್ಟ್ ವೇರ್‌ ಎಂಜಿನಿಯರ್‌ಗಳಿದ್ದರೆ, ಒಂದು ಮಿಲಿಯನ್‌ ಜೈವಿಕ ತಂತ್ರಜ್ಞರಿದ್ದಾರೆ. ಈ ಎರಡೂ ಬಲಿಷ್ಠ ರೆಕ್ಕೆಗಳ ಸಹಾಯದಿಂದ ತಂತ್ರಜ್ಞಾನ ರಾಜಧಾನಿ “ಬೆಂಗಳೂರು ಹಂಸ’ವನ್ನು ಅತಿ ಎತ್ತರಕ್ಕೆ ಕೊಂಡೊಯ್ಯೋಣ…!

– ಬೆಂಗಳೂರು ಟೆಕ್‌ ಸಮಿಟ್‌ನಲ್ಲಿ ಬುಧವಾರ ತಂತ್ರಜ್ಞಾನ ಕ್ಷೇತ್ರದ ದಿಗ್ಗಜರು ಹಂಸದ ಪರಿಕಲ್ಪನೆಯೊಂದಿಗೆ ಹೀಗೆ ಸಾಹಿತ್ಯಿಕವಾಗಿ ವಿಶ್ಲೇಷಿಸಿ ಗಮನಸೆಳೆದರು. ಇದಕ್ಕೆ ಕರತಾಡನವೂ ಮೊಳಗಿದವು. ಈ ಹಂಸದ ಹೋಲಿಕೆಗೆ ಪೀಠಿಕೆ ಇಟ್ಟವರು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ನಂತರ ಉಳಿದವರು ಅದಕ್ಕೆ ರೆಕ್ಕೆ ಕಟ್ಟಿದವರು ವಿಜನ್‌ ಗ್ರೂಪ್‌ಗಳ ಅಧ್ಯಕ್ಷರು.

ಉದ್ಘಾಟನೆ ನಂತರ ನಡೆದ ಗೋಷ್ಠಿಯಲ್ಲಿ “ಬೆಂಗಳೂರು ಐಟಿ, ಬಿಟಿ, ಸ್ಟಾರ್ಟ್‌ಅಪ್‌, ಇನ್ನೋವೇಷನ್‌ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಇಡೀ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಹಾಗಂತ, ಮೈಮರೆತು ಕುಳಿತುಕೊಳ್ಳುವಂತಿಲ್ಲ. ಈ ಸ್ಥಾನವನ್ನು ಕಾಯ್ದುಕೊಳ್ಳುವುದರ ಜತೆಗೆ ಮತ್ತಷ್ಟು ಪ್ರಗತಿ ಸಾಧಿಸಬೇಕಾದರೆ, ಲಭ್ಯವಿರುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಅವಶ್ಯಕತೆ ಇದೆ. ಇದಕ್ಕಾಗಿ ಭವಿಷ್ಯದಲ್ಲಿ ಟೆಕ್‌ ಸಮಿಟ್‌ ಇನ್ನಷ್ಟು ವ್ಯಾಪಕವಾಗಿ ವಿಸ್ತಾರಗೊಳ್ಳಬೇಕು’ ಎಂಬ ಕೂಗು ತಂತ್ರಜ್ಞಾನ ದಿಗ್ಗಜರಿಂದ ಒಕ್ಕೊರಲಿನಿಂದ ಕೇಳಿಬಂತು.

ರಾಜ್ಯ ಐಟಿ ವಿಜನ್‌ ಗ್ರೂಪ್‌ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣನ್‌ ಮಾತನಾಡಿ, “ಬೆಂಗಳೂರು ಭಾರತದ ತಂತ್ರಜ್ಞಾನಗಳ ರಾಜಧಾನಿ. ಇದರಲ್ಲಿ ಎರಡು ಮಾತಿಲ್ಲ. ಆದರೆ, ಇದನ್ನು ಕಾಯ್ದುಕೊಳ್ಳಬೇಕಾದರೆ, ಟೆಕ್‌ ಸಮಿಟ್‌ ಇನ್ನಷ್ಟು ವಿಸ್ತಾರಗೊಳ್ಳಬೇಕು. ಮತ್ತಷ್ಟು ತಂತ್ರಜ್ಞಾನಗಳು, ಆವಿಷ್ಕಾರಗಳು, ಹೊಸ ಸ್ಪೀಕರ್‌ಗಳನ್ನು ಇದಕ್ಕೆ ಕರೆತರಬೇಕು. ಈಗಿರುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದರು.

ಇದನ್ನೂ ಓದಿ:ಕಾಂಗ್ರೆಸ್‌ ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ: ಜೆಪಿ ನಡ್ಡಾ

ಸ್ಟಾರ್ಟ್‌ಅಪ್‌ ವಿಜನ್‌ ಗ್ರೂಪ್‌ ಅಧ್ಯಕ್ಷ ಪ್ರಶಾಂತ್‌ ಪ್ರಕಾಶ್‌ ಮಾತನಾಡಿ, “90ರ ದಶಕದಲ್ಲಿ ಚೀನಾದ ಕಾಲವಾಗಿತ್ತು. ಅದರ ನೀತಿಗಳಿಂದ ಜಾಗತಿಕವಾಗಿ ಚೀನಾದತ್ತ ಬಂಡವಾಳ ಹರಿದುಬಂತು. ಆದರೆ, ಈಗ ಭಾರತದ ಮತ್ತು ಕರ್ನಾಟಕದ ಯುಗ ಆರಂಭಗೊಂಡಿದೆ. ಕೊರೊನಾ ಹಾವಳಿ ನಡುವೆಯೂ ಹಿಂದಿನ ಒಂದು ತ್ತೈಮಾಸಿಕದಲ್ಲಿ ಸ್ಟಾರ್ಟ್‌ಅಪ್‌ನಲ್ಲಿ 10 ಬಿಲಿಯನ್‌ ಡಾಲರ್‌ ಹರಿದುಬಂದಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ, ಹೆಚ್ಚು-ಕಡಿಮೆ ಸರಿಸಮವಾಗಿದೆ. ನಾವು ಇಷ್ಟಕ್ಕೇ ತೃಪ್ತಿಪಟ್ಟರೆ ಸಾಲದು, ಮುಂದಿನ ಎರಡು ದಶಕಗಳಲ್ಲಿ “ಡೀಪ್‌ ಟೆಕ್‌’ (ಬಹು ತಂತ್ರಜ್ಞಾನಗಳ ಮಿಶ್ರಣ) ಮತ್ತು ಕ್ಲೈಮ್ಯಾಟೆಕ್‌ಗಳು ಆಳಲಿವೆ. ಇದಕ್ಕೆ ನಾವು ಸಜ್ಜಾಗಬೇಕಿದೆ’ ಎಂದರು.

ರಾಜ್ಯ ಬಿಟಿ ವಿಜನ್‌ ಗ್ರೂಪ್‌ ಅಧ್ಯಕ್ಷೆ ಕಿರಣ್‌ ಮಜೂಂದಾರ್‌ ಷಾ ಮಾತನಾಡಿ, ನಗರದಲ್ಲಿ 20 ಲಕ್ಷ ಸಾಫ್ಟ್ವೇರ್‌ ಎಂಜಿನಿಯರ್‌ಗಳು ಮತ್ತು ಹತ್ತು ಲಕ್ಷ ಬಯಾಲಜಿಸ್ಟ್‌ಗಳಿದ್ದಾರೆ. ಇವರಿಬ್ಬರೂ ಹಂಸದ ಎರಡು ಬಲಿಷ್ಠ ರೆಕ್ಕೆಗಳಾಗಿವೆ. ಇದರ ಸಹಾಯದಿಂದ ನಾವು “ಬೆಂಗಳೂರು’ ಹಂಸವನ್ನು ಅತಿ ಎತ್ತರಕ್ಕೆ ಕೊಂಡೊಯ್ಯಬೇಕಿದೆ ಎಂದರು.

ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಂಸ ನೋಡಲು ಅತಿ ದೊಡ್ಡದು ಮತ್ತು ಭಾರವಾದದ್ದು. ಆದರೆ, ಅತಿ ಎತ್ತರಕ್ಕೆ ಹಾರಬಲ್ಲ ಏಕೈಕ ಪಕ್ಷಿಯೂ ಇದಾಗಿದೆ. ಕರ್ನಾಟಕ ಮತ್ತು ಬೆಂಗಳೂರು ಕೂಡ ಒಂದು ದೊಡ್ಡ ಹಂಸವಾಗಿದ್ದು, ಅದನ್ನು ಅತಿ ಎತ್ತರಕ್ಕೆ ಕೊಂಡೊಯ್ಯಬೇಕಿದೆ ಎಂದು ಹೇಳಿದರು.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.