ಭಾಗವತ್‌ ಹೇಳಿಕೆಗೆ ಆರ್‌ಎಸ್‌ಎಸ್‌ ಸ್ಪಷ್ಟನೆ


Team Udayavani, Feb 13, 2018, 8:15 AM IST

a-7.jpg

ನವದೆಹಲಿ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಭಾರತೀಯ ಸೇನೆಯ ಬಗ್ಗೆ ಭಾನುವಾರ ನೀಡಿದ್ದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಸೋಮವಾರ ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೆಸ್ಸೆಸ್‌, “ಭಾಗವತ್‌ರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದು ಹೇಳಿದೆ.

“”ಗಡಿಯಲ್ಲಿ ಯುದ್ಧ ಏರ್ಪಟ್ಟರೆ, ದೇಶದ ಪ್ರತಿಯೊಬ್ಬ ನಾಗರಿಕ ಒಬ್ಬ ಯೋಧನಂತೆ ಸಜ್ಜುಗೊಂಡು ಸೈನಿಕರಿಗೆ ನೆರವಾಗಬೇಕು. ಅಂಥ ಸಂದರ್ಭಗಳಲ್ಲಿ, ಜನ ಸಾಮಾನ್ಯರನ್ನು ಸೈನಿಕರಂತೆ ಹುರಿಗೊಳಿಸಲು ಸೈನ್ಯಕ್ಕೆ 6 ತಿಂಗಳು ಬೇಕಾದರೆ, ಆರೆಸ್ಸೆಸ್‌ ಕಾರ್ಯಕರ್ತರಿಗೆ ಕೇವಲ 3 ದಿನ ಸಾಕು. ಸ್ವಯಂ ಸೇವಕರು, ನಿತ್ಯವೂ ನಿಯಮಿತ ಅಭ್ಯಾಸಗಳಿಂದ ಶಿಸ್ತನ್ನು ಮೊದಲೇ ಮೈಗೂಡಿಸಿ ಕೊಂಡಿರುವುದರಿಂದ ಇದು ಬೇಗನೇ ಸಾಧ್ಯವಾಗುತ್ತದೆ ಎಂಬುದನ್ನು ಹೇಳಲು ಭಾಗವತ್‌ ಪ್ರಯತ್ನಿಸಿದ್ದಾರೆ” ಎಂದು ಆರೆಸ್ಸೆಸ್‌ ತಿಳಿಸಿದೆ. ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಕಿರಣ್‌ ರಿಜಿಜು ಸಹ ಟ್ವಿಟರ್‌ನಲ್ಲಿ ಆರೆಸ್ಸೆಸ್‌ ಸ್ಪಷ್ಟನೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಭಾಗವತ್‌ ಹೇಳಿಕೆಯು ಪ್ರತಿಪಕ್ಷ ಗಳನ್ನು ಕೆರಳಿಸಿದ್ದು, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, “”ಇಂಥ ಹೇಳಿಕೆ ನೀಡುವ ಮೂಲಕ ಭಾಗವತ್‌ ಅವರು ದೇಶಕ್ಕಾಗಿ ಜೀವವನ್ನೇ ಪಣಕ್ಕಿಟ್ಟ ಹುತಾತ್ಮರಿಗೆ ಹಾಗೂ ಸಮಸ್ತ ಭಾರತೀಯ ಸೇನೆಗೆ ಅಪಮಾನ ಮಾಡಿದ್ದಾರೆ. ಸೈನಿಕರಿಗೆ ಅಪಮಾನ ಮಾಡಿದರೆ ಅದು ರಾಷ್ಟ್ರ ಧ್ವಜಕ್ಕೂ ಅಪಮಾನ ಮಾಡಿದಂತೆ. ಹಾಗಾಗಿ, ಕೂಡಲೇ ಭಾಗವತ್‌ ಸೇನೆಯ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ. 

ಕಾಂಗ್ರೆಸ್‌ ವಕ್ತಾರ ಆನಂದ್‌ ಶರ್ಮಾ, “”ಭಾಗವತ್‌ ಅವರ ಹೇಳಿಕೆ ತಲ್ಲಣಗೊಳಿಸು ವಂಥದ್ದು, ಆಫ‌^ನ್‌, ಸಿರಿಯಾ, ಇರಾಕ್‌, ಸೊಮಾಲಿಯಾ, ಕಾಂಗೋ ರಾಷ್ಟ್ರಗಳು ತಮ್ಮ ಅಧಿಕೃತ ಸೇನೆಗಳ ಬದಲಿಗೆ ಖಾಸಗಿ ಸೇನೆಗಳನ್ನು ಬಳಸಿ ಅಧಃಪತನ ಕಂಡಿವೆ. ಅಂಥ ಪರಿಸ್ಥಿತಿ ಭಾರತದಲ್ಲಿ ಉದ್ಭವವಾಗಲು ಬಿಡುವುದಿಲ್ಲ’ ಎಂದು ಗುಡುಗಿದ್ದಾರೆ. 

ಭಾಗವತ್‌ ಹೇಳಿದ್ದೇನು?
ಬಿಹಾರದ ಮುಜಫ‌ರ್‌ಪುರದಲ್ಲಿ ಭಾನುವಾರ ನಡೆದಿದ್ದ ಆರೆಸ್ಸೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಭಾಗವತ್‌, “”ಗಡಿ ಭಾಗದಲ್ಲಿ ಯುದ್ಧ ಸನ್ನಿವೇಶ ಏರ್ಪಟ್ಟರೆ ಆರೆಸ್ಸೆಸ್‌ ಕೇವಲ ಮೂರೇ ದಿನಗಳಲ್ಲಿ ಯುದ್ಧಕ್ಕೆ ಸೈನಿಕರನ್ನು ಸಿದ್ಧಗೊಳಿಸುತ್ತದೆೆ. ಆದರೆ, ಭಾರತೀಯ ಸೇನೆಗೆ ಯುದ್ಧಕ್ಕೆ ಸಿದ್ಧವಾಗಬೇಕಾದರೆ ಆರು ತಿಂಗಳೇ ಬೇಕಾಗುತ್ತದೆ. ಈ ದೇಶದ ಸಂವಿಧಾನ ನಮಗೆ (ಆರೆಸ್ಸೆಸ್‌) ಅವಕಾಶ ಕೊಟ್ಟರೆ, ಭಾರತೀಯ ಸೇನೆಯ ನೇತೃತ್ವ ವಹಿಸಿಕೊಳ್ಳಲು ನಾವು ಸಿದ್ಧ” ಎಂದಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.