Bhavani Revanna Case: ತೀರ್ಪು ಕಾದಿರಿಸಿದ ಹೈಕೋರ್ಟ್
ಆದೇಶ ಹೊರಬೀಳುವವರೆಗೆ ನಿರೀಕ್ಷಣ ಮಧ್ಯಾಂತರ ಜಾಮೀನು ಮುಂದುವರಿಸಿದ ಉಚ್ಚ ನ್ಯಾಯಾಲಯ
Team Udayavani, Jun 14, 2024, 11:20 PM IST
ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ನೀಡಿರುವ ಮಧ್ಯಾಂತರ ನಿರೀಕ್ಷಣ ಜಾಮೀನು ಸಂಬಂಧ ವಾದ- ಪ್ರತಿವಾದ ಆಲಿಸಿದ ಹೈಕೋರ್ಟ್ ತೀರ್ಪನ್ನು ಕಾದಿರಿಸಿತು. ಅದರಂತೆಆದೇಶ ಹೊರಬೀಳುವವರೆಗೆ ಭವಾನಿಗೆ ನೀಡಲಾಗಿದ್ದ ಮಧ್ಯಾಂತರ ನಿರೀಕ್ಷಣ ಜಾಮೀನು ಮುಂದುವರಿಯಲಿದೆ.
ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಈ ವೇಳೆ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ವಿಶೇಷ ಎಸ್ಪಿಪಿ ಪ್ರೊ| ರವಿವರ್ಮ ಕುಮಾರ್, ಭವಾನಿ ರೇವಣ್ಣ ತನಿಖೆಗೆ ಸಹಕರಿಸುತ್ತಿಲ್ಲ. ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದೆ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಆ ಮೂಲಕ ತನಿಖೆಗೆ ಸಹಕರಿಸಬೇಕೆಂಬ ನಿರೀಕ್ಷಣ ಜಾಮೀನಿನ ಷರತ್ತುಗಳನ್ನು ಉಲ್ಲಂ ಸಿದ್ದಾರೆ. ಮೊಬೈಲ್ ವಶಪಡಿಸಿಕೊಳ್ಳಬೇಕಾಗಿದೆ, ಸ್ಥಳ ಮಹಜರು ನಡೆಸಬೇಕಾಗಿದೆ ಹಾಗಾಗಿ ಅವರನ್ನು ಬಂಧಿಸಿಯೇ ವಿಚಾರಣೆಗೆ ಒಳಪಡಿಸಬೇಕಾಗಿದೆ. ಆದ್ದರಿಂದ ಅವರಿಗೆ ನಿರೀಕ್ಷಣ ಜಾಮೀನನ್ನು ಮುಂದುವರಿಸಬಾರದು ಎಂದು ಬಲವಾಗಿ ವಾದಿಸಿದರು.
ಅರ್ಜಿದಾರರಿಗೆ ನ್ಯಾಯಾಲಯ ಕಳೆದ ವಾರ ಮಂಜೂರು ಮಾಡಿರುವ ನಿರೀಕ್ಷಣ ಜಾಮೀನನ್ನು ಯಾವುದೇ ಕಾರಣಕ್ಕೂ ಮುಂದುವರಿಸಬಾರದು. ನ್ಯಾಯಾಲಯದ ನಿರ್ದೇಶನದಂತೆ ಭವಾನಿ ತನಿಖೆಗೆ ಸಹಕಾರ ನೀಡುತ್ತಿಲ್ಲ, ಅಸಹಕಾರ ತೋರುತ್ತಿರುವುದರಿಂದ ತನಿಖೆ ಮುಂದುವರಿಸಲಾಗುತ್ತಿಲ್ಲ. ಮೂರು ದಿನ ತನಿಖೆಗೆ ಹಾಜರಾದರೂ ಎಲ್ಲ ಪ್ರಶ್ನೆಗಳಿಗೂ ನೋ ಎಂಬ ಉತ್ತರ ನೀಡಿದ್ದಾರೆ. ಫೋನ್ ಕೋಡುತ್ತಿಲ್ಲ. ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ ಎಂದರು.
ಆಗ ನ್ಯಾಯಪೀಠ, ಪ್ರಾಸಿಕ್ಯೂಷನ್ ಕೇಳಿದ ಪ್ರಶ್ನೆಗೆ ಉತ್ತರ ಹೇಳುವುದು ಬಿಡು ವುದು ಆರೋಪಿಗೆ ಬಿಟ್ಟ ವಿಚಾರ. ಜತೆಗೆ ಪ್ರಾಸಿಕ್ಯೂಷನ್ ಹೀಗೇ ಉತ್ತರ ನೀಡಬೇಕೆಂದು ಬಯಸುವುದು ಸರಿಯಲ್ಲ ಎಂದಿತು.3 ದಿನಗಳ ವಿಚಾರಣೆ ವೇಳೆ ಭವಾನಿ ಅವರನ್ನು ಕೇಳಿದ ಪ್ರಶ್ನಾವಳಿಗಳ ಹಾಗೂ ಉತ್ತರಗಳನ್ನು ಪರಿಶೀಲಿಸಿದ ನ್ಯಾಯಪೀಠ, ಆರೋಪಿ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದಾರೆ. ಆದರೆ ನಿಮಗೆ ಬೇಕಾದ ಉತ್ತರವನ್ನು ಅವರು ಕೊಡಲು ಸಾಧ್ಯವಿಲ್ಲ. ಅವರು ತಮಗೆ ತಿಳಿದಿದ್ದನ್ನು ಹೇಳಿದ್ದಾರೆ. ಅದು ಅಸಹ ಕಾರ ಎಂದು ಹೇಳುವುದು ಹೇಗೆ ಎಂದು ಪ್ರಶ್ನಿಸಿತು.
ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ತೀರ್ಪು ಕಾದಿರಿಸಿ, ಅಲ್ಲಿವರೆಗೆ ನಿರೀಕ್ಷಣ ಜಾಮೀನು ಮುಂದುವರಿಯಲಿದೆ ಎಂದು ಹೇಳಿತು. ಅಲ್ಲದೆ, ಮೈಸೂರಿನ ಕೆ.ಆರ್.ನಗರ ಹಾಗೂ ಹಾಸನ ಜಿಲ್ಲೆಗೆ ಪ್ರವೇಶಿಸುವಂತಿಲ್ಲ ಎಂಬ ಷರತ್ತನ್ನು ಮಾರ್ಪಡಿಸಿದ ನ್ಯಾಯಪೀಠ, ಮೈಸೂರು ಜಿಲ್ಲೆ ಹಾಗೂ ಹಾಸನ ಜಿಲ್ಲೆಗೆ ಭವಾನಿ ರೇವಣ್ಣ ಹೋಗುವಂತಿಲ್ಲ. ಆದರೆ ತನಿಖಾ ದೃಷ್ಟಿಯಿಂದ ತನಿಖಾಧಿಕಾರಿಗಳು ಕೆರೆದುಕೊಂಡ ಹೋಗಬೇಕಾದರೆ ಈ ಷರತ್ತು ಅನ್ವಯ ಆಗಲ್ಲ ಎಂದು ನ್ಯಾಯಪೀಠ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.