Bidar; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ: ಪುಳಕಿತರಾದ ಜನರು

ಶನಿವಾರವೂ ಏರ್ ಶೋ ನಡೆಯಲಿದೆ

Team Udayavani, Aug 30, 2024, 6:07 PM IST

1-bidar-1

ಬೀದರ್ : ಜಿಲ್ಲಾಡಳಿತದ ಸಹಯೋಗದಲ್ಲಿ ನಗರದ ಐತಿಹಾಸಿಕ ಬಹುಮನಿ ಕೋಟೆ ಪರಿಸರದಲ್ಲಿ ಶುಕ್ರವಾರ(ಆ30) ಭಾರತೀಯ ವಾಯು ಪಡೆ ತರಬೇತಿ ಕೇಂದ್ರ ನಡೆಸಿದ ವೈಮಾನಿಕ ಪ್ರದರ್ಶನ (Airshow) ಗಮನ ಸೆಳೆಯಿತು. ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ, ನರ್ತನದ ದೃಶ್ಯವನ್ನು ಸಾವಿರಾರು ಜನರು ಕಣ್ತುಂಬಿಕೊಂಡರು.

ಸ್ವದೇಶಿ ನಿರ್ಮಿತ ಸೂರ್ಯಕಿರಣ ಯುದ್ಧ ವಿಮಾನಗಳು ಆಗಸದಲ್ಲಿ ಬಗೆ ಬಗೆಯ ಸ್ಟಂಟ್‌ಗಳನ್ನು ಮಾಡಿ ಮೈ ರೋಮಾಂಚನಗೊಳಿಸಿತು. ಸೂರ್ಯಕಿರಣದ 9 ಏರ್ ಕ್ರಾಫ್ಟ್‌ಗಳು ಕೋಟೆ ಮೇಲೆ ಪ್ರವೇಶಿಸುತ್ತಿದ್ದಂತೆ ವೀಕ್ಷಕರು ನಭದತ್ತಲೇ ದೃಷ್ಟಿ ನೆಟ್ಟಿದ್ದರು. ಸುಮಾರು ಅರ್ಧ ಗಂಟೆಗಳ ಕಾಲ ಚೇತೋಹಾರಿ ಪ್ರದರ್ಶನ ನೀಡಿದ ವಿಮಾನಗಳು ಕೈಗಟ್ಟುವಂತೆ ಭಾಸವಾಗಿ ಒಂದಾಂದ ಮೇಲೋಂದು ತಂಡದೊಂದಿಗೆ ಪ್ರದರ್ಶನ ನೀಡಿ ರಂಜಿಸಿದವು. ಬಗೆ ಬಗೆಯ ಸಾಹಸ ಪ್ರದರ್ಶಿಸಿ ಚಿತ್ತಾರ ಮೂಡಿಸಿದ್ದಲ್ಲದೇ ಮೂಲಕ ನೆರೆದಿದ್ದವರ ಎದೆ ಝಲ್ ಎನಿಸುವಂತೆ ಮಾಡಿದವು.

ಐಎಎಫ್‌ನ ವಿಶೇಷತೆಯನ್ನು ಧ್ವನಿವರ್ಧಕ ಮೂಲಕ ತಿಳಿಸುತ್ತಿದ್ದಂತೆ ಮಕ್ಕಳ ಹಷೋದ್ಘಾರ, ಶಿಳ್ಳೆ ಮುಗಿಲು ಮುಟ್ಟಿತ್ತು. ಸೂರ್ಯಕಿರಣ ಏರೋಬ್ಯಾಟಿಕ್ ಟೀಮ್‌ನ ಗ್ರೂಪ್ ಕ್ಯಾಪ್ಟನ್ ಗುರಪ್ರೀತಸಿಂಗ್ ದಿಲ್ಲೊನ್ (ಕಮಾಂಡಿಂಗ್ ಆಫಿಸರ್) ನಾಯಕ್ವತದಲ್ಲಿ ಆಕರ್ಷಕ ಏರ್ ಶೋ ಪ್ರದರ್ಶನಗೊಂಡಿತು. ಜಿಲ್ಲಾಡಳಿತದ ಮನವಿ ಮೇರೆಗೆ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ಸಾರ್ವಜನಿಕರು ಕೋಟೆಯಲ್ಲಿ ಜಮಾಯಿಸಿದ್ದರು. ಸೂರ್ಯಕಿರಣದ ಸ್ಟಂಟ್‌ಗಳ ಸೊಬಗು ಹಿಡಿಯಲು ಪ್ರೇಕ್ಷಕರು ಛಾಯಾಚಿತ್ರ ತೆಗೆಯಲು ಮುಗಿಬಿದ್ದರು.

ಸೂರ್ಯಕಿರಣ ಯುದ್ಧ ವಿಮಾನಗಳು ಬೀದರ್ ವಾಯು ಪಡೆ ಕೇಂದ್ರದ ಹೆಮ್ಮೆ ಎನಿಸಿಕೊಂಡಿದ್ದವು. ಪ್ರತಿ ದಿನ ಕೇಂದ್ರದ ಸುತ್ತ ಮುತ್ತಲೂ ತರಬೇತಿ ಪಡೆಯುತ್ತಿದ್ದ ಪೈಲಟ್‌ಗಳು ಬಾನಂಗಳದಲ್ಲಿ ಸಾಹಸ ಪ್ರದರ್ಶನಗಳು ನೋಡುಗರನ್ನು ಮಂತ್ರ ಮುಗ್ಧರನ್ನಾಗಿ ಮಾಡುತ್ತಿದ್ದವು. ಆದರೆ, ನಗರದ ಹೊರವಲಯದಲ್ಲಿ2006 ಮತ್ತು 2015ರಲ್ಲಿ ಸೂರ್ಯಕಿರಣ ವಿಮಾನಗಳ ಪತನಗೊಂಡು ಪೈಲಟ್‌ಗಳ ಸಾವು ಸಂಭವಿಸಿತ್ತು. ಇದಾದ ಬಳಿಕ ಬೀದರ ವಾಯು ಪಡೆಯಲ್ಲಿ ಸೂರ್ಯಕಿರಣ ತರಬೇತಿ ನಿಲ್ಲಿಸಿ, ಹಾಕ್ ಯುದ್ಧ ವಿಮಾನಗಳು ಸೇರ್ಪಡೆ ಮಾಡಿಕೊಳ್ಳಲಾಯಿತು.

ಆದರೆ, 2022ರಲ್ಲಿ ಜಿಲ್ಲಾಡಳಿತದ ಮನವಿ ಮೇರೆಗೆ ವಾಯು ಪಡೆಯಿಂದ ಏರ್ ಶೋ ನಡೆಸಿ ಸಾರ್ವಜನಿಕರ ಮನ ರಂಜಿಸಿತ್ತು. ನಂತರ 2023 ರಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸಲಾಗಿತ್ತು. ಆದರೆ, ಹವಾಮಾನ ವೈಪ್ಯರಿತ್ಯದಿಂದಾಗಿ ಕೊನೆಗಳಿಗೆಯಲ್ಲಿ ರದ್ದುಗೊಳಿಸಿದ್ದರಿಂದ ಜನರಿಗೆ ನಿರಾಶೆಯಾಗಿತ್ತು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ ಸಿಇಒ ಡಾ. ಗಿರೀಶ್ ಬದೋಲೆ, ಜಿಲ್ಲಾ ಎಸ್‌ಪಿ ಪ್ರದೀಪ್ ಗುಂಟಿ ಮತ್ತು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ವಾಯು ಪಡೆಯ ಎಒಸಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಏರ್ ಶೋಗೆ ಸಾಕ್ಷಿಯಾದರು.

ವಾಯು ಪಡೆ ನೆಲದಲ್ಲಿ ಸೂರ್ಯಕಿರಣ ಯುದ್ದ ವಿಮಾನಗಳ ವೈಮಾನಿಕ ಪ್ರದರ್ಶನ ವೀಕ್ಷಣೆಗೆ ಶುಕ್ರವಾರ ಕೇವಲ ಸಾರ್ವಜನಿಕರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಶನಿವಾರವೂ (ಆ31) ಜಿಲ್ಲೆಯ ಶಾಲಾ- ಕಾಲೇಜು ವಿದ್ಯಾರ್ಥಿಗಳು ಮತ್ತು ಸರ್ಕಾರಿ ನೌಕರರ ವೀಕ್ಷಣೆಗಾಗಿ ಏರ್ ಶೋ ನಡೆಯಲಿದೆ.

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.