Bidar: ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
Team Udayavani, Sep 10, 2024, 8:24 PM IST
ಬೀದರ್: ಕಾಮಗಾರಿಯ ಬಿಲ್ ಗಾಗಿ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದ ಘಟನೆ ಸೆ.10ರ ಮಂಗಳವಾರ ನಡೆದಿದೆ.
ತಾಲೂಕಿನ ಕೋಸಂ ಗ್ರಾ.ಪಂ. ಪಿಡಿಒ ರಾಹುಲ್ ದಂಡೆ ಹಾಗೂ ತಾ.ಪಂ. ತಾಂತ್ರಿಕ ಸಹಾಯಕ (ನರೇಗಾ) ಸಿದ್ರಾಮೇಶ್ವರ ಬಂಧಿತರು.
ಕೋಸಂ ಗ್ರಾ.ಪಂ. ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಗುತ್ತಿಗೆದಾರ ಸುನೀಲ ಸಕಾರಾಮ ಪಡೆದಿದ್ದರು. ಅನ್ಯ ಕೆಲಸದಲ್ಲಿ ನಿರತರಾಗಿದ್ದರಿಂದ ಸುನೀಲ ಸೂಚನೆ ಮೇರೆಗೆ 15 ಕಾಮಗಾರಿಗಳನ್ನು ಗುತ್ತಿಗೆದಾರ ಅರವಿಂದ ಮಾಧವರಾವ ಭಾಲ್ಕೆ ಮಾಡಿದ್ದರು. ಬಿಲ್ ಮೊತ್ತ ಬಿಡುಗಡೆ ಮಾಡುವಂತೆ ಗುತ್ತಿಗೆದಾರ ಅರವಿಂದ ಕೇಳಿದರೆ ಪಿಡಿಒ ರಾಹುಲ್ 75 ಸಾವಿರ ರೂ. ಹಾಗೂ ಕಾಮಗಾರಿಗಳ ಧೃಡೀಕರಣ, ಅಳತೆ ಪುಸ್ತಕ ಬರೆದು ಕೊಟ್ಟಿದ್ದರಿಂದ ತಾ.ಪಂ.ನ ಸಿದ್ರಾಮೇಶ್ವರ 1.88 ಲಕ್ಷ ಲಂಚ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಬೇಸರಗೊಂಡಿದ್ದ ಅರವಿಂದ ಲೋಕಾಯುಕ್ತರಿಗೆ ದೂರು ನೀಡಿದ್ದರು. ಮುಂಗಡವಾಗಿ ಪಿಡಿಒ 30 ಸಾವಿರ ರೂ. ಹಾಗೂ ತಾ.ಪಂ.ನ ಸಿದ್ರಾಮೇಶ್ವರ 70 ಸಾವಿರ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ಸೋಮವಾರ ಬಲೆ ಬೀಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ತನಿಖಾಧಿಕಾರಿ ಬಾಬಾಸಾಹೇಬ್, ಸಂತೋಷ ರಾಠೋಡ್, ಉದ್ದಂಡಪ್ಪ, ಅರ್ಜುನಪ್ಪ ಹಾಗೂ ಸಿಬ್ಬಂದಿ ಶ್ರೀಕಾಂತ. ವಿಷ್ಣುರಡ್ಡಿ, ವಿಜಯಶೇಖರ, ಶಾಂತಲಿಂಗ, ಕಿಶೋರಕುಮಾರ, ಕುಶಾಲ, ಅಡೆಪ್ಪ, ಭರತ, ಶುಕ್ಲೋಧನ, ಸುವರ್ಣಾ, ಸರಸ್ವತಿ, ನಾಗಶೆಟ್ಟಿ, ಜಗದೀಶ್, ರಮೇಶ, ಹಾತಿಸಿಂಗ್, ಕಂಟೆಪ್ಪ ತಂಡದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಸೆ.30ರವರೆಗೆ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ
Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ
Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ
Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.