ಬೀದರ್‌ ಪಶುವೈದ್ಯಕೀಯ: 266 ಹುದ್ದೆಗಳ ಶೀಘ್ರ ಭರ್ತಿ: ಸಚಿವ ಪ್ರಭು ಚವ್ಹಾಣ್‌


Team Udayavani, Mar 10, 2022, 7:40 AM IST

ಬೀದರ್‌ ಪಶುವೈದ್ಯಕೀಯ: 266 ಹುದ್ದೆಗಳ ಶೀಘ್ರ ಭರ್ತಿ: ಸಚಿವ ಪ್ರಭು ಚವ್ಹಾಣ್‌

ವಿಧಾನ ಪರಿಷತ್ತು: ಬೀದರ್‌ನ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ದಲ್ಲಿ ಖಾಲಿ ಇರುವ 266 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆದಿದ್ದು, ಶೀಘ್ರ ಇದು ಪೂರ್ಣಗೊಳ್ಳಲಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ತಿಳಿಸಿದರು.

ಬುಧವಾರ ಸದಸ್ಯ ಅರವಿಂದ ಕುಮಾರ್‌ ಅರಳಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಶ್ವವಿದ್ಯಾಲಯದಲ್ಲಿ 398 ಬೋಧಕ ಮತ್ತು 1,073 ಬೋಧಕೇತರ ಹುದ್ದೆಗಳು ಖಾಲಿ ಇವೆ. ಈ ಪೈಕಿ 266 ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧದ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರ ಇದಕ್ಕೆ ಅನುಮೋದನೆ ದೊರೆತು, ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.

ಈ ವೇಳೆ ಅರವಿಂದ ಕುಮಾರ್‌ ಅರಳಿ ಮಾತನಾಡಿ, ಸರ್ಕಾರವೇ ನೀಡಿದ ಮಾಹಿತಿ ಪ್ರಕಾರ ಉದ್ದೇಶಿತ ವಿವಿಯಲ್ಲಿ ಬೋಧಕ ವಿಭಾಗದಲ್ಲಿ ವಿವಿಧ ಹಂತಗಳ 688 ಹುದ್ದೆಗಳು ಮಂಜೂರಾಗಿದ್ದು, 290 ಮಾತ್ರ ಭರ್ತಿ ಮಾಡಿಕೊಳ್ಳಲಾಗಿದೆ. ಇನ್ನೂ 398 ಹುದ್ದೆಗಳು ಖಾಲಿ ಇವೆ. ಅದೇ ರೀತಿ, ಬೋಧಕೇತರ ವಿಭಾಗದಲ್ಲಿ 1,393 ಹುದ್ದೆಗಳು ಮಂಜೂರಾಗಿದ್ದು, 320 ಭರ್ತಿಯಾಗಿವೆ. 1,073 ಖಾಲಿ ಇವೆ. ಉದ್ದೇಶಪೂರ್ವಕವಾಗಿ ವಿವಿಯನ್ನು ಬೇರೆ ಕಡೆ ತೆಗೆದುಕೊಂಡು ಹೋಗುವ ಹುನ್ನಾರ ಅಡಗಿದೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಆರ್‌. ಅಶೋಕ್‌, ಯಾವುದೇ ಕಾರಣಕ್ಕೂ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸುವುದಿಲ್ಲ. ಜತೆಗೆ ಉತ್ತಮವಾಗಿಯೂ ಮುನ್ನಡೆಸಿಕೊಂಡು ಹೋಗಲಾಗುವುದು. ಇದರಲ್ಲಿ ಯಾವುದೇ ಆತಂಕ ಮತ್ತು ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.

“ಇಲಾಖೆಗೆ ಹಿಂತಿರುಗದಿದ್ರೆ ಅಮಾನತು’
ಇನ್ನು ಪಶುವೈದ್ಯಕೀಯ ಇಲಾಖೆಯಿಂದ ಬೇರೆ ಇಲಾಖೆಗಳಿಗೆ ನಿಯೋಜನೆಗೊಂಡ ಮೂವರು ಸಿಬ್ಬಂದಿಗೆ ಮಾತೃ ಇಲಾಖೆಗೆ ಬರುವಂತೆ ನೋಟಿಸ್‌ ನೀಡಲಾಗಿದ್ದು, ಒಂದು ವೇಳೆ ನಿರಾಕರಿಸಿದರೆ ಅಮಾನತು ಮಾಡಲಾಗುವುದು ಎಂದು ಪ್ರಭು ಚವ್ಹಾಣ್‌ ಖಡಕ್‌ ಎಚ್ಚರಿಕೆ ನೀಡಿದರು.

ಒಟ್ಟಾರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಎಲ್ಲ ವೃಂದದ 131 ಅಧಿಕಾರಿಗಳು/ ನೌಕರರು ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿದ್ದರು. ಅವರೆಲ್ಲರಿಗೂ ಮಾತೃ ಇಲಾಖೆಗೆ ಮರಳಿಬರುವಂತೆ ಆದೇಶಿಸಿದ್ದು, ಅದರಂತೆ ವಾಪಸ್‌ ಬಂದಿರುತ್ತಾರೆ. ಈ ಪೈಕಿ ನಾಲ್ವರು ಪಶು ವೈದ್ಯಾಧಿಕಾರಿಗಳು ಮತ್ತು ಲಿಪಿಕ ವೃಂದದಲ್ಲಿ ಮೂವರು ಸಿಬ್ಬಂದಿ ವಾಪಸ್‌ ಬಂದಿಲ್ಲ. ಇವರಿಗೆ ಈಗಾಗಲೇ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.