DK Shivakumar; ಅಕ್ರಮ ಆಸ್ತಿ ಪ್ರಕರಣದಲ್ಲಿ ರಿಲೀಫ್; ಸಿಬಿಐ ಅರ್ಜಿ ವಜಾ ಮಾಡಿದ ಹೈಕೋರ್ಟ್
Team Udayavani, Aug 29, 2024, 4:47 PM IST
ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಿರುದ್ಧ ಸಿಬಿಐ, ಶಾಸಕ ಯತ್ನಾಳ್ ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಡಿಕೆ ಶಿವಕುಮಾರ್ ವಿರುದ್ದ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪದಲ್ಲಿ ಪ್ರಕರಣದ ತನಿಖೆಗೆ ಎಂದು ಸಿಬಿಐಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ಸಲ್ಲಿಸಿದ್ದರು.
ಬಸವನಗೌಡ ಪಾಟೀಲ್ ಯತ್ನಾಳ್ 2023ರ ಡಿಸೆಂಬರ್ ಹಾಗೂ 2024ರ ಜನವರಿಯಲ್ಲಿ ಸಿಬಿಐ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾ| ಕೆ. ಸೋಮ ಶೇಖರ್ ನೇತೃತ್ವದ ವಿಭಾಗೀಯ ಪೀಠ ಆಗಸ್ಟ್ 12ರಂದು ತೀರ್ಪು ಕಾದಿರಿಸಿತ್ತು.
ಇಂದು ತೀರ್ಪು ಪ್ರಕಟಿಸಿದ ಪೀಠ, ಇದು ವಿಚಾರಣೆಗೆ ಅರ್ಹವಲ್ಲ ಎಂದಿತು. ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಲಿ. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.