Relief to DK Shivakumar: ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಮಧ್ಯಪವೇಶಕ್ಕೆ ಸುಪ್ರೀಂ ನಕಾರ
Team Udayavani, Jul 31, 2023, 12:49 PM IST
ಹೊಸದಿಲ್ಲಿ: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ.
ಇದನ್ನೂ ಓದಿ:ಜ್ಞಾನವಾಪಿ ಮಸೀದಿಯಾಗಿದ್ದರೆ ಒಳಗೆ ತ್ರಿಶೂಲ ಹೇಗೆ ಬಂತು…? ಯೋಗಿ ಆದಿತ್ಯನಾಥ್ ಪ್ರಶ್ನೆ
ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ 2017ರಲ್ಲಿ ದಾಳಿ ನಡೆಸಿತ್ತು, ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅವರ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯ ನಂತರ, ಸಿಬಿಐ ನಂತರ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತು.
2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿತ್ತು.
2020ರಲ್ಲೇ ಪ್ರಕರಣ ನಡೆದಿದ್ದರೂ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಸಿಬಿಐ ತನ್ನ ಮೇಲೆ ಪದೇ ಪದೇ ನೋಟಿಸ್ ಜಾರಿ ಮಾಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ಶಿವಕುಮಾರ್ ಅವರು ತಮ್ಮ ವಿರುದ್ಧದ ಮಂಜೂರಾತಿ ಮತ್ತು ವಿಚಾರಣೆಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.
ಆರಂಭದಲ್ಲಿ ಅವರ ಅರ್ಜಿಯನ್ನು ಹೈಕೋರ್ಟ್ ನ ಏಕಸದಸ್ಯ ಪೀಠವು ವಜಾಗೊಳಿಸಿತ್ತು. ಬಳಿಕ ಡಿಕೆಶಿ ಅವರು ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ, ಬಳಿಕ ಜುಲೈ 17ರಂದು ಮೂರು ವಾರಗಳ ಕಾಲ ವಿಸ್ತರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.