ಶಿಕ್ಷಕರ ಹಾಜರಾತಿಗೆ ಬಯೋಮೆಟ್ರಿಕ್‌ ಕಡ್ಡಾಯ; 15 ನಿಮಿಷ ಬೇಗ ಶಾಲೆಗೆ ಬರುವಂತೆ ಸೂಚನೆ


Team Udayavani, Sep 7, 2022, 7:25 AM IST

ಶಿಕ್ಷಕರ ಹಾಜರಾತಿಗೆ ಬಯೋಮೆಟ್ರಿಕ್‌ ಕಡ್ಡಾಯ; 15 ನಿಮಿಷ ಬೇಗ ಶಾಲೆಗೆ ಬರುವಂತೆ ಸೂಚನೆ

ಬೆಂಗಳೂರು: ನಿಗದಿತ ಸಮಯಕ್ಕೆ ಸರಿಯಾಗಿ ಶಾಲೆಗೆ ಹಾಜರಾಗದೆ ಕಳ್ಳಾಟವಾಡುವ ಶಿಕ್ಷಕರಿಗೆ ಬಿಸಿ ಮುಟ್ಟಿಸಿರುವ ಶಿಕ್ಷಣ ಇಲಾಖೆ, ಶಾಲೆ ಆರಂಭದ ಸಮಯಕ್ಕಿಂತ 15 ನಿಮಿಷ ಬೇಗ ಬರಬೇಕು ಮತ್ತು ಕಡ್ಡಾಯವಾಗಿ ಬಯೋಮೆಟ್ರಿಕ್‌ ಹಾಜರಾಗಿ ಹಾಕುವಂತೆ ಸೂಚಿಸಿದೆ.

ಶಾಲೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವಿಚಾರಗಳಲ್ಲಿ ಶಿಕ್ಷಕರ ಅಶಿಸ್ತಿನಿಂದ ಮಕ್ಕಳ ಕಲಿಕಾ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಆದ್ದರಿಂದ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಕಚೇರಿ ಸಿಬ್ಬಂದಿ ವರ್ಗ ನಿಗದಿತ ಅವಧಿಗಿಂತ ಕನಿಷ್ಠ 15 ನಿಮಿಷ ಮುಂಚಿತವಾಗಿ ಕರ್ತವ್ಯಕ್ಕೆ ಹಾಜರಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.

ಇನ್ನು ರಜೆ ಮೇಲೆ ತೆರಳುವಾಗ ಸಂಬಂಧಪಟ್ಟ ಮೇಲಧಿಕಾರಿಗಳಿಂದ ಪೂರ್ವಾನುಮತಿ ಮಂಜೂರು ಪಡೆದು ತೆರಳಬೇಕು. ವೇತನ ಬಟವಾಡೆ ಅಧಿಕಾರಿಗಳು ತಮ್ಮ ಅಧೀನ ಕಚೇರಿ ಮತ್ತು ಶಾಲೆಗಳ ಬಯೋಮೆಟ್ರಿಕ್‌ ಹಾಜರಾತಿಯನ್ನು ಚೆಕ್‌-ಇನ್‌ ಮತ್ತು ಚೆಕ್‌-ಔಟ್‌ ಹಾರ್ಡ್‌/ಸಾಫ್ಟ್ ದಾಖಲೆಗಳನ್ನು ಪ್ರತಿ ತಿಂಗಳು 25ನೇ ತಾರೀಖೀನೊಳಗೆ ಪಡೆದು ಅದಕ್ಕೆ ಅನುಗುಣವಾಗಿ ವೇತನ ಪಾವತಿಸಲು ತಿಳಿಸಿದೆ.

ಬಯೋಮೆಟ್ರಿಕ್‌ ಸುಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮೇಲ್ವಿಚಾರಣೆಯ ಹೊಣೆಗಾರಿಕೆಯನ್ನು ಸಂಬಂಧಪಟ್ಟ ಶಾಲಾ ಮುಖ್ಯಸ್ಥರು ಮತ್ತು ಸ್ಥಳೀಯ ಅಧಿಕಾರಿಗಳು ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಿದೆ.
ಸಂಬಂಧಪಟ್ಟ ಅಧಿಕಾರಿ ಮತ್ತು ನೌಕರರ ಪರಿಣಾಮಕಾರಿಯಾದ ಮೇಲುಸ್ತುವಾರಿ ಕೊರತೆಯಿಂದ ಇಂತಹ ಪ್ರಕರಣಗಳು ನಡೆಯುತ್ತಿವೆ. ಹೀಗಾಗಿ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಜಿಲ್ಲಾ ಉಪ ನಿರ್ದೇಶಕರು ಸಂಬಂಧಿಸಿದ ಎಲ್ಲ ಅಧಿಕಾರಿ/ಸಿಬ್ಬಂದಿಗೆ ಮಾಸಿಕ ಸಭೆಗಳಲ್ಲಿ ಬಯೋಮೆಟ್ರಿಕ್‌ ಸುಸ್ಥಿತಿ ಬಗ್ಗೆ ಪರಿಶೀಲಿಸಬೇಕು. ಹೀಗಿದ್ದೂ ಸಮಯಪಾಲನೆಯನ್ನು ನಿರ್ಲಕ್ಷ್ಯ ಮಾಡುವವರ ವಿರುದ್ಧದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಆಡಳಿತಾತ್ಮಕ ಕ್ರಮಗಳನ್ನು ಜರುಗಿಸಲು ಸೂಚಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್‌ ಅವರು ಆಗಸ್ಟ್‌ 12ರಂದು ಮಂಡ್ಯ ಜಿಲ್ಲೆಯ ನೆಲ್ಲಿಗೆರೆ ಶಾಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿಕ್ಷಕರು ಅರ್ಧ ಗಂಟೆ ತಡವಾಗಿ ಹಾಜರಾಗಿದ್ದು, ಶಿಕ್ಷಕರಿಗಾಗಿ ಮಕ್ಕಳು ಕಾಯುತ್ತಿದ್ದ ಘಟನೆಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ಆಯುಕ್ತ ಡಾ.ಆರ್‌. ವಿಶಾಲ್‌ ಸುತ್ತೋಲೆ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.