BJP 3ನೇ ಪಟ್ಟಿ ಇಂದು ಘೋಷಣೆ? ಕುತೂಹಲ ಕೆರಳಿಸಿದ ಉತ್ತರ ಕನ್ನಡ ಕ್ಷೇತ್ರ

ಜೆಡಿಎಸ್‌ಗೆ ಮಂಡ್ಯ, ಹಾಸನ ಸಾಧ್ಯತೆ

Team Udayavani, Mar 16, 2024, 7:10 AM IST

bjp

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯ 3ನೇ ಪಟ್ಟಿ ರವಿವಾರ ಬಿಡುಗಡೆಯಾಗುವ ಸಾಧ್ಯತೆ ಇದ್ದು, ರಾಜ್ಯದ 8 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.

ರಾಯಚೂರು, ಚಿತ್ರದುರ್ಗ, ಬೆಳಗಾವಿ, ಚಿಕ್ಕ ಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ ಹಾಗೂ ಉತ್ತರ ಕನ್ನಡ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಬೇಕಿದೆ.

ಈ ಪೈಕಿ ಮೂರು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕಿದ್ದು, ಹಾಲಿ ಸಂಸದ ಮುನಿಸ್ವಾಮಿ ಜೆಡಿಎಸ್‌ ಚಿಹ್ನೆಯಡಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಮಾತುಗಳಿವೆ. ಮಂಡ್ಯ ಹಾಗೂ ಹಾಸನ ಕ್ಷೇತ್ರವನ್ನು ಮೈತ್ರಿ ಪಕ್ಷಕ್ಕೆ ನೀಡಲು ಬಿಜೆಪಿ ನಿರ್ಧರಿಸಿದೆ.

ಮಂಡ್ಯದಿಂದ ನಿಖಿಲ್‌ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್‌ ರೇವಣ್ಣ ಕಣಕ್ಕೆ ಇಳಿಯುವ ಸಾಧ್ಯತೆಗಳು ಇವೆ.

ಬಿಜೆಪಿಯ ಪಾಲಿಗೆ ಬರುವ ಐದು ಕ್ಷೇತ್ರಗಳ ಪೈಕಿ ಚಿಕ್ಕಬಳ್ಳಾಪುರ ಹಾಗೂ ಉತ್ತರ ಕನ್ನಡ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಮಾಜಿ ಸಚಿವ ಡಾ. ಸುಧಾಕರ್‌ ಹಾಗೂ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಅವರ ಪುತ್ರ ಅಲೋಕ ಹೆಸರು ತೀವ್ರ ಚರ್ಚೆಯಲ್ಲಿದೆ. ಇದೆಲ್ಲದರ ಮಧ್ಯೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರನ್ನು ಕೊನೆ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರದಿಂದ ಕಣಕ್ಕೆ ಇಳಿಸಬಹುದೆಂದು ಹೇಳಲಾಗುತ್ತಿದೆ. ಆದರೆ ಎರಡೂ ಪಕ್ಷಗಳು ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಅದೇ ರೀತಿ ಉತ್ತರ ಕನ್ನಡದಲ್ಲಿ ಅಭ್ಯರ್ಥಿ ಬದಲಾವಣೆಯಾಗುತ್ತದೆಯೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.

ಚಿತ್ರದುರ್ಗ ಕ್ಷೇತ್ರದಿಂದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಕೊನೆಯ ಹಂತದಲ್ಲಿ ಮತ್ತೆ ಸ್ಪರ್ಧೆ ಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಮಾಜಿ ಸಂಸದ ಜನಾರ್ದನಸ್ವಾಮಿ ಕೂಡ ಆಕಾಂಕ್ಷಿಯಾಗಿದ್ದಾರೆ. ಬೆಳಗಾವಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಣಕ್ಕೆ ಇಳಿಯುವುದು ಖಚಿತವಾಗಿದೆ. ರಾಯಚೂರಿನಲ್ಲಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಅವರನ್ನೇ ಮುಂದುವರಿಸುವ ಸಾಧ್ಯತೆ ಹೆಚ್ಚಿದೆ.

ರಾಜ್ಯದ ಎರಡನೇ ಪಟ್ಟಿಯನ್ನು ಶನಿವಾರ ಪ್ರಕಟಿಸಬಹುದೆಂದು ಹೇಳಲಾಗುತ್ತಿತ್ತು. ಆದರೆ ಕೇಂದ್ರ ಚುನಾವಣ ಆಯೋಗದ ಪತ್ರಿಕಾಗೋಷ್ಠಿ ಹಿನ್ನೆಲೆಯಲ್ಲಿ ರವಿವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳು ಯಾರು?
ಚಿಕ್ಕಬಳ್ಳಾಪುರ- ಡಾ| ಸುಧಾಕರ್‌/ಅಲೋಕ್‌ ವಿಶ್ವನಾಥ್‌/ಸುಮಲತಾ ಅಂಬರೀಷ್‌
ಚಿತ್ರದುರ್ಗ - ಎ. ನಾರಾಯಣ ಸ್ವಾಮಿ/ ಜನಾರ್ದನಸ್ವಾಮಿ
ಬೆಳಗಾವಿ- ಜಗದೀಶ್‌ ಶೆಟ್ಟರ್‌
ರಾಯಚೂರು- ರಾಜಾ ಅಮರೇಶ್ವರ ನಾಯಕ
ಉತ್ತರ ಕನ್ನಡ- ಅಭ್ಯರ್ಥಿಯ ಬಗ್ಗೆ ಕುತೂಹಲ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.