Lok Sabha polls; ನಾಳೆಯ ಬಳಿಕ ದಿಲ್ಲಿಗೆ ಬಿಜೆಪಿ ನಿಯೋಗ

2 ದಿನಗಳ ಬಳಿಕ ವರಿಷ್ಠರ ಕೈ ಸೇರಲಿರುವ ಆಕಾಂಕ್ಷಿಗಳ ಪಟ್ಟಿ

Team Udayavani, Mar 5, 2024, 6:45 AM IST

Lok Sabha polls; ನಾಳೆಯ ಬಳಿಕ ದಿಲ್ಲಿಗೆ ಬಿಜೆಪಿ ನಿಯೋಗ

ಬೆಂಗಳೂರು: ಲೋಕಸಭಾ ಆಕಾಂಕ್ಷಿಗಳ ಪಟ್ಟಿಯನ್ನು ಎರಡು ದಿನಗಳ ಬಳಿಕ ವರಿಷ್ಠರ ಮುಂದಿಡಲು ರಾಜ್ಯ ಬಿಜೆಪಿ ತಯಾರಿ ನಡೆಸಿದ್ದು, ರವಿವಾರವಷ್ಟೇ ವೀಕ್ಷಕರು ಸಲ್ಲಿಸಿರುವ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಚುನಾವಣ ಸಮಿತಿ ಸ್ವೀಕರಿಸಿದೆ. ಅದೇ ಪಟ್ಟಿಯೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬುಧವಾರ ದಿಲ್ಲಿಗೆ ತೆರಳಲಿದ್ದಾರೆ.

ಪ್ರಸ್ತುತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜ್ಯ ಪ್ರವಾಸದಲ್ಲಿದ್ದು, ಸೋಮವಾರ ಹಾಗೂ ಮಂಗಳವಾರ ಬೆಳಗಾವಿಯಲ್ಲಿ ಸರಣಿ ಸಭೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರ ಜತೆಯಲ್ಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಪ್ರವಾಸದಲ್ಲಿ ಭಾಗಿಯಾಗಿದ್ದು, ನಡ್ಡಾ ದಿಲ್ಲಿ ತಲುಪಿದ ಬಳಿಕ ಬೆಂಗಳೂರಿನಿಂದ ತೆರಳಲು ನಿರ್ಧರಿಸಿದ್ದಾರೆ.

ಈಗಾಗಲೇ ಪ್ರತಿ ಲೋಕಸಭಾ ಕ್ಷೇತ್ರಗಳಲ್ಲೂ 2-3 ದಿನ ಪ್ರವಾಸ ನಡೆಸಿರುವ ವೀಕ್ಷಕರು ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಸಮಿತಿಗೆ ರವಾನಿಸಿದ್ದಾರೆ. ಪ್ರಮುಖವಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪಕ್ಷಕ್ಕೆ ಅಧಿಕೃತವಾಗಿ ತಿಳಿಸಿರುವ ಹಾಲಿ ಸಂಸದರನ್ನು ಹೊರತುಪಡಿಸಿ, ಉಳಿದೆಲ್ಲ ಕ್ಷೇತ್ರಗಳಲ್ಲೂ ಹಾಲಿ ಸಂಸದರ ಹೆಸರನ್ನು ಪಟ್ಟಿಯಲ್ಲಿ ಹಾಗೇ ಬಿಡಲಾಗಿದೆ.

ಪಟ್ಟಿಯಲ್ಲಿ ಕನಿಷ್ಠ 3, ಗರಿಷ್ಠ 5 ಹೆಸರು
ಆಯಾ ಕ್ಷೇತ್ರದಲ್ಲಿ ಪಕ್ಷದ ಸೂಚನೆಯಂತೆ ಕೆಲಸ ಆರಂಭಿಸಿರುವ ಆಕಾಂಕ್ಷಿಗಳ ಪೈಕಿ ಹಾಲಿ ಸಂಸದ ಹಾಗೂ ಕೇಂದ್ರ ಸಚಿವರಾಗಿ ಯಶಸ್ವಿಯಾಗಿರುವವರು, ಗೆಲ್ಲಬಲ್ಲ ಅಭ್ಯರ್ಥಿಗಳು, ವಿರೋಧಿಗಳ ಎದುರು ಪ್ರಬಲ ಹೋರಾಟ ನೀಡಬಲ್ಲವರು ಸಹಿತ ಕನಿಷ್ಠ 3ರಿಂದ ಗರಿಷ್ಠ 5 ಹೆಸರುಗಳು ಪಟ್ಟಿಯಲ್ಲಿವೆ. ಇದೇ ಪಟ್ಟಿಯನ್ನು ವರಿಷ್ಠರಿಗೆ ತಲುಪಿಸುವ ಸಲುವಾಗಿ ಬುಧವಾರದ ಬಳಿಕ ವಿಜಯೇಂದ್ರ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅವರೊಂದಿಗೆ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಜಿ.ವಿ. ಹಾಗೂ ನಿಕಟಪೂರ್ವ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ಕೂಡ ತೆರಳುವ ಸಾಧ್ಯತೆ ಇದೆ.

ಬಿಜೆಪಿ ಮಹಿಳಾ ಮೋರ್ಚಾ: ರಾಜ್ಯದಲ್ಲಿ ನಾರಿಶಕ್ತಿ ಯಾತ್ರೆ
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದಿಂದ ನಾಡಿನಾದ್ಯಂತ ನಾರಿಶಕ್ತಿ ಯಾತ್ರೆಗೆ ಚಾಲನೆ ನೀಡಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸ್ಕೂಟಿ, ಬೈಕ್‌, ಸೈಕಲ್‌ ಯಾತ್ರೆಗಳು ನಡೆಯಲಿವೆ ಎಂದು ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.4ರಿಂದ 6ರ ವರೆಗೆ ಮೂರು ದಿನಗಳ ಕಾಲ ನಾರಿಶಕ್ತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯದ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ರನ್‌ ಫಾರ್‌ ನೇಷನ್‌, ರನ್‌ ಫಾರ್‌ ಮೋದಿ ಕಾರ್ಯಕ್ರಮಗಳು ನಡೆದಿದ್ದು, ಶಿವಮೊಗ್ಗ, ಧಾರವಾಡ ಗ್ರಾಮಾಂತರ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮಗಳು ನಡೆದಿವೆ.

ದೇಶದಲ್ಲೇ ಗರಿಷ್ಠ ಮಹಿಳಾ ದೌರ್ಜನ್ಯ ನಡೆದಿರುವ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಾ.6ರಂದು ಸಮಾವೇಶ ಆಯೋಜಿಸಿದ್ದು, 1 ಲಕ್ಷ ಮಹಿಳೆಯರು ಸಮಾವೇಶಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು ಪ್ರಧಾನಿ ಭಾಷಣದ ನೇರ ಪ್ರಸಾರ ವೀಕ್ಷಣೆಗೆ ಎಲ್ಲೆಡೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

 

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.