BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ


Team Udayavani, Sep 13, 2024, 11:21 PM IST

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

ಬೆಂಗಳೂರು: ಬಿಜೆಪಿ ಕಾಲಾವಧಿಯಲ್ಲಿ ನಡೆದ ಹಗರಣಗಳ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ತಲುಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟುನಿಟ್ಟಿನ ಸೂಚನೆ ಮೇರೆಗೆ ರಚನೆಗೊಂಡ ಸಚಿವ ಸಂಪುಟ ಉಪಸಮಿತಿ ಸಭೆ ಶುಕ್ರವಾರ ತನ್ನ ಮೊದಲ ಸಭೆ ನಡೆಸಿದ್ದು ಐದಾರು ಮಹತ್ವದ ಪ್ರಕರಣಗಳ ಬಗ್ಗೆ ವಿಶ್ಲೇಷಣೆ ನಡೆಸಿದೆ.

ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗುವ ಸಾಧ್ಯತೆ ಇದೆ.ಕಳೆದ ತಿಂಗಳು ದಿಲ್ಲಿಗೆ ತೆರಳಿದ್ದ ಸಿದ್ದ ರಾಮಯ್ಯ ಹೈಕಮಾಂಡ್‌ ನಾಯಕರ ಮೂಲಕವೇ ಬಿಜೆಪಿ ಕಾಲದ ಪ್ರಕರಣ ವನ್ನು ಮತ್ತೆ ಕೆದಕಬೇಕೆಂಬ ಸೂಚನೆ ಕೊಡಿಸಿದ್ದರು.ಇದರ ಮುಂದುವರಿದ ಭಾಗವಾಗಿ 2 ದಿನಗಳ ಹಿಂದೆ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಂಪುಟ ಉಪ ಸಮಿತಿ ವಿಧಾನಸೌಧದಲ್ಲಿ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌ ಸೇರಿ ಹಿರಿಯ ಅಧಿಕಾರಿಗಳ ಜತೆಗೆ ಶುಕ್ರವಾರ ಸಭೆ ನಡೆಸಿದೆ.

ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ
ತನಿಖೆ ಪ್ರಗತಿ ಪರಿಶೀಲನೆ, ವೇಗ ಹೆಚ್ಚಳ, ಸಮನ್ವಯ ಮುಂತಾದ ಕಾರ್ಯಗಳನ್ನು ಪರಾಮರ್ಶಿಸಿ 2 ತಿಂಗಳೊಳಗಾಗಿ ಸಂಪುಟದಲ್ಲಿ ವರದಿ ಮಂಡಿಸಬೇಕೆಂಬ ಜವಾಬ್ದಾರಿಯನ್ನು ಈ ಸಮಿತಿಗೆ ನೀಡಲಾಗಿದೆ. ಮೊದಲ ಸಭೆಯಲ್ಲಿ ಐದಾರು ಪ್ರಕರಣಗಳ ತನಿಖೆಯ ವಸ್ತುಸ್ಥಿತಿ ಪರಾ ಮರ್ಶಿಸಿದ್ದು ಇನ್ನು ಮುಂದೆ ಸಮಿತಿ ನಿಯಮಿತ ವಾಗಿ ಸಭೆ ಸೇರಿ ಉಳಿದೆಲ್ಲ ಪ್ರಕರಣಗಳನ್ನು ಪರಿಶೀಲಿಸಲು ನಿರ್ಧರಿಸಿದ್ದೇವೆ.

ಯಾವುದೆಲ್ಲ ಹಗರಣಗಳು, ಏನೆಲ್ಲ ಪರಿಶೀಲಿಸಿದ್ದೇವೆ ಎಂಬ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ. ಸಮಿತಿ ವರದಿ ಸಿದ್ಧಪಡಿಸಿ ಸಚಿವ ಸಂಪುಟ ಸಭೆಗೆ ಮಂಡಿಸಿದ ನಂತರ ಎಲ್ಲ ವಿವರ ಲಭ್ಯವಾಗುತ್ತವೆ ಎಂದು ಸಭೆ ಬಳಿಕ ಡಾ| ಜಿ.ಪರಮೇಶ್ವರ್‌ ಸುದ್ದಿಗಾರರಿಗೆ ತಿಳಿಸಿದರು.

ಅಶ್ವತ್ಥ ನಾರಾಯಣ ಕೇಸ್‌ ರೀ ಓಪನ್‌?
ಮೂಲಗಳ ಪ್ರಕಾರ, ಈ ಸಭೆಯಲ್ಲಿ ಐದಾರು ಪ್ರಕರಣದ ಮಾಹಿತಿ ಪಡೆಯಲಾಗಿದೆ. ಮಾಜಿ ಡಿಸಿಎಂ ಡಾ| ಸಿ.ಎನ್‌. ಅಶ್ವತ್ಥನಾರಾಯಣ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಪ್ರಕರಣ ಕೂಲಂಕಷವಾಗಿ ಪರಿಶೀಲನೆಯಾಗಿದೆ. ಬಿಜೆಪಿ ಆಡಳಿತಾವಧಿಯ 21 ಹಗರಣಗಳ ಜತೆಗೆ ಇನ್ನೂ ಏಳೆಂಟು ಪ್ರಕರಣಗಳು ಸೇರ್ಪಡೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಉಪನ್ಯಾಸಕರು, ಪಿಎಸ್‌ಐ ನೇಮಕ, ಕಾಕಂಬಿ ಖರೀದಿ, ಕಿಯೋನಿಕ್ಸ್‌, ವಿವಿಧ ಅಭಿವೃದ್ಧಿ ನಿಗಮಗಳ ಅವ್ಯವಹಾರಗಳು, ಶೇಕಡ 40 ಕಮಿಷನ್‌ ಆರೋಪ, ಕೋವಿಡ್‌ ಅಕ್ರಮ, ಗ್ರಾಮೀಣಾಭಿವೃದ್ಧಿ, ಲೋಕೋಪ ಯೋಗಿ, ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಸೇರಿ 35ಕ್ಕೂ ಹೆಚ್ಚು ಹಗರಣ ಗಳನ್ನು ಈ ಸಮಿತಿ ಪರಿಶೀಲಿಸಿ ವರದಿ ನೀಡಲಿದೆ ಎಂದು ಗೊತ್ತಾಗಿದೆ.

ದ್ವೇಷದ ರಾಜಕಾರಣವಲ್ಲ
ಬಿಜೆಪಿ ಸರ್ಕಾರದಷ್ಟೇ ಅಲ್ಲ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಹಾಗೂ ಹಿಂದಿನ ಕಾಂಗ್ರೆಸ್‌ ಸರಕಾರದ ಪ್ರಕರಣಗಳನ್ನು ವಿವಿಧ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಎಲ್ಲ ಹಗರಣಗಳನ್ನು ಸಮಿತಿ ಪರಾಮರ್ಶಿಸುತ್ತಿದ್ದೇವೆ. ಕಾನೂನು ಬಾಹಿರ ಪ್ರಕರಣಗಳ ಸತ್ಯಾಸತ್ಯತೆ ಪತ್ತೆ ಹಚ್ಚಿ ಕಾನೂನು ರೀತ್ಯ ಕ್ರಮವಹಿಸಲು ಸರಕಾರ ಮುಂದಾದರೆ ಬಿಜೆಪಿಯವರು ದ್ವೇಷ ರಾಜಕಾರಣವೆಂದು ಭಾವಿಸುವುದೇಕೆ? ಎಂದು ಪ್ರಶ್ನಿಸಿದರು. ಮುಡಾ ಪ್ರಕರಣದಲ್ಲಿ ಬಿಜೆಪಿ ಹೋರಾಟ ಆರಂಭಿಸುವುದಕ್ಕಿಂತ ಮುನ್ನ ಅನೇಕ ಅಕ್ರಮ ಪ್ರಕರಣಗಳ ತನಿಖೆಯನ್ನು ವಿವಿಧ ಸಂಸ್ಥೆಗಳು ಕೈಗೆತ್ತಿಕೊಂಡಿವೆ. ತನಿಖೆಗೆ ವೇಗ ನೀಡಿ ತಾರ್ಕಿಕ ಅಂತ್ಯ ಕಾಣಿಸಲು ಸಚಿವರನ್ನು ಒಳಗೊಂಡ ಸಮಿತಿ ರಚನೆಯಾಗಿದೆ ಎಂದು ಸಮರ್ಥಿಸಿಕೊಂಡರು.

ಸಮರ್ಥ ಸಚಿವ ಎಂದು ನನಗೆ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರು ಸರ್ಟಿಫಿಕೇಟ್‌ ನೀಡಿರುವುದು ಸಂತೋಷ. ಇದರಿಂದ ನಾನು ವಿಚಲಿತನಾಗಿಲ್ಲ. ನಾನು 3 ಬಾರಿ ಗೃಹ ಸಚಿವನಾಗಿದ್ದೇನೆ. ನನ್ನ ಕಾರ್ಯಶೈಲಿಯನ್ನು ರಾಜ್ಯದ ಜನರು ನೋಡಿದ್ದಾರೆ. ಪ್ರತಿಪಕ್ಷ ನಾಯಕರ ಹೇಳಿಕೆಗೆ ಅವರದೇ ರೀತಿಯಲ್ಲಿ ಪ್ರತಿಕ್ರಿಯಿಸುವುದಕ್ಕೆ ನನಗೆ ಗೊತ್ತು. ಆದರೆ ನಾನು ಆ ಮಾರ್ಗ ಹಿಡಿಯುವುದಿಲ್ಲ.
– ಡಾ| ಜಿ.ಪರಮೇಶ್ವರ್‌, ಗೃಹ ಸಚಿವ

ಟಾಪ್ ನ್ಯೂಸ್

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.