![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
ಗಣಿಧಣಿಯನ್ನು ಪ್ರಚಾರ ಕಣದಿಂದ ಹಿಂದೆ ಸರಿಸುವಲ್ಲಿ ಯಶಸ್ವಿಯಾದ ಬಿಜೆಪಿ!
Team Udayavani, Apr 28, 2018, 4:15 PM IST
![1-mkll.jpg](https://www.udayavani.com/wp-content/uploads/2018/04/28/1-mkll.jpg)
ಬೆಂಗಳೂರು: ಅಕ್ರಮ ಗಣಿಗಾರಿಕೆಯಿಂದ ಕಳಂಕಿತರಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಪ್ರಚಾರ ಕಣದಿಂದ ಹಿಂದಕ್ಕೆ ಕಳುಹಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಮೊಳಕಾಲ್ಮೂರಿನಲ್ಲಿ ಶ್ರೀರಾಮುಲು ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದ ಜನಾರ್ದನ ರೆಡ್ಡಿ ಅವರ ವಿಚಾರ ರಾಷ್ಟ್ರೀಯ ಮಾಧ್ಯಮಗಳಲ್ಲೂ ಚರ್ಚೆಯಾಗಿ ಬಿಜೆಪಿಗೆ ಭಾರಿ ತಲೆನೋವು ತಂದಿಟ್ಟಿತ್ತು. ಕಾಂಗ್ರೆಸ್ ಕೂಡ ಇದೇ ವಿಚಾರವನ್ನು ಬಿಜೆಪಿ ವಿರುದ್ದ ಅಸ್ತ್ರವನ್ನಾಗಿ ಬಳಸಿತ್ತು.
ಅಮಿತ್ ಶಾ ಅವರ ಸೂಚನೆ ಮೇರೆಗೆ ಜನಾರ್ದನ ರೆಡ್ಡಿ ಅವರು ಬೆಂಗಳೂರಿಗೆ ವಾಪಾಸಾಗಿದ್ದಾರೆ ಎಂದು ವರದಿಯಾಗಿದೆ.
ರೆಡ್ಡಿ ಕಳೆದ ಒಂದು ವಾರದಿಂದ ಶ್ರೀರಾಮುಲು ಪರ ಭರ್ಜರಿ ಪ್ರಚಾರ ನಡೆಸಿದ್ದರು. ನಿನ್ನೆಯಿಂದ ಅವರು ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.
ಅಮಿತ್ ಶಾ ಅವರು ಬಳ್ಳಾರಿ ರೋಡ್ ಶೋ ಕೈ ಬಿಟ್ಟು ರೆಡ್ಡಿಗೆ ಶಾಕ್ ನೀಡಿದ್ದರು. ನಾಳೆ ಚಿತ್ರದುರ್ಗದಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಶಾ ಅವರು ಪಾಲ್ಗೊಳ್ಳಲಿದ್ದು, ಆ ಕಾರ್ಯಕ್ರಮದಿಂದ ರೆಡ್ಡಿ ದೂರ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ಅಮಿತ್ ಶಾ ರಾಜ್ಯದಲ್ಲಿ ಪ್ರಚಾರ ಆರಂಭಿಸುವ ಮುನ್ನ ‘ಜನಾರ್ದನ ರೆಡ್ಡಿಗೂ ನಮಗೂ ಯಾವುದೇ ಸಂಬಂಧ ಇಲ್ಲ’ ಎಂದಿದ್ದರು. ಆ ಬಳಿಕವೂ ರೆಡ್ಡಿ ಅವರು ಪ್ರಚಾರದಲ್ಲಿ ಭಾಗಿಯಾಗಿದ್ದರು.
ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಅವರು ‘ಜನಾರ್ದನ ರೆಡ್ಡಿ ನಮ್ಮ ಸ್ಟಾರ್ ಪ್ರಚಾರಕ ಅಲ್ಲ. ಅವರು ಸ್ನೇಹಿತರ ಪರ ಪ್ರಚಾರ ನಡೆಸುತ್ತಾರೆ ಅಷ್ಟೇ’ ಎಂದಿದ್ದರು.
ಟಾಪ್ ನ್ಯೂಸ್
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ](https://www.udayavani.com/wp-content/uploads/2024/07/harmonium-150x98.jpg)
ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ
![Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ](https://www.udayavani.com/wp-content/uploads/2024/07/hassan-150x104.jpg)
Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ
![ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್](https://www.udayavani.com/wp-content/uploads/2024/07/moodigere-150x95.jpg)
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
![Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ](https://www.udayavani.com/wp-content/uploads/2024/07/PANIPURI-150x105.jpg)
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
![Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ](https://www.udayavani.com/wp-content/uploads/2024/07/shawarma-1-150x88.jpg)
Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.