![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 26, 2024, 11:52 PM IST
ಬೆಂಗಳೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾ ದಾಯ ದತ್ತಿ ಇಲಾಖೆ ವ್ಯಾಪ್ತಿಗೆ ಬರುವ ದೇವಸ್ಥಾನಗಳಲ್ಲಿ ತಸ್ತೀಕ್ ಪರಿಕಲ್ಪನೆ ಜಾರಿಗೊಳಿಸಿದ್ದೇ ಬಿಜೆಪಿ ಸರಕಾರ. ವಾರ್ಷಿಕ 60 ಸಾವಿರ ರೂ. ಕೊಡುತ್ತಿರುವ ತಸ್ತೀಕ್ ಅನ್ನು 1 ಲಕ್ಷ ರೂ.ಗೆ ಹೆಚ್ಚಿಸಬೇಕು, ದೇಗುಲಗಳ ವ್ಯವಸ್ಥಾಪನ ಸಮಿತಿಗೆ ಸರಕಾರ ನಾಮನಿರ್ದೇಶನ ಮಾಡಬಾರದು ಹಾಗೂ ಒಟ್ಟಾರೆ ಆದಾಯದಲ್ಲಿ ನಿರ್ವಹಣೆ ವೆಚ್ಚ ಕಳೆದು ಉಳಿಯುವ ಹಣದಲ್ಲಿ ಮಾತ್ರ ಸಾಮಾನ್ಯ ಸಂಗ್ರಹಣ ನಿಧಿ ಪಡೆಯಬೇಕೆಂದು ಬಿಜೆಪಿ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಯಡಿಯೂರಪ್ಪ ಮುಖ್ಯಮಂತ್ರಿ ಗಳಿದ್ದಾಗ ನಾಗರಾಜ ಶೆಟ್ಟಿ ಮುಜ ರಾಯಿ ಸಚಿವರಿದ್ದಾಗಲೇ ದೇವಸ್ಥಾನ ಗಳ ಅರ್ಚಕರಿಗೆ ಕೊಡುವ ವ್ಯವಸ್ಥೆ ಜಾರಿಗೆ ತಂದರು. ಅಂದಿನ ಕಾಲಕ್ಕೆ 33,500 ದೇವಸ್ಥಾನಗಳಿಗೆ ತಲಾ 6,500 ರೂ.ಗಳನ್ನು ನೀಡಲಾಗುತ್ತಿತ್ತು. ವಿ.ಎಸ್. ಆಚಾರ್ಯ ಇಲಾಖೆ ಸಚಿವರಾದಾಗ ಈ ಮೊತ್ತವನ್ನು 12 ಸಾವಿರ ರೂ.ಗೆ ಹೆಚ್ಚಿಸಿದ್ದರು. ನಾನು ಮಂತ್ರಿಯಾದ ಬಳಿಕ 24 ಸಾವಿರ ರೂ.ಗೆ ಹೆಚ್ಚಿಸಿದ್ದೆ. ಮತ್ತೆ ನಮ್ಮದೇ ಸರಕಾರ ಇದ್ದಾಗ ಇದನ್ನು 48 ಸಾವಿರ ರೂ.ಗೆ ಏರಿಸಲಾಗಿತ್ತು. ಈಗ ಇದು 60 ಸಾವಿರ ರೂ. ಆಗಿದ್ದು, ಕನಿಷ್ಠ 1 ಲಕ್ಷ ರೂ.ಗೆ ಹೆಚ್ಚಿಸಬೇಕೆಂಬುದು ನಮ್ಮ ಬೇಡಿಕೆ ಎಂದರು.
ಅರ್ಥವ್ಯವಸ್ಥೆ ಕುಸಿಯಲಿದೆ
ದೇಗುಲಗಳ ಒಟ್ಟಾರೆ ಆದಾಯದ ಶೇ.5 ಅಥವಾ ಶೇ. 10ರಷ್ಟು ಹಣವನ್ನು ಸಾಮಾನ್ಯ ಸಂಗ್ರಹಣ ನಿಧಿಗೆ ಪಡೆಯುವುದಕ್ಕೆ ನಮ್ಮ ವಿರೋಧವಿದೆ. ಸರಕಾರ ಜಾರಿ ಗೊಳಿಸಲು ಹೊರಟಿರುವ ಕಾಯ್ದೆ ಯಿಂದ ದೇವಸ್ಥಾನಗಳ ಒಟ್ಟು ಅರ್ಥ ವ್ಯವಸ್ಥೆ ಕುಸಿಯಲಿದೆ ಎಂದರು.
35 ಸಾವಿರ ಅರ್ಚಕರ ಮನೆಗೆ 15 ಕೋಟಿ ರೂ., ಸ್ಕಾಲರ್ಶಿಪ್ಗೆ 5 ಕೋಟಿ ರೂ., 5 ಕೋಟಿ ರೂ.ಯಲ್ಲಿ ವಿಮೆ ಮಾಡಿಸುವುದಾಗಿ ಹೇಳಿದ್ದಾರೆ. ಕ್ರಿಶ್ಚಿಯನ್ನರು, ಮುಸ್ಲಿಮರಿಗೆ 300 ಕೋಟಿ ರೂ. ಕೊಟ್ಟ ಮೇಲೆ 35 ಸಾವಿರ ದೇವಸ್ಥಾನಗಳಿಗೆ 300 ಕೋಟಿ ರೂ.ಗಳನ್ನಾದರೂ ಕೊಡಬೇಕಿತ್ತು. ಅಲ್ಪಸಂಖ್ಯಾಕರಿಗೆ 10 ಸಾವಿರ ಕೋಟಿ ರೂ. ಘೋಷಿಸಿ, 1 ಸಾವಿರ ಕೋಟಿ ರೂ.ಗೆ ಮಂಜೂರಾತಿಯನ್ನೂ ನೀಡಿರುವ ಸರಕಾರಕ್ಕೆ ಹಿಂದೂ ದೇವಸ್ಥಾನಗಳಿಗೆ 300 ಕೋ. ರೂ. ಕೊಡಲು ಸಾಧ್ಯವಿಲ್ಲವೇ ?
– ಎನ್. ರವಿಕುಮಾರ್, ವಿಧಾನಪರಿಷತ್ ಮುಖ್ಯ ಸಚೇತಕ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.