MLAs ST Somashekar, ಹೆಬ್ಬಾರ್‌ಗೆ ಬಿಜೆಪಿ ನೋಟಿಸ್‌


Team Udayavani, Mar 3, 2024, 12:34 AM IST

MLAs ST Somashekar, ಹೆಬ್ಬಾರ್‌ಗೆ ಬಿಜೆಪಿ ನೋಟಿಸ್‌

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಹಾಗೂ ಮತದಾನಕ್ಕೆ ಗೈರಾದ ಶಿವರಾಂ ಹೆಬ್ಬಾರ್‌ಗೆ ರಾಜ್ಯ ಬಿಜೆಪಿಯಿಂದ ಕೊನೆಗೂ ಶೋಕಾಸ್‌ ನೋಟಿಸ್‌ ಜಾರಿಗೊಳಿಸಲಾಗಿದೆ. ಸಂವಿಧಾನದ 10ನೇ ಶೆಡ್ಯೂಲ್ ಅನ್ವಯ ಪಕ್ಷಾಂತರ ನಿಷೇಧ ಹಾಗೂ ಅನರ್ಹತೆ ಪ್ರಕರಣದಡಿ ನೋಟಿಸ್‌ ನೀಡಲಾಗಿದೆ. ಬಿಜೆಪಿಯ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್‌ ಕಚೇರಿಯ ಮೂಲಕ ಈ ನೋಟಿಸ್‌ ಕೊಡಲಾಗಿದೆ.

ಇವರಿಬ್ಬರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಕ್ಕೆ ಬಿಜೆಪಿ ಆರಂಭದಲ್ಲಿ ಹೆಚ್ಚಿನ ಆಸಕ್ತಿ ಹೊಂದಿರಲಿಲ್ಲ. ಆದರೆ ಹಿಮಾಚಲಪ್ರದೇಶದಲ್ಲಿ ಅಡ್ಡ ಮತದಾನ ಮಾಡಿದ ಶಾಸಕರನ್ನು ಕಾಂಗ್ರೆಸ್‌ ಅನರ್ಹಗೊಳಿಸಿದ ಬೆನ್ನಲ್ಲೇ ಕರ್ನಾಟಕ ಬಿಜೆಪಿ ಎಚ್ಚೆತ್ತುಕೊಂಡಿದೆ. ಇವರಿಬ್ಬರನ್ನು ಅನರ್ಹಗೊಳಿಸುವಂತೆ ಸ್ಪೀಕರ್‌ ಯು.ಟಿ. ಖಾದರ್‌ಗೆ ಮನವಿ ಮಾಡಲು ನಿರ್ಧರಿಸಲಾಗಿದ್ದು, ಈ ಮೂಲಕ ಕಾಂಗ್ರೆಸ್‌ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸುವ ತಂತ್ರಗಾರಿಕೆ ನಡೆಸಲಾಗುತ್ತಿದೆ.

ಒಟ್ಟು ಮೂರು ಪುಟಗಳ ನೋಟಿಸ್‌ ನೀಡಿ ಐದು ದಿನಗಳೊಳಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ. ಬಿಜೆಪಿಯಿಂದ ಆಯ್ಕೆಗೊಂಡ ನೀವು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿರುವುದು ಹಾಗೂ ಮತದಾನದಿಂದ ದೂರ ಉಳಿದು ಕಾಂಗ್ರೆಸ್‌ಗೆ ಸಹಕರಿಸಿರುವುದು ಪಕ್ಷಾಂತರ ನಿಷೇಧ ವ್ಯಾಪ್ತಿಗೆ ಬರುತ್ತದೆ. ಪಕ್ಷದ ಶಾಸಕಾಂಗ ಪಕ್ಷದ ಕಚೇರಿಯಿಂದ ನಿಮಗೆ ಅಧಿಕೃತವಾಗಿ ವಿಪ್‌ ನೀಡಲಾಗಿತ್ತು. ವಾಟ್ಸಾಪ್‌ ಮೂಲಕ ವಿಪ್‌ ಪ್ರತಿ ರವಾನೆ ಮಾಡಲಾಗಿತ್ತು. ಮತದಾನದ ದಿನ ನಿಮ್ಮನ್ನು ಸಂಪರ್ಕಿಸುವುದಕ್ಕೆ ಸತತ ಪ್ರಯತ್ನ ನಡೆಸಿದರೂ ಸ್ಪಂದಿಸಿಲ್ಲ. ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಸೋಲಿಸುವ ಉದ್ದೇಶ ನಿಮ್ಮ ನಡೆಯಲ್ಲಿ ಕಂಡುಬಂದಿದ್ದು, ಇದು ಶಾಸಕತ್ವದ ಅನರ್ಹತೆಗೆ ಸೂಕ್ತವಾದ ಪ್ರಕರಣವಾಗಿರುತ್ತದೆ ಎಂದು ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.

ತಾಕತ್ತಿದ್ದರೆ ಕ್ರಮ ಕೈಗೊಳ್ಳಿ ಎಂದಿದ್ದರು
ತಾಕತ್ತಿದ್ದರೆ ಕ್ರಮ ತೆಗೆದುಕೊಳ್ಳಲಿ ಎಂದು ಎಸ್‌.ಟಿ. ಸೋಮಶೇಖರ್‌ ಸವಾಲು ಹಾಕಿದ ಬಳಿಕ ಬಿಜೆಪಿ ಎಚ್ಚೆತ್ತುಕೊಂಡಿದ್ದು, ಈ ನೋಟಿಸ್‌ ನೀಡಲಾಗಿದೆ. ಆದರೆ ಈ ನೋಟಿಸ್‌ಗೆ ಇಬ್ಬರು ಶಾಸಕರು ನೀಡುವ ಉತ್ತರ, ಅದರ ಆಧಾರದ ಮೇಲೆ ಬಿಜೆಪಿ ಸ್ಪೀಕರ್‌ ನೀಡುವ ದೂರು ಮತ್ತೊಂದು ರಾಜಕೀಯ ಹೊಯ್‌-ಕೈಗೆ ಕಾರಣವಾಗುವ ನಿರೀಕ್ಷೆ ಇದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸುದ್ದಿಗಾರರ ಜತೆಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸೋಮಶೇಖರ್‌ ಹಾಗೂ ಹೆಬ್ಬಾರ್‌ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಕಾರ್ಯಕರ್ತರ ಆಗ್ರಹವೂ ಆಗಿದೆ.ಅದಕ್ಕೆ ಸ್ಪಂದಿಸುವುದು ನಮ್ಮ ಕರ್ತವ್ಯ. ಮುಂದಿನ ಕ್ರಮಗಳೇನೆಂಬುದು ಇನ್ನೆರಡು ದಿನದಲ್ಲಿ ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.