![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 9, 2019, 3:00 AM IST
ಚಿಕ್ಕಬಳ್ಳಾಪುರ: ಗೌರಿಬಿದನೂರು ಪಟ್ಟಣದ ಸಂತೆ ಮೈದಾನದಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡವರ ಮನೆ ತೆರವುಗೊಳಿಸಲು ಮುಂದಾದರೆ ಮಾಜಿ ಸಚಿವ ಶಿವಶಂಕರ ರೆಡ್ಡಿಯವರ 2 ಕೈ ಕತ್ತರಿಸುತ್ತೇನೆಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ರವಿ ನಾರಾಯಣ ರೆಡ್ಡಿ ಎಚ್ಚರಿಕೆ ನೀಡಿದ್ದು, ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಅನರ್ಹ ಶಾಸಕ ಸುಧಾಕರ್ ಅವರ ಕೈ ಕತ್ತರಿಸುವೆ ಎಂದು ಹೇಳಿಕೆ ನೀಡುವ ಮೂಲಕ ಎನ್.ಎಚ್.ಶಿವಶಂಕರ ರೆಡ್ಡಿ ವಿವಾದ ಹುಟ್ಟು ಹಾಕಿದ್ದರು.
ನ.12ರಂದು ನಡೆಯಲಿರುವ ಗೌರಿಬಿದನೂರು ನಗರಸಭೆಯ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ನಾರಾಯಣ ರೆಡ್ಡಿ, ನಗರದ 6 ಮತ್ತು 7ನೇ ವಾರ್ಡ್ಗಳಲ್ಲಿ ಪಕ್ಷದ ಅಭ್ಯರ್ಥಿ ಪರ ಮತಯಾಚನೆ ಮಾಡುತ್ತಿದ್ದರು. ಈ ವೇಳೆ, ನದಿ ದಡದ ಆಂಜನೇಯಸ್ವಾಮಿ ದೇವಾಲಯದ ಬಳಿ ಹಾಗೂ ಸಂತೆ ಮೈದಾನದಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡವರು, “ಕಾಂಗ್ರೆಸ್ಗೆ ಮತ ಹಾಕದಿದ್ದಲ್ಲಿ ಮನೆಗಳನ್ನು ತೆರವುಗೊಳಿಸುವುದಾಗಿ ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದ್ದಾರೆ’ ಎಂದು ಅಳಲು ತೋಡಿಕೊಂಡರು.
ಇದರಿಂದ ಆಕ್ರೋಶಗೊಂಡ ರವಿನಾರಾಯಣ ರೆಡ್ಡಿ, “ಶಿವಶಂಕರರೆಡ್ಡಿಗೆ ನಾನು ಈಗಾಗಲೇ ಒಂದು ಕೈ ಕತ್ತರಿಸಿದ್ದೇನೆ. ಇಲ್ಲಿನ ಮನೆಗಳನ್ನು ನಿರ್ಮಿಸಿಕೊಂಡಿರುವ ನಿವಾಸಿಗಳ ಒತ್ತುವರಿ ಜಮೀನು ತೆರವುಗೊಳಿಸಲು ಮುಂದಾದರೆ ಶಿವಶಂಕರರೆಡ್ಡಿಯ ಎರಡೂ ಕೈಗಳನ್ನು ನಾನೇ ಕತ್ತರಿಸುವೆ. ಶಿವಶಂಕರ ರೆಡ್ಡಿಯವರು ಸುಧಾಕರ್ ಕೈ ಕತ್ತರಿಸುತ್ತೇನೆಂದು ಹೇಳಿದ್ದಾರೆ. ಅದು ಅಸಾಧ್ಯವಾದ ಮಾತು ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.