ಗುರುಗ್ರಾಮದಲ್ಲಿ ರಾಜ್ಯ ಬಿಜೆಪಿ ಶಾಸಕರು


Team Udayavani, Jan 15, 2019, 6:44 AM IST

bjp.jpg

ಬೆಂಗಳೂರು: ಬಿಜೆಪಿ ಕಾರ್ಯಕಾರಿಣಿ ನಿಮಿತ್ತ ದೆಹಲಿಗೆ ಹೋಗಿದ್ದ ಬಿಜೆಪಿ ಶಾಸಕರು ಇನ್ನೂ ಎರಡು ಮೂರು ದಿನ ಗುರುಗ್ರಾಮದಲ್ಲಿಯೇ ವಾಸ್ತವ್ಯ ಹೂಡುವ ಸಾಧ್ಯತೆಯಿದೆ.

ಸೋಮವಾರ ಸಂಜೆ ಇವರೆಲ್ಲರೂ ಗುರುಗ್ರಾಮಕ್ಕೆ ತೆರಳಿದ್ದು, ಅಲ್ಲಿಯೇ ಇರಲಿದ್ದಾರೆ. ‘ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸಭೆ ನಡೆಸಲಿದ್ದಾರೆಂದು ಹೇಳಿದ್ದರಿಂದ ದೆಹಲಿಯಲ್ಲೇ ವಾಸ್ತವ್ಯ ಹೂಡಿದ್ದೆವು. ಇದೀಗ ಇನ್ನೂ 2-3 ಮೂರು ದಿನ ದೆಹಲಿಯ ಸುತ್ತಮುತ್ತಲ ಪ್ರದೇಶದಲ್ಲೇ ವಾಸ್ತವ್ಯ ಮುಂದುವರಿಸಬೇಕಾಗುತ್ತದೆ ಎಂದು ನಾಯಕರು ಸೂಚಿಸಿದ್ದಾರೆ. ಹಾಗಾಗಿ ಈ ಬಾರಿ ಸಂಕ್ರಾಂತಿ ಹಬ್ಬವನ್ನು ಗುರುಗ್ರಾಮದಲ್ಲೇ ಆಚರಿಸುವಂತಾಗಿದೆ. ಕೆಲವರು ಸಿಹಿ ಸುದ್ದಿ ಬರಲಿದೆ ಎಂದು ಪಿಸುಗುಡುತ್ತಿದ್ದಾರೆ. ಆದರೆ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ ಎಂದು ಹಿರಿಯ ಶಾಸಕರೊಬ್ಬರು ‘ಉದಯವಾಣಿ’ಗೆ ತಿಳಿಸಿದರು.

ಅನಾರೋಗ್ಯದಿಂದ ಬಳಲುತ್ತಿರುವ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಆರೋಗ್ಯ ವಿಚಾರಿಸಲು ಬಿ.ಎಸ್‌.ಯಡಿಯೂರಪ್ಪ ಅವರು ತುಮಕೂರಿಗೆ ಭೇಟಿ ನೀಡಲಿದ್ದಾರೆಂಬ ಮಾಹಿತಿಯಿದ್ದರೂ ಕೊನೆಯ ಕ್ಷಣದಲ್ಲಿ ಅವರೂ ಗುರುಗ್ರಾಮದಲ್ಲೇ ವಾಸ್ತವ್ಯ ಹೂಡಲು ನಿರ್ಧರಿಸಿದರು.

ನಡೆಯಲಿಲ್ಲ ಸಭೆ: ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಶನಿವಾರ ಮುಕ್ತಾಯವಾದರೂ ರಾಜ್ಯದ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರೊಂದಿಗೆ ವರಿಷ್ಠರು ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆಂಬ ಕಾರಣಕ್ಕೆ ಎರಡು ದಿನ ದೆಹಲಿಯಲ್ಲೇ ವಾಸ್ತವ್ಯ ಮುಂದುವರಿಸಿದ್ದರು. ಆದರೆ ಭಾನುವಾರ ಯಾವುದೇ ವರಿಷ್ಠರು ಸಭೆ ನಡೆಸಲಿಲ್ಲ. ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್‌ ಔಪಚಾರಿಕವಾಗಿ ಸಭೆಯನ್ನು ಉದ್ಘಾಟಿಸಿ ಒಂದಿಷ್ಟು ಸಲಹೆ, ಸೂಚನೆ ನೀಡಿದರು. ಸೋಮವಾರ ಅಮಿತ್‌ ಶಾ ಅವರು ಸಭೆ ನಡೆಸಿ ಚರ್ಚಿಸಲಿದ್ದಾರೆಂದು ಕೆಲ ನಾಯಕರು ಹೇಳಿದ್ದರು. ಆದರೆ ಭಾನುವಾರ ಸಂಜೆಯೇ ಅಮಿತ್‌ ಶಾ ದೆಹಲಿ ತೊರೆದಿದ್ದರು.

ಶಾಸಕರಲ್ಲೂ ಗೊಂದಲ: ಸೋಮವಾರ ಬೆಳಗ್ಗೆ 11.30ಕ್ಕೆ ಸಭೆ ನಡೆಯಲಿದೆ ಎಂದು ಹೇಳಿದರೂ ಯಾವುದೇ ಸಭೆ ನಡೆಯಲಿಲ್ಲ. ಬಳಿಕ ಯಡಿಯೂರಪ್ಪನವರೇ ಔಪಚಾರಿಕವಾಗಿ ಶಾಸಕರೊಂದಿಗೆ ಮಾತನಾಡಿದರು. ಇದರಿಂದ ಗೊಂದಲಕ್ಕೆ ಸಿಲುಕಿದ ಹಲವು ಶಾಸಕರಿಗೆ ತಾವು ದೆಹಲಿಯಲ್ಲೇ ವಾಸ್ತವ್ಯ ಮುಂದುವರಿಕೆಗೆ ಸಕಾರಣವೇ ಗೊತ್ತಾಗಲಿಲ್ಲ. ಈ ನಡುವೆ ಕೆಲ ನಾಯಕರು ಅಗತ್ಯವಿದ್ದವರು ಬೆಂಗಳೂರಿಗೆ ತೆರಳಬಹುದೆಂಬ ಸೂಚನೆ ನೀಡಿದರು. ಆದರೆ ಕೆಲ ಹೊತ್ತಿನಲ್ಲೇ ಯಾರೂ ತೆರಳಬಾರದೆಂಬ ಸಂದೇಶ ರವಾನೆಯಾಯಿತು. ಅಂತಿಮವಾಗಿ ಸಂಜೆ ಸುಮಾರು 90 ಶಾಸಕರು ಗುರುಗ್ರಾಮದ ಖಾಸಗಿ ಹೋಟೆಲ್‌ಗೆ ಸ್ಥಳಾಂತರಗೊಂಡರು.

ಟಾಪ್ ನ್ಯೂಸ್

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.