Lok Sabha Election 2024; ಬಂಡಾಯ ಶಮನಕ್ಕೆ ಬಿಜೆಪಿ ಕಾರ್ಯತಂತ್ರ

ಉಸ್ತುವಾರಿ ಜತೆ ಬಿ.ವೈ.ವಿಜಯೇಂದ್ರ ಚರ್ಚೆ; ಖುದ್ದು ಯಡಿಯೂರಪ್ಪ ಸಂಧಾನಕ್ಕೆ ಸೂಚನೆ

Team Udayavani, Mar 22, 2024, 10:24 PM IST

Lok Sabha Election 2024; ಬಂಡಾಯ ಶಮನಕ್ಕೆ ಬಿಜೆಪಿ ಕಾರ್ಯತಂತ್ರ

ಬೆಂಗಳೂರು: ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ ಅಗರ್ವಾಲಾ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಸುದೀರ್ಘ‌ ಸಭೆ ನಡೆಸಿದ್ದು ಬಂಡಾಯ ಶಮನ ಹಾಗೂ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಿಜೆಪಿ ರಾಜ್ಯ ಕಚೇರಿಯಲ್ಲಿ ಈ ಸಭೆ ನಡೆದಿದ್ದು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್‌ ಕೂಡ ಜತೆಗಿದ್ದರು. 20 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆಯಾದ ಬಳಿಕ ಸೃಷ್ಟಿಯಾಗಿರುವ ಪರಿಸ್ಥಿತಿ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಿದ್ದು ಬಂಡಾಯ ಶಮನದ ಬಗ್ಗೆ ಕಾರ್ಯತಂತ್ರ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ.

ಪಕ್ಷದ ಕಡೆಯಿಂದ ಸಾಧ್ಯವಿರುವ ಎಲ್ಲ ಪ್ರಯತ್ನ ನಡೆಸಿ ಬಂಡಾಯ ಇತ್ಯರ್ಥಗೊಳಿಸಬೇಕು. ಪ್ರತಿದಿನವೂ ಟಿಕೆಟ್‌ ವಂಚಿತರ ಆಕ್ರೋಶದ ನುಡಿಗಳು ಮಾಧ್ಯಮಗಳಲ್ಲಿ ಹೈಲೈಟ್‌ ಆದರೆ ಎದುರಾಳಿಗಳಿಗೆ ನಾವಾಗಿಯೇ ಆಯುಧ ಕೊಟ್ಟಂತಾಗುತ್ತದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದ್ದು ಎಲ್ಲೆಲ್ಲಿ ಸಾಧ್ಯವಿದೆಯೋ ಆ ಎಲ್ಲ ಕಡೆಗಳಲ್ಲಿ ಖುದ್ದು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರೇ ಸಂಧಾನ ಸಭೆ ನಡೆಸುವಂತೆ ವರಿಷ್ಠರಿಂದ ಬಂದ ಸೂಚನೆಯನ್ನು ರಾಧಾ ಮೋಹನ್‌ ಅಗರ್ವಾಲಾ ನೀಡಿದ್ದಾರೆಂದು ಗೊತ್ತಾಗಿದೆ.

ಪುತ್ರನಿಗೆ ಟಿಕೆಟ್‌ ಸಿಗದ ಕಾರಣಕ್ಕೆ ಬಂಡಾಯ ಸ್ಪರ್ಧೆಗೆ ನಿರ್ಧರಿಸಿರುವ ಹಿರಿಯ ನಾಯಕ ಕೆ.ಎಸ್‌.ಈಶ್ವರಪ್ಪ ಜತೆಗೆ ರಾಜ್ಯದ ನಾಯಕರು ಸತತ ಸಂಪರ್ಕದಲ್ಲಿದ್ದಾರೆ. ಆದರೆ ಹಿಂದಕ್ಕೆ ಇಡುವ ಯಾವುದೇ ಲಕ್ಷಣವನ್ನು ಅವರು ಇದುವರೆಗೆ ತೋರಿಲ್ಲ. ಹೀಗಾಗಿ ಅಗತ್ಯ ಬಿದ್ದರೆ ಕೇಂದ್ರದ ಪ್ರಮುಖರು ಮಧ್ಯ ಪ್ರವೇಶಿಸುವ ಸನ್ನಿವೇಶ ಸೃಷ್ಟಿಯಾಗಬಹುದು ಎಂದು ಹೇಳಲಾಗುತ್ತಿದೆ. ಆದರೆ ಯಾರು, ಯಾವ ಸಂದರ್ಭದಲ್ಲಿ ಮಾತನಾಡುತ್ತಾರೆಂಬುದು ಬಗೆಹರಿದಿಲ್ಲ.

ಪ್ರವಾಸ :
ಇದರ ಜತೆಗೆ ರಾಷ್ಟ್ರ ಹಾಗೂ ರಾಜ್ಯ ನಾಯಕರ ಪ್ರವಾಸದ ಬಗ್ಗೆಯೂ ಚರ್ಚೆ ನಡೆದಿದೆ. ಕೆಲ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಪ್ರತ್ಯೇಕ ಪ್ರಚಾರ ನಡೆಸುವ ಸಾಧ್ಯತೆಯಿದೆ. ಜತೆಗೆ ಪ್ರಧಾನಿ ಹೊರತುಪಡಿಸಿ ಇತರ ನಾಯಕರ ಜತೆಗೆ ಸ್ಥಳೀಯವಾಗಿ ಯಾರ್ಯಾರು ವೇದಿಕೆ ಹಂಚಿಕೊಳ್ಳಬೇಕೆಂಬ ಬಗ್ಗೆಯೂ ಚರ್ಚೆ ನಡೆದಿದೆ.

ಟಾಪ್ ನ್ಯೂಸ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ

CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ

CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ

KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್‌!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು

KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್‌!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.