![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 11, 2019, 3:00 AM IST
ಬೆಂಗಳೂರು: ರಾಜ್ಯ ಬಿಜೆಪಿಯಿಂದ ಪ್ರವಾಹ ಹಾಗೂ ಮಳೆಹಾನಿಯ ಕುರಿತು ಜಿಲ್ಲಾಮಟ್ಟದಿಂದ ವರದಿ ಪಡೆಯಲು ಪ್ರಮುಖರ ತಂಡವನ್ನು ರಚಿಸಿದೆ. ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಹ, ಭೀಕರ ಮಳೆಹಾನಿಯ ಅಧ್ಯಯನಕ್ಕಾಗಿ ಮಾಜಿ ಸಚಿವರಾದ ಶ್ರೀರಾಮುಲು, ಶಿವನಗೌಡ ನಾಯಕ್, ಸಂಸದ ರಾಜ ಅಮರೇಶ್ ನಾಯಕ್, ಶಾಸಕರಾದ ಡಾ.ಶಿವರಾಜ ಪಾಟೀಲ್, ಎಂ.ಎಸ್.ಸೋಮಲಿಂಗಪ್ಪ, ಜಿ.ಸೋಮಶೇಖರ ರೆಡ್ಡಿ ಹಾಗೂ ವೈ.ಎನ್.ಗೋಪಾಲಕೃಷ್ಣ ತಂಡ. ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗೆ ಸಂಸದರಾದ ಡಾ.ಉಮೇಶ್ ಜಾಧವ್,
ರಾಜ ಅಮರೇಶ್ ನಾಯಕ್, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ರಾಜಕುಮಾರ್ ಪಾಟೀಲ್ ತೇಲ್ಕೂರು, ಬಸವರಾಜ ಮಟ್ಟಿಮೋಡ, ಸುಭಾಷ್ ಗುತ್ತೇದಾರ್, ಅವಿನಾಶ್ ಜಾಧವ್, ನರಸಿಂಹ ನಾಯಕ್, ವೆಂಕಟರೆಡ್ಡಿ ಮುದ್ನಾಳ್ ತಂಡ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗೆ ಸಂಸದ ಪ್ರತಾಪಸಿಂಹ, ಮಾಜಿ ಸಚಿವ ರಾಮದಾಸ್, ಶಾಸಕರಾದ ನಾಗೇಂದ್ರ, ನಿರಂಜನ್ ಕುಮಾರ್, ರಾಜೇಂದ್ರ ಮೊದಲಾದವರ ತಂಡ ಸಮೀಕ್ಷೆ ನಡೆಸಿ ರಾಜ್ಯ ಬಿಜೆಪಿಗೆ ವರದಿ ಒಪ್ಪಿಸಲಿದೆ ಎಂದು ಬಿಜೆಪಿ ತಿಳಿಸಿದೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.