Mysuru Chalo; ಯತ್ನಾಳ್‌, ಜಾರಕಿಹೊಳಿ ವಿರುದ್ಧ ಬಿಜೆಪಿ ಅಸಮಾಧಾನ

"ಮೈಸೂರು ಚಲೋದಲ್ಲಿ ಭಾಗಿಯಾಗಲ್ಲ' ಹೇಳಿಕೆಗೆ ವಿರೋಧ

Team Udayavani, Jul 30, 2024, 6:50 AM IST

Mysuru Chalo; ಯತ್ನಾಳ್‌, ಜಾರಕಿಹೊಳಿ ವಿರುದ್ಧ ಬಿಜೆಪಿ ಅಸಮಾಧಾನ

ಬೆಂಗಳೂರು: ಮೈಸೂರು ಚಲೋದಲ್ಲಿ ಭಾಗಿಯಾಗುವುದಿಲ್ಲ ಎನ್ನುತ್ತಿರುವ ಮಾಜಿ ಸಚಿವರಾದ ರಮೇಶ್‌ ಜಾರಕಿಹೊಳಿ, ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ನಿರ್ಧಾರಕ್ಕೆ ಪಕ್ಷದೊಳಗೆ ಅಸಮಾಧಾನ ಆರಂಭವಾಗಿದೆ.

ಮುಡಾದಿಂದ ಸಿಎಂ ಕುಟುಂಬಕ್ಕೆ ನಿವೇಶನ ಹಂಚಿಕೆ, ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಸೇರಿ ಹಲವು ವಿಷಯಗಳನ್ನು ಇಟ್ಟುಕೊಂಡು ಆ. 3ರಿಂದ ಬೆಂಗಳೂರು-ಮೈಸೂರು ನಡುವೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧರಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ ವಾಲ್ಮೀಕಿ ಹಗರಣವನ್ನಿಟ್ಟು ಕೊಂಡು ಬಳ್ಳಾರಿಗೆ ಪಾದಯಾತ್ರೆ ನಡೆಸುವುದಾಗಿ ರಮೇಶ್‌ ಹಾಗೂ ಯತ್ನಾಳ್‌ ಹೇಳಿಕೆ ನೀಡಿದ್ದು, ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧವೂ ಹರಿಹಾಯ್ದಿದ್ದಾರೆ. ಇನ್ನೊಂದೆಡೆ ಸದನದಲ್ಲಿ ನಡೆದ ಹೋರಾಟವನ್ನು “ಹೊಂದಾಣಿಕೆ ಹೋರಾಟ’ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಕೂಡ ಜರೆದಿದ್ದಾರೆ. ಇದೆಲ್ಲವೂ ಪಕ್ಷದೊಳಗೆ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರ ಪಾದಯಾತ್ರೆ ಪಕ್ಷಕ್ಕೆ ಬಲ
ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ನಾವು ಕಾಟಾಚಾರಕ್ಕೆ ಪಾದಯಾತ್ರೆ ಮಾಡುತ್ತಿಲ್ಲ. ಜತ ಹಿತಕ್ಕಾಗಿ ಮಾಡುತ್ತಿದ್ದೇವೆ. ಯತ್ನಾಳ್‌ ಹಾಗೂ ಜಾರಕಿಹೊಳಿ ಅವರ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೆ ಬಲ ಬರಲಿದೆ, ಮಾಡಲಿ ಎಂದಷ್ಟೇ ಹೇಳಿದ್ದಾರೆ.

ಜನರ ಹಿತಾಸಕ್ತಿಗಾಗಿ
ಇದೇ ವಿಚಾರವಾಗಿ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಪ್ರತಿಕ್ರಿಯಿಸಿದ್ದು, ಒಳ್ಳೆಯ ರೀತಿಯಲ್ಲಿ ಹೋರಾಟ ಕೈಗೆತ್ತಿಕೊಳ್ಳಬೇಕು ಎಂದು ಬಿಜೆಪಿ ತೀರ್ಮಾನಿಸಿದೆ. ಈ ಬಾರಿಯ ಹೋರಾಟ ತಾರ್ಕಿಕ ಅಂತ್ಯ ಕಾಣಲಿದೆ. ಸಿದ್ದರಾಮಯ್ಯರ ಬಳ್ಳಾರಿ ಪಾದಯಾತ್ರೆಯಂತೆ ಯಾವುದೋ ರಾಜಕೀಯ ಲಾಭಕ್ಕಾಗಿ ಮಾಡುತ್ತಿಲ್ಲ. ಜನರ ಹಿತಾಸಕ್ತಿಗಾಗಿ ನಡೆಯುತ್ತಿರುವ ನೈಜ ಹೋರಾಟ. ಈ ಹೋರಾಟದಲ್ಲಿ ಭಾಗಿಯಾಗದಿದ್ದರೆ ವಿಪಕ್ಷದ ಕಾರ್ಯಕರ್ತರಾಗಿರಲು ಸಾಧ್ಯವಿಲ್ಲ.

ಜಾರಕಿಹೊಳಿ, ಯತ್ನಾಳ್‌ ಅಪಸ್ವರ ಎತ್ತಿದರೆ ಕದ್ದವರು ತಪ್ಪಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಅರವಿಂದ ಲಿಂಬಾವಳಿ ಹೇಳಿಕೆ ಸರಿಯಿದೆ. ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಹೋರಾಟ ಎಂಬ ಅರ್ಥದಲ್ಲಿ ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಭ್ರಷ್ಟಾಚಾರದ ವಿರುದ್ಧ ನಮ್ಮದು ಶೂನ್ಯಸಹನೆ
ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಕ್ರಿಯಿಸಿ, ಭ್ರಷ್ಟಾಚಾರ ಬಯಲಿಗೆಳೆಯುವ ಸದುದ್ದೇಶ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿದ್ದೇವೆ. ಭ್ರಷ್ಟಾಚಾರದ ವಿರುದ್ಧ ನಮ್ಮದು ಶೂನ್ಯಸಹನೆ ಎಂದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.