BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

ನ.21/22ಕ್ಕೆ ಡಿ.ಸಿ. ಕಚೇರಿಗಳೆದುರು ಧರಣಿ... ಬೆಳಗಾವಿ ಅಧಿವೇಶನದಲ್ಲಿ ಬೃಹತ್‌ ಪ್ರತಿಭಟನೆ

Team Udayavani, Nov 17, 2024, 6:35 AM IST

BJP FLAG

ಬೆಂಗಳೂರು: ವಕ್ಫ್ ವಿಚಾರವಾಗಿ ಬಿಜೆಪಿಯು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ರಣತಂತ್ರವನ್ನೇ ಹೆಣೆದಿದೆ. ಈ ವಾರ ಪ್ರತೀ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಲು ಮುಂದಾಗಿದೆಯಲ್ಲದೆ, ಬೆಳಗಾವಿ ಅಧಿವೇಶನದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಆಯೋಜಿಸಲು ತೀರ್ಮಾನಿ ಸಿದೆ. ಸರಿಸುಮಾರು 60 ಸಾವಿರ ಜನರನ್ನು ಈ ವೇಳೆ ಸೇರಿಸಲು ತೀರ್ಮಾನಿಸಿದೆ.

ವಕ್ಫ್ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಯಿಂದ ಅಧ್ಯಯನ ತಂಡ ರಚನೆ ಮಾಡಲಾಗಿದ್ದು, ನ. 21 ಅಥವಾ 22ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್‌ ಪ್ರತಿಭಟನೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿಳಿಸಿದರು.

ಅಂದು ಬೆಳಗ್ಗೆಯಿಂದ ಸಂಜೆಯವರೆಗೆ ರೈತರು ಹಾಗೂ ಸಂತ್ರಸ್ತರಿಂದ ಅಹ ವಾಲು ಸ್ವೀಕರಿಸಲಾಗುತ್ತದೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌, ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ 3 ತಂಡಗಳು ರಾಜ್ಯಾದ್ಯಂತ ಪ್ರತೀ ಜಿಲ್ಲೆಯ ಪ್ರವಾಸ ಮಾಡಲಿದೆ. ಪ್ರತೀ ತಂಡವು ಕನಿಷ್ಠ 8-10 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸದನದಲ್ಲಿ ವಾಸ್ತವಿಕ ಸಮಸ್ಯೆಗಳ ಕಡೆ ಬೆಳಕು ಚೆಲ್ಲುವ ಕೆಲಸ ಮಾಡಲಿದೆ. ಡಿಸೆಂಬರ್‌ ಮೊದಲ ವಾರದಿಂದ ಈ ಪ್ರವಾಸ ಪ್ರಾರಂಭವಾಗುತ್ತದೆ ಎಂದರು.

ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ

ಅಧಿವೇಶನದ ವೇಳೆ ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ ಆಯೋಜಿಸಿದ್ದು, 50ರಿಂದ 60 ಸಾವಿರ ಸಾರ್ವಜನಿಕರು, ರೈತರು ಭಾಗವಹಿಸಲಿದ್ದಾರೆ. ಪ್ರತೀ ಜಿಲ್ಲೆ, ಹೋಬಳಿ, ಪಂಚಾಯತ್‌ ಮಟ್ಟದಲ್ಲಿ ವಕ್ಫ್ ಸಮಸ್ಯೆ ಆಲಿಸುತ್ತೇವೆ. ಈ ಸಮಸ್ಯೆಗೆ ತಾರ್ಕಿಕ ಅಂತ್ಯ ಹುಡುಕುವ ನಿಟ್ಟಿನಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಆಂತರಿಕ ಚರ್ಚೆ ನಡೆಸಿ ಹೋರಾಟ ರೂಪಿಸಲಾಗಿದೆ ಎಂದು ಹೇಳಿದರು.

ಶಾಸಕ ಯತ್ನಾಳ್‌ ಬಿಜೆಪಿಯ ಹಿರಿ ಯರು. ಅವರು ನೈಜ ವರದಿ ತಂಡದಲ್ಲಿ ಪ್ರಮುಖರು ಇ¨ªಾರೆ. ಅವರನ್ನೂ ಒಳಗೊಂಡಂತೆ ನಾವು ಪ್ರವಾಸ ಮಾಡಲಿದ್ದೇವೆ. ಈ ವಿಷಯದಲ್ಲಿ ಗೊಂದಲ ಇಲ್ಲ. ಉಪ ಚುನಾವಣೆ ಮತದಾನಕ್ಕೆ ಮುಂಚಿತವಾಗಿ ಪಕ್ಷದ ಆಂತರಿಕ ಸಭೆ ಮಾಡಿದ್ದೇವೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು, ಎಲ್ಲ ಅಭಿಪ್ರಾಯವನ್ನು ಮನ್ನಿಸಿ ದಿನಾಂಕ ನಿರ್ಧರಿಸಿದ್ದೇವೆ. ಚುನಾವಣೆ ವೇಳೆ ಆ ಕಡೆ ಗಮನ ಕೊಡುವುದು ಸಹಜ. ನಮ್ಮ ಹೋರಾಟ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ
ಯತ್ನಾಳ್‌ಗೆ ವಕ್ಫ್ ಸಂಬಂಧ ರೈತರ ಕಾಳಜಿ ಇರುವುದನ್ನು ನಾವು ನೋಡುತ್ತಿದ್ದೇವೆ. ಆ ಕಾಳಜಿ ಬಿಜೆಪಿಯಲ್ಲೂ ಇರುವುದ ರಿಂದ ಒಟ್ಟಾಗಿ ಹೋರಾಟ ಮಾಡಲಿ ದ್ದೇವೆ. ಇರುವವರನ್ನು ಕಳಕೊಂಡು ಕೆಲಸ ಮಾಡುವ ಆವಶ್ಯಕತೆ ಇಲ್ಲ. ಭಿನ್ನಾಭಿ ಪ್ರಾಯ ಇ¨ªಾಗಲೇ ಪಕ್ಷ ಸರಿದಾರಿಯಲ್ಲಿ ನಡೆಯುತ್ತದೆ. ಈಗಲೂ ಕೂಡ ಸರಿದಾರಿ ಯಲ್ಲಿ ನಡೆಯಲು ಅವರನ್ನೂ ಕೂಡ ಸೇರಿಸಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಬೆಲ್ಲದ್‌, ಕಾರಜೋಳ ಹೆಸರು ಸೇರ್ಪಡೆ
ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಈ ಹಿಂದೆ ರಚಿಸಿದ್ದ ಸತ್ಯಶೋಧನ ಸಮಿತಿ ಅಧ್ಯಕ್ಷ ರನ್ನೇ “ನಮ್ಮ ಭೂಮಿ ನಮ್ಮ ಹಕ್ಕು’ ಅಧ್ಯಯನ ಪ್ರವಾಸದ ತಂಡದಿಂದ ಹೊರ ಗಿಟ್ಟು ಮುಜುಗರಕ್ಕೆ ಈಡಾದ ಬಿಜೆಪಿ, ಕೊನೆಗೆ ಪಟ್ಟಿ ಪರಿಷ್ಕರಣೆ ಮಾಡಿದೆ.ಈ ಸಮಿತಿಯ ಅಧ್ಯಕ್ಷರಾಗಿದ್ದ ಸಂಸದ ಗೋವಿಂದ ಕಾರಜೋಳ ಅವರನ್ನು ಶುಕ್ರವಾರ ಬಿಡುಗಡೆ ಮಾಡಿದ ತಂಡದ ಪಟ್ಟಿಯಲ್ಲಿ ಸೇರಿಸಿರಲಿಲ್ಲ. ಅದೇ ರೀತಿ ವಿಧಾನಸಭೆ ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ಗೂ ಸ್ಥಾನ ಕಲ್ಪಿಸಿರಲಿಲ್ಲ. ಈ ವಿಚಾರ ವಿವಾದದ ಸ್ವರೂಪ ಪಡೆಯ ಬಹುದೆಂಬುದು ಗೊತ್ತಾಗುತ್ತಿದ್ದಂತೆ ಪಟ್ಟಿ ಪರಿಷ್ಕರಣೆ ಮಾಡಿ, ಇವರಿಬ್ಬರನ್ನೂ ಸೇರ್ಪಡೆ ಮಾಡಲಾಗಿದೆ. ಕಣ್ತಪ್ಪಿನಿಂದ ಈ ರೀತಿಯಾಗಿದೆ. ಉದ್ದೇಶ ಪೂರ್ವಕ ವಲ್ಲ ಎಂದು ಬಿಜೆಪಿ ರಾಜ್ಯ ಘಟಕ ಸ್ಪಷ್ಟನೆ ನೀಡಿದೆ.

ಹೇಗಿರಲಿದೆ ಪ್ರತಿಭಟನೆ?

ಈ ವಾರದ ಪ್ರತಿಭಟನೆ ವೇಳೆ ಜನರಿಂದ ಅಹವಾಲು ಸ್ವೀಕಾರ
ಅಧ್ಯಯನ ತಂಡದಿಂದ ಸಮಸ್ಯೆಗಳ ಆಲಿಸುವಿಕೆ
ಬೆಳಗ್ಗೆಯಿಂದ ಸಂಜೆಯವರೆಗೆ ರೈತರ ಅಹವಾಲು ಸ್ವೀಕಾರ
ಪ್ರತೀ ತಂಡದಿಂದ ಡಿಸೆಂಬರ್‌ ಮೊದಲ ವಾರವೇ ಪ್ರವಾಸ ಆರಂಭ
ಕನಿಷ್ಠ 8-10 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿರುವ ಬಿಜೆಪಿ ತಂಡಗಳು
ಅಧಿವೇಶನದ ವೇಳೆ ಬೆಳಗಾವಿ ಯಲ್ಲಿ ಬೃಹತ್‌ ಪ್ರತಿಭಟನೆ
50ರಿಂದ 60 ಸಾವಿರ ಸಾರ್ವಜನಿಕರು, ರೈತರು ಭಾಗಿ
ಪ್ರತೀ ಜಿಲ್ಲೆ, ಹೋಬಳಿ, ಪಂಚಾಯತ್‌ ಮಟ್ಟದಲ್ಲಿ ವಕ್ಫ್ ಅಹವಾಲು ಸ್ವೀಕಾರ

ಬಿಜೆಪಿ ಯಾತ್ರೆಯ ತಂಡದಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರನ್ನು ಕೈಬಿಡುವ ಮೂಲಕ ಒಬ್ಬೊಬ್ಬರನ್ನೇ ಬಿಡುತ್ತಿದ್ದಾರೆ. ಅಪ್ಪ-ಮಕ್ಕಳು ಇದೇ ದಂಧೆ ಮಾಡುತ್ತಿದ್ದಾರೆ. ವಿಜಯಪುರದಲ್ಲಿ ನಮ್ಮ ದೊಡ್ಡ ಹೋರಾಟ ನೋಡಿ ಅವರು ಮೂರು ತಂಡ ರಚಿಸಿದ್ದಾರೆ. ಅದಕ್ಕೆ ದಿನಾಂಕ ಏನೂ ಇಲ್ಲ. ಅವ್ವ-ಅಪ್ಪ ಇಲ್ಲ. ಯತ್ನಾಳ್‌ ಮಾಡಿದ್ದಾರೆ ಎಂದು ಅವರದ್ದೂ ಒಂದು ತಂಡ ರಚಿಸಿದ್ದಾರೆ.
-ಬಸನಗೌಡ ಪಾಟೀಲ್‌ ಯತ್ನಾಳ್‌, ಶಾಸಕ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.