BJP ರಾಜ್ಯ ಪ್ರವಾಸ ಮೂರೇ ದಿನಕ್ಕೆ ಸೀಮಿತ

ರಾಜ್ಯ ಸರ್ಕಾರದ ವಿರುದ್ಧ ಸದನದ ಒಳಗೆ, ಹೊರಗೆ ಹೋರಾಟ ಕಮಲಪಡೆ ಸಿದ್ಧ

Team Udayavani, Jun 26, 2024, 6:55 AM IST

BJP ರಾಜ್ಯ ಪ್ರವಾಸ ಮೂರೇ ದಿನಕ್ಕೆ ಸೀಮಿತ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸುವುದಕ್ಕೆ ಅಧ್ಯಯನ ಹಾಗೂ ಜನಾಭಿಪ್ರಾಯ ಸಂಗ್ರಹಿಸಲು ಬಿಜೆಪಿ ನಡೆಸಲಿರುವ ರಾಜ್ಯ ಪ್ರವಾಸವನ್ನು ಕೇವಲ ಮೂರೇ ದಿನಕ್ಕೆ ಸೀಮಿತಗೊಳಿಸಲಾಗಿದೆ.

ಈ ಪ್ರವಾಸದ ಬಗ್ಗೆ ರೂಪು-ರೇಷೆ ರೂಪಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜೂ.27ರಂದು ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಯಾರ್ಯಾರ ನೇತೃತ್ವದಲ್ಲಿ ತಂಡ ರಚಿಸಬೇಕೆಂಬುದು ಇತ್ಯರ್ಥವಾಗಲಿದೆ.

ಆದರೆ ದೀರ್ಘ‌ ಪ್ರವಾಸ ಬೇಡ ಎಂದು ಶಾಸಕರು ಅಭಿಪ್ರಾಯ ತಿಳಿಸಿರುವ ಹಿನ್ನೆಲೆಯಲ್ಲಿ ಮೂರೇ ದಿನಕ್ಕೆ ಪ್ರವಾವನ್ನು ಸೀಮಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಸರ್ಕಾರದ ವಿರುದ್ಧ ಜನರಿಂದ ನೇರವಾಗಿ ಅಭಿಪ್ರಾಯ ಸಂಗ್ರಹಿಸಿ ಅದರ ಆಧಾರದ ಮೇಲೆ ಸರ್ಕಾರದ ವಿರುದ್ಧ ವಿಧಾನಮಂಡಲದ ಉಭಯ ಸದನಗಳಲ್ಲಿ ಹೋರಾಟ ನಡೆಸುವುದು ಬಿಜೆಪಿಯ ಉದ್ದೇಶವಾಗಿದೆ.

ಸದನಕ್ಕೂ ತಂಡ :
ಬಿಜೆಪಿ ಮೂಲಗಳ ಪ್ರಕಾರ ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಯೋಜಿತ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಹಿರಿತನ ಹಾಗೂ ವಿಷಯವಾರು ಪರಿಣತಿ ಆಧಾರದ ಮೇಲೆ ಯಾರು, ಯಾವ ಚರ್ಚೆಯಲ್ಲಿ ಭಾಗವಹಿಸಬೇಕೆಂಬ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್‌..ಅಶೋಕ, ಅರವಿಂದ ಬೆಲ್ಲದ್‌, ವಿ.ಸುನೀಲ್‌ ಕುಮಾರ್‌, ಬಸನಗೌಡ ಪಾಟೀಲ್‌ ಯತ್ನಾಳ್‌, ಅಭಯ್‌ ಪಾಟೀಲ್ , ಬಿ.ವೈ.ವಿಜಯೇಂದ್ರ, ಡಾ. ಭರತ್‌ ಶೆಟ್ಟಿ, ಎಸ್‌.ಆರ್‌. ವಿಶ್ವನಾಥ್‌, ಡಾ. ಸಿ.ಎನ್‌. ಅಶ್ವತ್ಥನಾರಾಯಣ ಮೊದಲಾದವರಿಗೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ.

ಪರಿಷತ್ತಿನಲ್ಲಿ ಸಿ.ಟಿ.ರವಿ, ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿಗೆ ಹೊಣೆ ನೀಡಲಾಗುತ್ತಿದೆ. ಒಟ್ಟಾರೆಯಾಗಿ ಈ ಬಾರಿ ಸದನದಲ್ಲಿ ಸಂಘಟಿತ ಹೋರಾಟ ನಡೆಸುವುದಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ.

ಜುಲೈ 4ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಜು.4ರಂದು ಬಿಜೆಪಿ ಶಾಸಕರ ಸಭೆ ಕರೆಯಲಾಗಿದ್ದು, ಈ ತುರ್ತು ಕರೆಯ ಉದ್ದೇಶವನ್ನು ಗೌಪ್ಯವಾಗಿ ಇಡಲಾಗಿದೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಈ ಸಭೆ ಆಯೋಜಿಸಲಾಗಿದ್ದು, ಬಿಜೆಪಿ ಮುಖ್ಯ ಸಚೇತಕರ ಕಚೇರಿಯಿಂದ ಎಲ್ಲ ಶಾಸಕರಿಗೆ ಸಂದೇಶ ರವಾನೆ ಮಾಡಲಾಗಿದೆ.

ಮಹತ್ವದ ವಿಚಾರದ ಬಗ್ಗೆ ಚರ್ಚಿಸುವುದಕ್ಕೆ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿದೆ ಎಂದು ಈ ಮೊದಲು ಸೂಚಿಸಲಾಗಿತ್ತು. ಆದರೆ ಈಗ ಬ್ರೇಕ್‌ ಪಾಸ್ಟ್‌ ಮೀಟಿಂಗ್‌ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಅಧಿವೇಶನ ಸಂದರ್ಭದಲ್ಲಿ ಈ ಸಭೆ ಕರೆಯಲಾಗುತ್ತದೆ. ಆದರೆ ಅಧಿವೇಶನಕ್ಕೆ ದಿನಾಂಕ ನಿಗದಿಯಾಗುವುದಕ್ಕೆ ಮುನ್ನವೇ ಸಭೆ ಕರೆದಿರುವುದು ಕುತೂಹಲ ಸೃಷ್ಟಿಸಿದೆ.

ಟಾಪ್ ನ್ಯೂಸ್

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

BJP-flag

Congress ಸರ್ಕಾರದಿಂದ ರಾಜ್ಯ ಬರ್ಬಾದ್‌ ; ಬಿಜೆಪಿ ಟೀಕೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.