By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ
ಬೃಹತ್ ಮೆರವಣಿಗೆ... ಸಿಎಂ, ಡಿಸಿಎಂ ಸೇರಿ ಘಟಾನುಘಟಿಗಳು ಕಣಕ್ಕೆ
Team Udayavani, Oct 24, 2024, 7:47 PM IST
ಚನ್ನಪಟ್ಟಣ/ ಸಂಡೂರು: ಉಪಚುನಾವಣ ಕಣದ ಪ್ರಚಾರ ರಂಗೇರಿದ್ದು ಗುರುವಾರ(ಅ24) ಕಾಂಗ್ರೆಸ್ ಅಭ್ಯರ್ಥಿಗಳಾದ ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಮತ್ತು ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಅವರು ನಾಮಪತ್ರ ಸಲ್ಲಿಸಿದರು.
ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ ಅವರ ನಾಮಪತ್ರ ಸಲ್ಲಿಕೆಗೂ ಮುನ್ನಬೃಹತ್ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ,ಮಾಜಿ ಸಂಸದ ಡಿ.ಕೆ.ಸುರೇಶ್, ಸಚಿವ ಬೈರತಿ ಸುರೇಶ್, ಎಂ.ಸಿ ಸುಧಾಕರ್, ಶಾಸಕರಾದ ಮಾಗಡಿ ಬಾಲಕೃಷ್ಣ, ಡಾ. ರಂಗನಾಥ್, ಕದಲೂರು ಉದಯ್, ನೆಲಮಂಗಲ ಶ್ರೀನಿವಾಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಮಾಜಿ ಶಾಸಕರಾದ ಎಂ.ಸಿ ಅಶ್ವತ್ಥ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಎಸ್. ರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವ ವೇಳೆ ಸಿದ್ದರಾಮಯ್ಯ,ಡಿ.ಕೆ.ಶಿವಕುಮಾರ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಉಪಸ್ಥಿತರಿದ್ದರು.
ಸಂಡೂರಿನಲ್ಲೂ ಶಕ್ತಿ ಪ್ರದರ್ಶನ
ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಬೃಹತ್ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದರು. ಸಂಸದ ಈ. ತುಕಾರಾಮ್, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಮೊದಲಾದ ನಾಯಕರು ಹಾಜರಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಯಲ್ಲಿ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ , ಸಚಿವ ಸಂತೋಷ್ ಲಾಡ್, ಮಾಜಿ ಸಚಿವ ಬಿ.ನಾಗೇಂದ್ರ, ಪಿ.ಟಿ ಪರಮೇಶ್ವರ ನಾಯ್ಕ್, ಅಲ್ಲಂ ವೀರಭದ್ರಪ್ಪ, ಶಾಸಕ ಡಾ.ಎನ್.ಟಿ ಶ್ರೀನಿವಾಸ್, ಬಿ.ಎಂ. ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಸಾಲ ಬಾಧೆಯಿಂದ ರೈತ ಆತ್ಮಹ*ತ್ಯೆ
Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!
BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ
Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್
Congress MLA ; ಬೇಲೇಕೇರಿ ಅದಿರು ನಾಪತ್ತೆ ಕೇಸ್: ಕಾರವಾರ ಶಾಸಕ ಸತೀಶ್ ಸೈಲ್ ದೋಷಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.