By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಯಾವಾಗಲೂ ಒಳ ಒಪ್ಪಂದದ ರಾಜಕಾರಣ ಮಾಡುವುದಿಲ್ಲ...

Team Udayavani, Oct 25, 2024, 7:13 PM IST

1-a-siddu

ಹುಬ್ಬಳ್ಳಿ: ”ಎಚ್.ಡಿ.ಕುಮಾರಸ್ವಾಮಿ ಪ್ರತಿಬಾರಿಯೂ ಭಾವನಾತ್ಮಕ ಮಾತು, ಕಣ್ಣೀರು ಹಾಕುವುದನ್ನು ನೋಡಿ ಜನರು ಬೇಸತ್ತಿದ್ದಾರೆ. ಇದಕ್ಕೆಲ್ಲ ಮತದಾರರು ಮಾರು ಹೋಗುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು.

ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ನಿಖಿಲ್ ಕುಮಾರಸ್ವಾಮಿಯನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಭಾಷಣ ವಿಷಯವಾಗಿ ಪ್ರತಿಕ್ರಿಯಿಸಿ ‘ಎಲ್ಲ ಸಂದರ್ಭದಲ್ಲೂ ಅಳು ನೋಡಿ ಜನರು ಮತ ಹಾಕುವುದಿಲ್ಲ. ಅವರಿಗೂ ನೋಡಿ ನೋಡಿ ಸಾಕಾಗಿದೆ. ಹೀಗಾಗಿ ಮತದಾರರ ಆಶೀರ್ವಾದ ನಮ್ಮ‌ ಮೇಲಿದೆ’ ಎಂದರು.

ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲಿ ನಾವು ಗೆಲ್ಲಲಿದ್ದು, ಸಮರ್ಥ ಅಭ್ಯರ್ಥಿಗಳನ್ನು ಪಕ್ಷದಿಂದ ಕಣಕ್ಕಿಳಿಸಿದ್ದೇವೆ. ಕಾಂಗ್ರೆಸ್ ಯಾವಾಗಲೂ ಒಳ ಒಪ್ಪಂದದ ರಾಜಕಾರಣ ಮಾಡುವುದಿಲ್ಲ. ಅದನ್ನು ಬಿಜೆಪಿನೇ ಮಾಡಿಕೊಂಡಿರಬಹುದು. ಅವರು ಸೋಲಲೆಂದೆ ಇಂತಹ ರಾಜಕಾರಣ ಮಾಡಿಕೊಳ್ಳುತ್ತಾರೆ. ಶಿಗ್ಗಾವಿಯಲ್ಲಿ ನಾವು ಗೆಲ್ಲುವ ಸಮರ್ಥ ಅಭ್ಯರ್ಥಿ ಕಣಕ್ಕಿಳಿಸಿದ್ದೇವೆ ಎಂದರು.

ಶಿಗ್ಗಾವಿಯಲ್ಲಿ ನಮಗೆ ಅಭ್ಯರ್ಥಿ ಎದುರಾಳಿಯಲ್ಲ, ಕಾಂಗ್ರೆಸ್ ಎಂಬ ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಕಳೆದ ಚುನಾವಣೆಯಲ್ಲಿ ನಾವು ಬಿಜೆಪಿಗೆ ತೀವ್ರ ಸ್ಪರ್ಧೆ ಒಡ್ಡಿದ್ದೇವು. ಸ್ಪರ್ಧೆಯೇ ಇಲ್ಲದಿದ್ದರೆ ಹೆಚ್ಚು ಮತಗಳು ಹೇಗೆ ಬಂದವು? ಬೊಮ್ಮಾಯಿ ಸ್ಪರ್ಧಿಸಿದ್ದ ಶಿಗ್ಗಾವಿ ಕ್ಷೇತ್ರದಲ್ಲಿಯೇ ಹೆಚ್ಚು ಮತಗಳು ಬಂದಿವೆ. ನಮಗೆ ಅಲ್ಲಿ ಬಿಜೆಪಿ ಎದುರಾಳಿಯೇ ಅಲ್ಲ ಎಂದು ಹೇಳಿದರು.

ಶಿಗ್ಗಾವಿ ವಿಧಾನಸಭಾ ಕ್ಚೇತ್ರದ ಟಿಕೆಟ್ ಅನ್ನು ಯಾಸಿನ್ ಪಠಾಣ ಮತ್ತು ಅಜ್ಜಂಪೀರ ಖಾದ್ರಿ ಇಬ್ಬರೂ ಕೇಳಿದ್ದರು. ಅವರಿಬ್ಬರೂ ಸಮರ್ಥ ಅಭ್ಯರ್ಥಿಗಳೇ. ಆದರೆ, ಕಳೆದ ಬಾರಿ ಪಠಾಣ ಅವರಿಗೆ ನೀಡಲಾಗಿತ್ತು, ಹೀಗಾಗಿ ಈಗಲೂ ಅವರಿಗೆ ನೀಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸಿಎಂ ಅವರು, ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬದವರಿಗೆ 5ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.

ಟಾಪ್ ನ್ಯೂಸ್

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

By ElectioN; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.