ಡಿ.ಕೆ.ಶಿವಕುಮಾರ್ ಜತೆಗೆ ಬಿಜೆಪಿಯ ಬೈರತಿ ಬಸವರಾಜ್
Team Udayavani, Mar 2, 2024, 11:58 PM IST
ಬೆಂಗಳೂರು: ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಆಗಾಗ್ಗೆ ಅಲ್ಲಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆಗೆ ಕಾಣಿಸಿಕೊಳ್ಳುತ್ತಿರುವ ಮಧ್ಯೆ ಈಗ ಶುಕ್ರವಾರ ಕೆ.ಆರ್.ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ಕೂಡ ಡಿಸಿಎಂ ಜತೆಗೆ ವೇದಿಕೆಗೆ ಬಂದಿದ್ದು ಕುತೂಹಲ ಮೂಡಿಸಿತು.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕೆ.ಆರ್.ಪುರಂನ ನಗರೇಶ್ವರ ನಾಗೇನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬೈರತಿ ಬಸವರಾಜ್ ಅವರು ಡಿಸಿಎಂ ಸಹಿತ ಕಾಂಗ್ರೆಸ್ ಮುಖಂಡರ ಜತೆಗೆ ಕಾಣಿಸಿಕೊಂಡರು. ಡಿಕೆಶಿ ಪಕ್ಕದಲ್ಲೇ ಕುಳಿತು ಸ್ವಲ್ಪ ಹೊತ್ತು ಗುಸುಗುಸು ಮಾತನಾಡಿ ಗಮನ ಸೆಳೆದರು.
ಬಳಿಕ ಮಾತನಾಡಿದ ಬೈರತಿ ಬಸವರಾಜ್ ಮಾತನಾಡಿ, ಕೊಳಗೇರಿ ನಿವಾಸಿಗಳಿಗಾಗಿ ಮನೆ ನಿರ್ಮಿಸುವ ಕಾರ್ಯಕ್ರಮಕ್ಕೆ ನಾನೇ ಚಾಲನೆ ನೀಡಿದ್ದೆ. ನನ್ನ ಕ್ಷೇತ್ರದಲ್ಲಿ ಕೊಳಗೇರಿ ನಿವಾಸಿಗಳಿಗೆ ಸರಕಾರ ಮನೆ ನಿರ್ಮಿಸಿಕೊಟ್ಟಿರುವುದು ಖುಷಿ ಕೊಟ್ಟಿದೆ. ಅಧಿಕಾರದಲ್ಲಿ ಯಾವುದೇ ಸರಕಾರ ಇದ್ದರೂ ಅಭಿವೃದ್ಧಿ ವಿಚಾರದಲ್ಲಿ ಅಡ್ಡಿ ಮಾಡದೇ ಕೈಜೋಡಿಸಬೇಕು. ಈ ಸರಕಾರ ಬಡವರಿಗೆ ಮನೆ ಕಲ್ಪಿಸುತ್ತಿರುವುದು ಸಂತಸ ವಿಚಾರ ಎಂದರು.
ಕಾರ್ಯಕ್ರಮದ ಬಳಿಕ ಡಿ.ಕೆ.ಶಿವಕುಮಾರ್ ವೇದಿಕೆಯಿಂದ ತೆರಳುತ್ತಿದ್ದಂತೆ ಬೈರತಿ ಕೂಡ ಹಿಂದೆ ಸಾಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಬೈರತಿ ಬಸವರಾಜ ಕಾಣಿಸಿಕೊಳ್ಳಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ
Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್
Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ
Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು
Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್ನಲ್ಲಿ ʼರಾಮಾಯಣʼವೇ ಹೈಲೈಟ್
Kaup: ಉಚ್ಚಿಲ ದಸರೆಗೆ ವಸ್ತುಪ್ರದರ್ಶನ ಮೆರುಗು
ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್ ರಾಯ್: ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ
Mangaluru: ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ
Karkala: ಮಕ್ಕಳ ಕೈಯ್ಯಲ್ಲಿ ಹೂವಿನಕೋಲು!; ನವರಾತ್ರಿ ವಿಶೇಷ ಆಚರಣೆ ಮುಂದುವರಿಸುವ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.