ಶಕ್ತಿಯುತ ಯುವಜನತೆ ದೇಶದ ಭವಿಷ್ಯ : ಸಿಎಂ


Team Udayavani, Nov 20, 2021, 9:49 PM IST

ಶಕ್ತಿಯುತ ಯುವಜನತೆ ದೇಶದ ಭವಿಷ್ಯ : ಸಿಎಂ

ಬೆಂಗಳೂರು: ಶಕ್ತಿಯುತ ಯುವಜನತೆ  ದೇಶದ ಭವಿಷ್ಯ . ಹುರುಪು ಹುಮ್ಮಸ್ಸು ಶಕ್ತಿಯನ್ನು ಕ್ರೀಡಾಪಟುಗಳಲ್ಲಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಉಪಸ್ಥಿತಿಯಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಂಡಿಯನ್ ನ್ಯಾಷನಲ್ ಬ್ಯಾಸ್ಕೆಟ್ ಬಾಲ್ ಲೀಗ್ ನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಕ್ರೀಡೆ ಯುವಕರಲ್ಲಿ ಚಾರಿತ್ರ್ಯವನ್ನು ಬೆಳೆಸುತ್ತದೆ :

ಯಾವುದೇ ಕ್ರೀಡೆಯಲ್ಲಿ ಗೆಲ್ಲಬೆಕೆನ್ನುವ ಹಂಬಲ ಇರಬೇಕು. ಗೆಲವು ಸಾಧಿಸಲು ಕಠಿಣ ಪರಿಶ್ರಮ, ಶಿಸ್ತು  ಬೇಕಾಗುತ್ತದೆ. ಕ್ರೀಡೆ ಯುವಕರಲ್ಲಿ ಚಾರಿತ್ರ್ಯವನ್ನು ಬೆಳೆಸುತ್ತದೆ. ಆಟವನ್ನು ರಕ್ಷಣಾತ್ಮಕವಾಗಿ ಹಾಗೂ ಆಕ್ರಮಕಾರಿಯಾಗಿ ಆಡಬಹುದು. ಆದರೆ ಆಟದಲ್ಲಿ ಗೆಲವು ಸಾಧಿಸಲು ಆಕ್ರಮಣಕಾರಿಯಾಗಿ ಆಡಬೇಕಾಗುತ್ತದೆ.  ನಿಜವಾದ ಕ್ರೀಡಾಪಟು ಗೆಲ್ಲುವ ಛಲ,ಗುರಿ ಇದ್ದರೂ ಮಾನಸಿಕವಾಗಿ ಸೋಲು, ಗೆಲವನ್ನು ಸಮನಾಗಿ ತೆಗೆದುಕೊಳ್ಳುವುದು ಒಬ್ಬ ಕ್ರೀಡಾಪಟುವಿನ ಗುಣವಾಗಿರಬೇಕು ಎಂದು ನುಡಿದರು.

ಕ್ರಿಕೆಟ್, ಕಬ್ಬಡಿ, ಹಾಕಿ, ಫುಟ್ಬಾಲ್ ನಂತೆ ರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ಅಸೋಸಿಯೇಷನ್ ಅವರು ಬ್ಯಾಸ್ಕೆಟ್ ಬಾಲ್  ಲೀಗ್ ಪ್ರಾರಂಭಿಸಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ ಮುಖ್ಯಮಂತ್ರಿಗಳು,  ಲೀಗ್ ಯಶಸ್ವಿಯಾಗಿ ಜರುಗಲಿ ಎಂದು ಶುಭ ಹಾರೈಸಿದರು.

ಮುಂದಿನ ಆಯವ್ಯಯದಲ್ಲಿ ಕ್ರೀಡೆಗೆ ಹೆಚ್ಚಿನ ಅನುದಾನ:

ಅಮೃತ ಕ್ರೀಡಾ ದತ್ತು ಯೋಜನೆ ಯಡಿ 75 ಕ್ರೀಡಾಪಟುಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದ್ದು, ಉತ್ತಮ ಹಾಗೂ ಅನುಭವಿ ತರಬೇತುದಾರರಿಂದ ತರಬೇತಿ ಕೊಡಿಸಿ 75 ಮಂದಿಯಲ್ಲಿ ಕನಿಷ್ಟ 5 ಮಂದಿಯಾದರು ಪದಕ ಗೆಲ್ಲುವ ಗುರಿಯನ್ನು ಸರ್ಕಾರ ಹೊಂದಿದೆ.  ಮುಂಬರುವ ಆಯವ್ಯಯದಲ್ಲಿ ಕ್ರಿಡಾ ಇಲಾಖೆಗೆ ಸರ್ಕಾರ ಹೆಚ್ಚಿನ ಅನುದಾನ ನೀಡಲಾಗುವುದು. ಖೇಲೋ ಇಂಡಿಯಾ, ಜೀತೋ ಇಂಡಿಯಾದ ಸ್ಪೂರ್ತಿಯಾದ ನಮ್ಮ ಪ್ರಧಾನಮಂತ್ರಿಯವರನ್ನು ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಉದ್ಘಾಟನೆಗೆ ಆಹ್ವಾನಿಸಲಾಗುವುದು.ಪ್ರಧಾನಿಯವರು ನೀಡಿದ ಕ್ರೀಡಾ ಪ್ರೋತ್ಸಾಹದಿಂದ ಒಲಂಪಿಕ್ಸಸ್ 2021 ರಲ್ಲಿ ಭಾರತ ಗರಿಷ್ಠ ಪದಕಗಳನ್ನು ಗೆಲ್ಲುವಂತಾಯಿತು. ಈ ಪರಂಪರೆ ಮುಂದುವರೆಸಲು ರಾಜ್ಯ ಸರ್ಕಾರ ಸಹಕಾರ ನೀಡಲಿದೆ ಎಂದು ತಿಳಿಸಿದರು.

ಬಲಿಷ್ಟ ಕರ್ನಾಟಕ ನಿರ್ಮಾಣ:

ಕನ್ನಡದ ಖ್ಯಾತ ನಟ ಯಶ್ ಎಂದರೆ ಯಶಸ್ಸು. ಯಶ್ ಇರುವಲ್ಲಿ ಆತ್ಮ ವಿಶ್ವಾಸ ತುಂಬಿರುತ್ತದೆ. ಅವರ ಉಪಸ್ಥಿತಿ ಎಲ್ಲ ಕ್ರೀಡಾಪಟುಗಳಲ್ಲಿ, ಯುವಕರಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ‘ಜೈಹೋ’ಗೀತೆ  ಪ್ರಸ್ತುತಪಡಿಸಿದ ಸುಪ್ರಸಿದ್ಧ ಗಾಯಕ ಶ್ರೀ ವಿಜಯ ಪ್ರಕಾಶ್ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು , ಈ ಗೀತೆ ಇಡೀ ದೇಶದಲ್ಲಿ ಸ್ಪೂರ್ತಿ ತುಂಬುತ್ತಾ ಬಂದಿದೆ. ಈ ಕಾರ್ಯಕ್ರಮದಿಂದ ಹಾಗೂ ನೆರೆದಿರುವ ಗಣ್ಯರಿಂದ  ಬಹಳಷ್ಟು ಶಕ್ತಿ , ಪ್ರೋತ್ಸಾಹ ಹಾಗೂ ಆತ್ಮವಿಶ್ವಾಸವನ್ನು ಪಡೆದಿದ್ದು, ರಾಜ್ಯವನ್ನು ಬಲಿಷ್ಠ ಕರ್ನಾಟಕ ನಿರ್ಮಿಸುವುದಾಗಿ ಅವರು ತಿಳಿಸಿದರು.

ಸಮಾರಂಭದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಐ.ಎನ್.ಬಿ.ಎಲ್ ಅಧ್ಯಕ್ಷರು   ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಚಿತ್ರನಟ ಯಶ್, ಗಾಯಕ ವಿಜಯ ಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.