ಕರಾವಳಿಯ ಕಡೆಗೂ ಐಟಿ ಬಿಟಿ: ಉದಯವಾಣಿ ಸಂವಾದದಲ್ಲಿ ಸಚಿವ ಅಶ್ವತ್ಥನಾರಾಯಣ
2, 3ನೇ ಹಂತದ ನಗರಗಳಲ್ಲಿ 75 ಸಾವಿರ ಕೋಟಿ ರೂ. ಹೂಡಿಕೆ ಗುರಿ
Team Udayavani, Oct 25, 2022, 7:00 AM IST
ಬೆಂಗಳೂರು: “ಬೆಂಗಳೂರಿನಾಚೆ’ (ಬಿಯಾಂಡ್ ಬೆಂಗಳೂರು) ಎಂಬ ಪರಿಕಲ್ಪನೆಯಡಿ ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದ ಮಂಗಳೂರು ಸೇರಿದಂತೆ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಐಟಿ-ಬಿಟಿ ಕ್ಷೇತ್ರ ದಲ್ಲಿ 75 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಗುರಿ ರಾಜ್ಯಸರಕಾರ ಹೊಂದಿದೆ.
“ಉದಯವಾಣಿ’ ಕಚೇರಿಯಲ್ಲಿ ಸೋಮವಾರ “ಸಂವಾದ’ದಲ್ಲಿ ಪಾಲ್ಗೊಂಡು ಮಾತನಾಡಿದ ಐಟಿ-ಬಿಟಿ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ ಅವರು, ಈ ನಿಟ್ಟಿನಲ್ಲಿ ವಿಜ್ಞಾನ, ಐಟಿ-ಬಿಟಿ ಇಲಾಖೆ ಈಗಾಗಲೇ ಕಾರ್ಯಪ್ರವೃತ್ತವಾಗಿದೆ’ ಎಂದರು.
ಹತ್ತು ತಿಂಗಳಲ್ಲಿ 24 ಕಂಪೆನಿಗಳನ್ನು ಬೆಂಗಳೂರಿನಾಚೆಗಿನ ನಗರಗಳಲ್ಲಿ ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈ ಪೈಕಿ ಏಳು ಕಂಪೆನಿಗಳು ಮೈಸೂರಿಗೆ ಬಂದಿವೆ. ಈ ಪ್ರಯೋಗ ಮುಂಬರುವ ದಿನಗಳಲ್ಲಿ ಮತ್ತಷ್ಟು ವಿಸ್ತರಣೆಯಾಗಲಿದೆ. ಮೂರು ವರ್ಷಗಳಲ್ಲಿ 10 ಬಿಲಿಯನ್ ಡಾಲರ್ (75 ಸಾವಿರ ಕೋಟಿ) ಬಂಡವಾಳ ಹೂಡಿಕೆ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಇಎಸ್ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂ ಡಿಸೈನ್ ಆ್ಯಂಡ್ ಮ್ಯಾನ್ಯು ಫ್ಯಾಕ್ಚರಿಂಗ್), ರಕ್ಷಣ ವಿಭಾಗ ಮತ್ತು ಸೈಬರ್ ಸೆಕ್ಯುರಿಟಿಯಲ್ಲಿ ಹೂಡಿಕೆಯಾಗಿದೆ. 200 ಎಕರೆಯಲ್ಲಿ ಇಎಂಸಿ (ಎಲೆಕ್ಟ್ರಾನಿಕ್ ಮ್ಯಾನ್ಯು ಫ್ಯಾಕ್ಚರಿಂಗ್ಕ್ಲಸ್ಟರ್) ಬರಲಿದೆ. ಇದೇ ಮಾದರಿಯಲ್ಲಿ ಮಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆಯಂಥ ನಗರಗಳಲ್ಲಿ ಸ್ಟಾರ್ಟ್ಅಪ್, ಐಟಿ-ಬಿಟಿ, ಎಲೆಕ್ಟ್ರಾನಿಕ್ಸ್ ವಲಯವನ್ನು ಕೊಂಡೊಯ್ಯಲಾಗು ವುದು ಎಂದರು.
ದೇಶದಲ್ಲೇ ಮೊದಲ ಪ್ರತಿಷ್ಠಿತ ಸೆಮಿಕಂಡಕ್ಟರ್ ಘಟಕ ಮೈಸೂರಿನಲ್ಲಿ ಫೆಬ್ರವರಿ ವೇಳೆಗೆ ಆರಂಭವಾಗಲಿದೆ. 22,900 ಕೋಟಿ ಹೂಡಿಕೆ ಆಗಲಿದೆ. 1,500 ಮಂದಿಗೆ ಉದ್ಯೋಗದ ಜತೆಗೆ ಪರೋಕ್ಷವಾಗಿ ಹತ್ತು ಸಾವಿರ ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದರು.
ಪಠ್ಯಕ್ರಮ ಬದಲಾವಣೆ ಅಲ್ಲ; ಅಂತರಶಿಸ್ತು ಅಷ್ಟೇ
ಎಂಜಿನಿಯರಿಂಗ್ ಪಠ್ಯಕ್ರಮ ಬದ ಲಾಯಿಸು ತ್ತಿಲ್ಲ. ಬದಲಿಗೆ ಈಗಿನ ಅಗತ್ಯಕ್ಕೆ ತಕ್ಕಂತೆ ಅಂತರ ಶಿಸ್ತೀಯ ಸ್ಪರ್ಶ ನೀಡಲಾಗುತ್ತಿದೆ. ಈ ಪ್ರಯೋಗ ದಿಂದ ವಿದ್ಯಾರ್ಥಿಗಳ ಮುಂದೆ ಹೆಚ್ಚು ಆಯ್ಕೆಗಳು ತೆರೆದುಕೊಳ್ಳಲಿವೆ ಎಂದು ಡಾ| ಸಿ.ಎನ್. ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದರು.
ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಕಂಪ್ಯೂ ಟರ್ ಸೈನ್ಸ್ ಕಲಿಯಬಹುದು, ಮೆಕಾನಿಕಲ್ ಎಂಜಿನಿಯರ್ ಮತ್ತೂಂದು ಕೋರ್ಸ್ ಆಯ್ಕೆ ಮಾಡಿ ಕೊಳ್ಳ ಬಹುದು. ಇದರ ಮೂಲ ಉದ್ದೇಶ ಪರಿ ಕಲ್ಪನೆ ಆಧಾರಿತ ಕಲಿಕೆ, ಅಗತ್ಯಕ್ಕೆ ಪೂರಕವಾದ ದ್ದನ್ನು ಕಲಿಸುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ
Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ ನಾಯ್ಕ
Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು
Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Toxic Movie: ಯಶ್ ʼಟಾಕ್ಸಿಕ್ʼ ಅಖಾಡಕ್ಕೆ ಖಡಕ್ ಬ್ರಿಟೀಷ್ ನಟ ಎಂಟ್ರಿ
Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ
Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ
45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್ 45 ಬಗ್ಗೆ ಶಿವಣ್ಣ ಮಾತು
Bunts Hostel ವೃತ್ತ: ಫುಟ್ಪಾತ್ ಇಲ್ಲದೆ ಅಪಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.