Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ
Team Udayavani, Sep 7, 2024, 4:41 PM IST
ಕಲಬುರಗಿ: 10 ವರ್ಷಗಳ ನಂತರ ತೊಗರಿ ನಾಡು ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ನಿಗದಿಯಾಗಿದೆ.
ಸೆ.17ರ ಸಂಜೆ 4 ಗಂಟೆಗೆ ಕಲಬುರಗಿ ನಗರದ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಂಪುಟ ಸಭೆ ನಿಗದಿಗೊಳಿಸಲಾಗಿದೆ.
ಕಲಬುರಗಿಯಲ್ಲಿ ಪ್ರಸಕ್ತ ಸಾಲಿನ 19ನೇ ಸಚಿವ ಸಂಪುಟ ಸಭೆ ಎಂಬುದಾಗಿ ಸಚಿವ ಸಂಪುಟದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದಾರೆ.
ಮುಖ್ಯಮಂತ್ರಿಗಳು ಸೆ.17ರಂದು ಬೆಳಗ್ಗೆ 9 ಗಂಟೆಗೆ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಸಂಪುಟದ ಎದುರು ಕಳುಹಿಸಬಹುದಾದ ವಿಷಯಗಳನ್ನು ಮುಂದಿನ 5 ದಿನದೊಳಗೆ ಆಯಾ ಇಲಾಖೆಗಳು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಕಲಬುರಗಿಯಲ್ಲಿ ಈ ಹಿಂದೆ 2014ರ ನ.28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದರೆ ಈಗ 10 ವರ್ಷಗಳ ನಂತರ ಅವರದ್ದೇ ನೇತೃತ್ವದಲ್ಲಿ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ 2ನೇ ಸಂಪುಟ ಸಭೆ ಇದಾಗಲಿದೆ. 2010ರಲ್ಲಿ ಖಮರುಲ್ ಇಸ್ಲಾಂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಯಡಿಯೂರಪ್ಪ ನೇತೃತ್ವದಲ್ಲಿ ಸತತವಾಗಿ 2008ರ ಸೆ.26, 2009ರ ಆ.27 ಹಾಗೂ 2010ರ ಅ.10ರಂದು ಕಲಬುರಗಿಯಲ್ಲಿ ಸಂಪುಟದ ಸಭೆಗಳು ನಡೆದಿವೆ.
ಇದಕ್ಕೂ ಮುಂಚೆ 1982ರಲ್ಲಿ ಗುಂಡೂರಾವ್ ಸಿಎಂ ಆಗಿದ್ದಾಗ ಕಲಬುರಗಿಯಲ್ಲಿ, ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ 2012ರ ಅ.18ರಂದು ಸಂಪುಟ ಸಭೆ ನಡೆದಿವೆ.
ಹಿಂದಿನ ಸಂಪುಟ ಸಭೆಗಳ ಮೇಲೆ ಒಂದು ನೋಟ: ಈ ಹಿಂದೆ ನಡೆದ ಸಚಿವ ಸಂಪುಟ ಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳಲ್ಲಿ ಶೇ.50ರಷ್ಟು ಮಾತ್ರ ಅನುಷ್ಠಾನಗೊಂಡಿವೆ. ಯಾದಗಿರಿ ಜಿಲ್ಲಾ ಘೋಷಣೆ, ರಾಯಚೂರಲ್ಲಿ ಕೃಷಿ ವಿವಿ ಸ್ಥಾಪನೆ, ಹುಬ್ಬಳ್ಳಿ- ಧಾರವಾಡದಲ್ಲಿ ಕಾನೂನು ವಿವಿ ಸ್ಥಾಪನೆ, ಬಾಗಲಕೋಟೆಯಲ್ಲಿ ತೋಟಗಾರಿಕೆ ವಿವಿ ಸ್ಥಾಪನೆ, ಮರ್ತೂರಿನಲ್ಲಿ ಸರ್ಕಾರಿ ಕಾನೂನು ಕಾಲೇಜು ಸ್ಥಾಪನೆ, ಸರ್ಕಾರದ ವತಿಯಿಂದಲೇ ವಾಲ್ಮೀಕಿ ಜಯಂತಿ ಆಚರಣೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂ ಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿತ್ತು.
–ಹಣಮಂತರಾವ ಭೈರಾಮಡಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್ ಸಮಿತಿ: ನಾಗಲಕ್ಷ್ಮಿ ಚೌಧರಿ
B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ
Nagamangala Riot: ಗಲಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಅನುಮಾನವಿದೆ: ಆರ್.ಅಶೋಕ್
H D Kumaraswamy; ಮಾನವ ಸರಪಳಿಯಿಂದ ಪ್ರಜಾಪ್ರಭುತ್ವವನ್ನು ಕಾಪಾಡಬಹುದೇ?
Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.