![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 31, 2019, 3:07 AM IST
ಮಡಿಕೇರಿ: ಮಡಿಕೇರಿಯಲ್ಲಿ 2016ರಲ್ಲಿ ನಡೆದ ಡಿವೈಎಸ್ಪಿ ಮಾದಪಂಡ ಗಣಪತಿ ಅವರ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚೆನ್ನೈಯ ಸಿಬಿಐ ಪೂರ್ಣಗೊಳಿಸಿದ್ದು, ಬುಧವಾರ ಸಮಗ್ರ ತನಿಖಾ ವರದಿಯನ್ನು ನಗರದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಚೆನ್ನೈನ ಸಿಬಿಐ ತಂಡದ ಡಿವೈಎಸ್ಪಿ ರವಿ ಮತ್ತು ಸಿಬಿಐಯ ಸರಕಾರಿ ವಕೀಲ ಸುಬೋಧ್ ನೇತೃತ್ವದಲ್ಲಿ ಕೋರ್ಟ್ಗೆ ಆಗಮಿಸಿದ ನಾಲ್ವರು ಸಿಬಿಐ ಅಧಿಕಾರಿಗಳು, ಒಟ್ಟು 262 ಪುಟಗಳ ಸುದೀರ್ಘ ತನಿಖಾ ವರದಿಯನ್ನು ಸಲ್ಲಿಸಿದರು. ನ್ಯಾಯಾಲಯ ವಿಸ್ತೃತ ಪರಿಶೀಲನೆ ನಡೆಸಿ ಅಂಗೀಕರಿಸಿತು.
ಡಿವೈಎಸ್ಪಿ ಗಣಪತಿ ಸಾವಿನ ಕುರಿತಂತೆ ಮೃತರ ಸಂಬಂಧಿಕರು ಜೆಎಂಎಫ್ಸಿ ಕೋರ್ಟ್ನ ಮೊರೆ ಹೋಗಿ ನಗರ ಪೊಲೀಸರಿಗೆ ಪ್ರಕರಣದ ಕುರಿತು ಎಫ್ಐಆರ್ ದಾಖಲಿಸಲು ಸೂಚಿಸುವಂತೆ ಮನವಿ ಮಾಡಿದ್ದರು. ಈ ಸಂದರ್ಭ ಅಂದಿನ ನ್ಯಾಯಮೂರ್ತಿಗಳು ನಗರ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುವಂತೆ ಸೂಚಿಸಿದ್ದರು.
ಆದರೆ, ರಾಜ್ಯ ಸರಕಾರ ಸಿಐಡಿಗೆ ಪ್ರಕರಣವನ್ನು ನೀಡಿದ ಪರಿಣಾಮ ನಗರದ ಪೊಲೀಸರಿಗೆ ತನಿಖೆ ನಡೆಸಲು ಸಾಧ್ಯವಾಗಲಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ತನಿಖೆಯನ್ನು ಕೈಗೆತ್ತಿಕೊಂಡ ಚೆನ್ನೈ ಸಿಬಿಐ ತಂಡ, ಕಳೆದ 3 ವರ್ಷಗಳಿಂದ ಹಲವು ಬಾರಿ ಕೊಡಗಿಗೆ ಆಗಮಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಿತ್ತು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.