SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

ಪರಿಷ್ಕರಣೆ ಆಗದ ಪಠ್ಯ ಕ್ರಮ, ಅಧಿಕಾರಿಗಳ ಬೇಜವಾಬ್ದಾರಿಯೂ ಕಾರಣ

Team Udayavani, May 14, 2024, 6:55 AM IST

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

ಬೆಂಗಳೂರು: ಸಿಸಿ ಕೆಮರಾ ಮತ್ತು ವೆಬ್‌ಕಾಸ್ಟಿಂಗ್‌ ವ್ಯವಸ್ಥೆಯಿಂದ ಎಸೆಸೆಲ್ಸಿ ಫ‌ಲಿತಾಂಶದಲ್ಲಿ ಶೇ.30 ಕುಸಿತ ಕಂಡಿದೆ ಎಂಬ ಅಧಿಕಾರಿಗಳ ಹೇಳಿಕೆ ಸಂಪೂರ್ಣ ಸುಳ್ಳು. ಫ‌ಲಿತಾಂಶ ಕುಸಿಯಲು ಇಲಾಖಾ ಅಧಿಕಾರಿಗಳ ಬೇಜವಾಬ್ದಾ ರಿಯೇ ಕಾರಣ ಎಂದು ಕರ್ನಾಟಕ ಖಾಸಗಿ ಶಾಲಾಆಡಳಿತ ಮಂಡಳಿಗಳು, ಬೋಧಕ ಮತ್ತು ಬೋಧಕೇತರ ಸಿಬಂದಿ ಸಮನ್ವಯ ಸಮಿತಿ (ಕೆಪಿಎಂಟಿಸಿಸಿ) ದೂರಿದೆ.

ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ಯಾಮ್ಸ್‌, ಕುಸ್ಮಾ, ಮಾಸ್‌, ಮಿಕ್ಸಾ, ಎಬಿಸಿ, ಸೆಕ್‌, ಕುಮ್ಸಾ, ಐಎಸ್‌ಎಫ್ಐ, ಟಿಯು ಮತ್ತಿತರ ಖಾಸಗಿ ಶಾಲಾ ಸಂಘಟನೆಗಳ ಪ್ರತಿನಿಧಿಗಳಾದ ಡಿ.ಶಶಿಕುಮಾರ್‌, ಸತ್ಯಮೂರ್ತಿ, ಆನಂದ್‌ ಬಾಬು, ಶೇಖರ್‌, ನಟೇಶ್‌, ಸುಪ್ರೀತ್‌ ಮುಂತಾದವರು, ಐದನೇ ತರಗತಿವರೆಗಿನ ಪಠ್ಯ ಕಳೆದ 18 ವರ್ಷಗಳಿಂದ ಪರಿಷ್ಕರಣೆ ಆಗಿಲ್ಲ. ಪಠ್ಯ ಅಪ್ರಸ್ತುತ ಆಗಿರುವ ಬಗ್ಗೆ ವರದಿಯಿದ್ದರೂ ಪರಿಷ್ಕರಣೆಗೆ ಕ್ರಮ ಕೈಗೊಂಡಿಲ್ಲ. 10 ವರ್ಷ ಪಾಠ ಓದಿ ಎಸೆಸೆಲ್ಸಿಯಲ್ಲಿ ಕನಿಷ್ಠ 25 ಅಂಕ ಪಡೆಯಲಾಗದ ಸ್ಥಿತಿಯಲ್ಲಿ ವಿದ್ಯಾರ್ಥಿಗಳಿರುವುದು ಅತ್ಯಂತ ಬೇಸರದ ಸಂಗತಿ ಎಂದರು.

ಶಿಕ್ಷಣ ಸಚಿವರು ಕೈಗೇ ಸಿಗುತ್ತಿಲ್ಲ
ಶಿಕ್ಷಣ ಇಲಾಖೆಗೆ ಸಚಿವರು ಇದ್ದಾರೋ ಇಲ್ಲವೋ ಅರ್ಥವಾಗುತ್ತಿಲ್ಲ. ಅಧಿಕಾರ ವಹಿಸಿಕೊಂಡಾಗಿನಿಂದ ಅವರು ಕೈಗೇ ಸಿಗುತ್ತಿಲ್ಲ. ನಮ್ಮ ದೂರವಾಣಿ ಕರೆಯನ್ನು ಸ್ವೀಕರಿಸುತ್ತಿಲ್ಲ. ಅಧಿಕಾರಿಯೊಬ್ಬರ ಜತೆ ಮಾತನಾಡಿ ಎಂದಷ್ಟೆ ಹೇಳುತ್ತಾರೆ. ಸಚಿವರು ಇನ್ನಾದರೂ ಭಾಗೀದಾರರ ಕೈಗೆ ಸಿಗುವಂತಾಗಬೇಕು ಎಂದು ಶಶಿಕುಮಾರ್‌ ಆಗ್ರಹಿಸಿದರು.

ಸಿಇಟಿ ಪ್ರಶ್ನೆಪತ್ರಿಕೆ ತಯಾರಿಯಲ್ಲಿ ಆಂಧ್ರ ಲಾಬಿ
ರಾಜ್ಯದ ಬೋರ್ಡ್‌ ಪರೀಕ್ಷೆ ಮತ್ತು ಸಿಇಟಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಅಕ್ರಮ ನಡೆಯುತ್ತಿದೆ. ಪೇಪರ್‌ ಸಿದ್ಧಗೊಳಿಸುವವರು ಕೋಚಿಂಗ್‌, ಟ್ಯೂಷನ್‌ ಸೆಂಟರ್‌ಗೆ ಹೋಗಿ ಪಾಠ ಮಾಡುತ್ತಿದ್ದಾರೆ. ಈ ಬಾರಿ ಸಿಇಸಿಯಲ್ಲಿ 50ಕ್ಕಿಂತ ಹೆಚ್ಚು ಔಟ್‌ ಆಫ್ ಸಿಲಬಸ್‌ ಪ್ರಶ್ನೆ ಕೇಳಿದ್ದಾರೆ ಎಂದು ವಿವಾದವಾಗಿತ್ತು. ಈ ಔಟ್‌ ಆಫ್ ಸಿಲಬಸ್‌ ಪ್ರಶ್ನೆಗಳು ಆಂಧ್ರಪ್ರದೇಶದ ಸಿಲಬಸ್‌ನಲ್ಲಿದ್ದವು ಎಂದು ಶಶಿಕುಮಾರ್‌ ಮತ್ತು ಸುಪ್ರೀತ್‌ ಆರೋಪಿಸಿದರು.

ಸಿಎಂಗೆ ಮನವಿ ಸಲ್ಲಿಕೆ
ಬಳಿಕ ಮುಖ್ಯಮಂತ್ರಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಖಾಸಗಿ ಶಾಲೆಗಳ ಸಂಘಟನೆಯ ಪ್ರತಿನಿಧಿಗಳು, ರಾಜ್ಯದ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಶೀಘ್ರವೇ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ ಎಂದು ಶಶಿಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.