Drought Relief; ಮತ್ತೆ ಕೇಂದ್ರ Vs ರಾಜ್ಯ ಬರ ಪರಿಹಾರ ಜಟಾಪಟಿ


Team Udayavani, Apr 7, 2024, 6:45 AM IST

Drought Relief; ಮತ್ತೆ ಕೇಂದ್ರ Vs ರಾಜ್ಯ ಬರ ಪರಿಹಾರ ಜಟಾಪಟಿ

ಬೆಂಗಳೂರು: ರಾಜ್ಯ ಬರ ಪರಿಹಾರಕ್ಕೆ ಸಂಬಂಧಿಸಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಡುವೆ ಮತ್ತೆ ವಾಗ್ಯುದ್ಧ ಆರಂಭವಾಗಿದೆ.

ಶನಿವಾರ ಬೆಂಗಳೂರಿನಲ್ಲಿ ತುರುಸಿನ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ರಾಜ್ಯ ಸರಕಾರ ವಾದಿಸುತ್ತಿರುವ ವಿಶೇಷ ಅನುದಾನ, ಮಧ್ಯಾಂತರ ಪರಿಹಾರಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನೊಂದೆಡೆ, ಈ ಬಗ್ಗೆ ಚರ್ಚಿಸಲು ಬಹಿರಂಗ ಸವಾಲು ಹಾಕಿದ್ದ ಸಚಿವ ಕೃಷ್ಣ ಬೈರೇಗೌಡ, ಅನ್ಯಾಯ ಸರಿಪಡಿಸಿ ಎಂದು ಕೇಳಿದರೆ ಕೇಂದ್ರ ಸರಕಾರ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ನಿರ್ಮಲಾ ಹೇಳಿದ್ದೇನು?
1. ರಾಜ್ಯಕ್ಕೆ ಬರಪರಿಹಾರ ಬಿಡುಗಡೆ ಮಾಡುವುದಕ್ಕೆ ಕೇಂದ್ರ ಸರಕಾರ ಉದ್ದೇಶಪೂರ್ವಕ ವಿಳಂಬ ಮಾಡಿಲ್ಲ.

2.ಎನ್‌ಡಿಆರ್‌ಎಫ್ ಕಾಯ್ದೆಯ ಪ್ರಕಾರ ಬರ ವಿಷಯದಲ್ಲಿ ಮಧ್ಯಾಂತರ ಪರಿಹಾರ ಅಥವಾ ವಿಶೇಷ ಅನುದಾನ ನೀಡುವುದಕ್ಕೆ ಅವಕಾಶವಿಲ್ಲ

3.”ನನ್ನ ತೆರಿಗೆ, ನನ್ನ ಹಕ್ಕು’ ಎಂದು ಬೆಂಗಳೂರಿಗರು ತಮ್ಮ ತೆರಿಗೆ ಪಾಲನ್ನು ಬೆಂಗಳೂರಿಗೆ ಮಾತ್ರ ಕೇಳಲಾರಂಭಿಸಿದರೆ ಕಲ್ಯಾಣ ಕರ್ನಾಟಕದ ಪರಿಸ್ಥಿತಿ ಏನಾದೀತು?

4.ರಾಜ್ಯಕ್ಕೆ 5 ಸಾವಿರ ಕೋಟಿ ರೂ. ಪರಿಹಾರ ನೀಡುವಂತೆ 15ನೇ ಹಣಕಾಸು ಆಯೋಗದ ಮಧ್ಯಾಂತರ ವರದಿಯಲ್ಲಿ ಹೇಳಲಾಗಿತ್ತು ಎಂಬ ರಾಜ್ಯ ಸರಕಾರದ ವಾದ ಅರ್ಧ ಸತ್ಯ. ಏಕೆಂದರೆ ಕೇಂದ್ರ ಸರಕಾರವು ಮಧ್ಯಾಂತರ ವರದಿಯನ್ನು ಒಪ್ಪಿಕೊಂಡೇ ಇಲ್ಲ.

5.ಬಂಡವಾಳ ವೆಚ್ಚಕ್ಕೆ ಹಣಕಾಸು ಆಯೋಗ ಎಂದಿಗೂ ಅನುದಾನ ನೀಡಿದ ಉದಾಹರಣೆ ಇಲ್ಲ. ಅದಾಗಿಯೂ ರಾಜ್ಯಕ್ಕೆ 50 ವರ್ಷಗಳಿಗೆ ಅನ್ವಯವಾಗುವಂತೆ 8,035 ಕೋ.ರೂ.ಗಳಷ್ಟು ಬಡ್ಡಿರಹಿತ ಅನುದಾನ ನೀಡಲಾಗಿದೆ.

6.ನಾವು ದೇಶದ ಹಿತದಲ್ಲಿ ತೆರಿಗೆ ಕಟ್ಟುತ್ತೇವೆ ಎಂಬುದನ್ನು ನೆನಪಿಡಬೇಕು. “ನನ್ನ ತೆರಿಗೆ, ನನ್ನ ಹಕ್ಕು’ ಎಂದು ಅನರ್ಥ ಕಾರಿಯಾಗಿ ಮಾತನಾಡಿದರೆ ಅದು ದೇಶದ ಹಿತವಲ್ಲ.

ಕೃಷ್ಣ ಬೈರೇಗೌಡ ವಾದವೇನು?
1. ನಾವು ನಮಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಎಂದು ಕೇಳಿದರೆ ಕೇಂದ್ರ ಸರಕಾರ ಅವಮಾನ ಮಾಡುತ್ತಿದೆ.

2.ರಾಜ್ಯಗಳಿಗೆ ವ್ಯಾಟ್‌ ವಿಧಿಸುವ ಅಧಿಕಾರವಿದ್ದಾಗ ಕರ್ನಾ ಟಕವು ತೆರಿಗೆ ಸಂಗ್ರಹದಲ್ಲಿ ವಾರ್ಷಿಕವಾಗಿ ಸರಾಸರಿ
ಶೇ. 15ರಷ್ಟು ಪ್ರಗತಿ ದಾಖಲಿಸಿತ್ತು. ಆದರೆ ಜಿಎಸ್‌ಟಿ ಬಂದ ಬಳಿಕ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ವಾರ್ಷಿಕ ನಷ್ಟವಾಗಿದೆ.

3.ಕೇಂದ್ರ ಸರಕಾರದ ನೀತಿಗಳಿಂದಾಗಿ ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 1.85 ಲಕ್ಷ ಕೋಟಿ ರೂ. ಕೈತಪ್ಪಿದೆ. ಪ್ರತೀ ವರ್ಷ ಸುಮಾರು 52 ಸಾವಿರ ಕೋಟಿ ರೂ. ನಷ್ಟ ಅನುಭವಿಸುವಂತಾಗಿದೆ.

4.15ನೇ ಹಣಕಾಸು ಆಯೋಗವು ಶೇ. 41 ತೆರಿಗೆ ಪಾಲನ್ನು ನೀಡಿದ್ದರೂ ವಾಸ್ತವದಲ್ಲಿ ಶೇ. 30ರಷ್ಟು ಮಾತ್ರ ತೆರಿಗೆ ಪಾಲನ್ನು ಕೇಂದ್ರ ಸರಕಾರ ನೀಡಿದೆ.

5.ಕೇಂದ್ರ ಸರಕಾರ ಪುರಸ್ಕೃತ ಯೋಜನೆಗಳಿಗೆ ಹಣ ನೀಡುತ್ತಿದ್ದೇವೆ ಎಂದು ವಾದಿಸಲಾಗುತ್ತಿದೆ. ಆದರೆ ಕೇಂದ್ರ ಸರಕಾರದ ಯೋಜನೆಗಳಿಗೆ ಶೇ. 50ಕ್ಕಿಂತ ಹೆಚ್ಚು ಅನುದಾನವನ್ನು ರಾಜ್ಯ ಸರಕಾರವೇ ಭರಿಸುತ್ತಿದೆ.

6.ನನಗೆ ರಾಜ್ಯದ ಹಿತದೃಷ್ಟಿಯೇ ಮುಖ್ಯ. ಇದರಲ್ಲಿ ರಾಜ ಕೀಯ ಇಲ್ಲ. ಸಚಿವೆ ನಿರ್ಮಲಾ ಮತ್ತು ನನ್ನ ಮಧ್ಯೆ ಉತ್ತಮ ವಿಶ್ವಾಸವಿದೆ. ಇಲ್ಲಿ ವೈಯಕ್ತಿಕ ವಾದ- ವ್ಯಾಜ್ಯ ಇಲ್ಲ.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.